![Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು](https://www.udayavani.com/wp-content/uploads/2024/12/shivamogga-2-415x246.jpg)
ಮಹಾಲಕ್ಷ್ಮೀ-ಕರಗಾಂವ ಏತ ನೀರಾವರಿ ಶೀಘ್ರ ಆರಂಭ: ಡಿಕೆಶಿ
Team Udayavani, Jun 23, 2019, 9:45 AM IST
![bg-tdy-2..](https://www.udayavani.com/wp-content/uploads/2019/06/bg-tdy-2..-16-620x255.jpg)
ಚಿಕ್ಕೋಡಿ: ಮಹಾಲಕ್ಷ್ಮೀ ಮತ್ತು ಕರಗಾಂವ ಏತ ನೀರಾವರಿ ಯೋಜನೆಗೆ ಅನುದಾನ ಬಿಡುಗಡೆ ಮಾಡಬೇಕೆಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಸಚಿವ ಡಿ.ಕೆ.ಶಿವಕುಮಾರಗೆ ಮನವಿ ಮಾಡಿದರು.
ಚಿಕ್ಕೋಡಿ: ತಾಲೂಕಿನ ರೈತರ ಬಹುದಿನಗಳ ಬೇಡಿಕೆಯಾದ ಮಹಾಲಕ್ಷ್ಮೀ ಮತ್ತು ಕರಗಾಂವ ಏತ ನೀರಾವರಿ ಯೋಜನೆಗೆ ಶೀಘ್ರ ಅನುದಾನ ಒದಗಿಸಿ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಭರವಸೆ ನೀಡಿದರು.
ನಗರಕ್ಕೆ ಶನಿವಾರ ಆಗಮಿಸಿದ ವೇಳೆಯಲ್ಲಿ ಪ್ರವಾಸಿ ಮಂದಿರದಲ್ಲಿ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಹಾಗೂ ಹಿರಿಯ ಧುರೀಣ ಬಿ.ಆರ್.ಸಂಗಪ್ಪಗೋಳ ಅವರ ಮನವಿಗೆ ಸ್ಪಂದಿಸಿ ಅವರು ಮಾತನಾಡಿದರು.
ಸಂಗಪ್ಪಗೋಳ ಮಾತನಾಡಿ, ಚಿಕ್ಕೋಡಿ ತಾಲೂಕಿನ ಪಶ್ಚಿಮ ಭಾಗದ 16 ಹಳ್ಳಿಗಳಿಗೆ ನೀರಾವರಿ ಯೋಜನೆ ಕಲ್ಪಿಸುವ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಈಗಾಗಲೇ ಈ ಯೋಜನೆಗೆ ಸರ್ವೇ ಕಾರ್ಯ ಮುಕ್ತಾಯವಾಗಿ ನೀರಿನ ಹಂಚಿಕೆಯಾಗಿದೆ. 375 ಕೋಟಿ ಅನುದಾನ ಬಿಡುಗಡೆ ಮಾತ್ರ ಬಾಕಿ ಉಳಿದುಕೊಂಡಿದೆ. ಕೂಡಲೇ ಸಚಿವರು ಈ ಯೋಜನೆಗೆ ಹೆಚ್ಚಿನ ಗಮನ ಹರಿಸಿ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ಮುಖ್ಯಸಚೇತಕ ಗಣೇಶ ಹುಕ್ಕೇರಿ, ರಾಯಬಾಗ ಶಾಸಕ ದುರ್ಯೋಧನ ಐಹೋಳೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ಕಲ್ಲಪ್ಪ ಮಗೇನ್ನವರ, ಎಚ್.ಎಸ್.ನಸಲಾಪೂರೆ, ರವೀಂದ್ರ ಮಿರ್ಜೆ, ಅನೀಲ ಪಾಟೀಲ ಮುಂತಾದವರು ಇದ್ದರು.
ಟಾಪ್ ನ್ಯೂಸ್
![Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು](https://www.udayavani.com/wp-content/uploads/2024/12/shivamogga-2-415x246.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್](https://www.udayavani.com/wp-content/uploads/2024/12/12-18-150x90.jpg)
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
![Sathish-jarakhoili](https://www.udayavani.com/wp-content/uploads/2024/12/Sathish-jarakhoili-1-150x90.jpg)
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
![Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ](https://www.udayavani.com/wp-content/uploads/2024/12/ct-ravi-4-150x84.jpg)
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
![Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ](https://www.udayavani.com/wp-content/uploads/2024/12/c-t-ravi-1-150x87.jpg)
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
![Belagavi: C.T. Ravi arrest case shifted to Bengaluru](https://www.udayavani.com/wp-content/uploads/2024/12/ct-ravi-3-150x87.jpg)
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು](https://www.udayavani.com/wp-content/uploads/2024/12/shivamogga-2-150x89.jpg)
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
![Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು](https://www.udayavani.com/wp-content/uploads/2024/12/plane1-150x90.jpg)
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
![BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!](https://www.udayavani.com/wp-content/uploads/2024/12/11-27-150x90.jpg)
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
![1-chali](https://www.udayavani.com/wp-content/uploads/2024/12/1-chali-150x101.jpg)
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
![Hemmadi-Sevantige](https://www.udayavani.com/wp-content/uploads/2024/12/Hemmadi-Sevantige-150x90.jpg)
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.