Maharashtra ಕನ್ನಡ ಶಿಕ್ಷಕರ ನೇಮಕವೇ ಆಗಿಲ್ಲ !ಚಕಾರ ಎತ್ತದ ಕರ್ನಾಟಕ ಗಡಿಯ ಶಾಸಕರು

ಕರ್ನಾಟಕ ಗಡಿಭಾಗದಲ್ಲಿ ಕನ್ನಡ ಶಾಲೆಗಳನ್ನು ಮುಚ್ಚಿಸಲು ಮಹಾರಾಷ್ಟ್ರ ಸರಕಾರದ ವ್ಯವಸ್ಥಿತ ಕುತಂತ್ರ: ಆರೋಪ

Team Udayavani, Jun 20, 2024, 6:25 AM IST

kaMaharashtra ಕನ್ನಡ ಶಿಕ್ಷಕರ ನೇಮಕವೇ ಆಗಿಲ್ಲ !ಚಕಾರ ಎತ್ತದ ಕರ್ನಾಟಕ ಗಡಿಯ ಶಾಸಕರುMaharashtra ಕನ್ನಡ ಶಿಕ್ಷಕರ ನೇಮಕವೇ ಆಗಿಲ್ಲ !ಚಕಾರ ಎತ್ತದ ಕರ್ನಾಟಕ ಗಡಿಯ ಶಾಸಕರುMaharashtra ಕನ್ನಡ ಶಿಕ್ಷಕರ ನೇಮಕವೇ ಆಗಿಲ್ಲ !ಚಕಾರ ಎತ್ತದ ಕರ್ನಾಟಕ ಗಡಿಯ ಶಾಸಕರು

ಬೆಳಗಾವಿ: ಕರ್ನಾಟಕದ ಗಡಿಭಾಗದಲ್ಲಿ ರುವ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುತ್ತಿರುವ ಮಹಾರಾಷ್ಟ್ರ ಸರಕಾರವು ಸದ್ದಿಲ್ಲದೆ ಇನ್ನೊಂದು ಪಿತೂರಿ ಮಾಡುತ್ತಿದೆ ಎಂದು ಆರೋಪಿಸ ಲಾಗಿದೆ. ಅದು ಕಳೆದ 15 ವರ್ಷಗಳಿಂದ ಕನ್ನಡ ಶಾಲೆಗಳಿಗೆ ಶಿಕ್ಷಕರ ನೇಮಕಾತಿಯನ್ನೇ ಮಾಡಿಲ್ಲ ಎನ್ನುವ ಸಂಗತಿ ಈಗ ಹೊರಬಿದ್ದಿದೆ. ಉರ್ದು ಭಾಷಾ ಶಿಕ್ಷಕರ ನೇಮಕಾತಿ ಮಾಡಿದ್ದು, ಕನ್ನಡ ಶಾಲೆಗಳಿಗೆ ಮಾತ್ರ ಅರ್ಹ ಶಿಕ್ಷಕರಿದ್ದರೂ ಮಹಾರಾಷ್ಟ್ರ ಸರಕಾರ ಅವರನ್ನು ಪರಿಗಣಿಸಿಲ್ಲ.

15 ವರ್ಷಗಳಿಂದ ಕನ್ನಡ ಶಾಲೆಗಳಿಗೆ ಶಿಕ್ಷಕರ ನೇಮಕಾತಿ ಮಾಡಿಲ್ಲ. ಇದು ಗಡಿ ಭಾಗದ ಕನ್ನಡ ಶಾಲೆಗಳನ್ನು ಶಾಶ್ವತವಾಗಿ ಮುಚ್ಚುವ ಹುನ್ನಾರದ ಒಂದು ಭಾಗ ಎಂಬುದು ಅಲ್ಲಿನ ಕನ್ನಡ ಹೋರಾಟಗಾರರ ಅಸಮಾಧಾನ.
ಕರ್ನಾಟಕದಲ್ಲಿ ಮರಾಠಿ ಶಾಲೆಗಳಿಗೆ ಸೌಲಭ್ಯ ಗಳನ್ನು ಕಲ್ಪಿಸುತ್ತಿಲ್ಲ, ಶಿಕ್ಷಕರ ಕೊರತೆ ಇದೆ ಎಂದೆಲ್ಲ ಆರೋಪ ಮಾಡುವ ಮಹಾರಾಷ್ಟ್ರ ಸರಕಾರವು ತನ್ನ ಗಡಿಯ ಸರಕಾರಿ ಕನ್ನಡ ಶಾಲೆಗಳ ಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಚಕಾರ ಎತ್ತುತ್ತಿಲ್ಲ. ಕನ್ನಡ ಶಾಲೆಗಳಿಗೆ ಮರಾಠಿ ಮಾಧ್ಯಮ ಶಿಕ್ಷಕರ ನೇಮಕ ಏಕೆ ಎನ್ನುವ ಪ್ರಶ್ನೆಗೆ ಅದರ ಬಳಿ ಉತ್ತರ ಇಲ್ಲ.

ಗಡಿಭಾಗದ ಕನ್ನಡ ಶಾಲೆಗಳ ಶಿಕ್ಷಕರ ನೇಮಕಾತಿ ವಿಷಯ ಸಾಕಷ್ಟು ವಿವಾದಕ್ಕೆ ಎಡೆಮಾಡಿಕೊಟ್ಟಿದ್ದರೂ ಮಹಾರಾಷ್ಟ್ರ ಗಡಿಯ ಕರ್ನಾಟಕದ ಜಿಲ್ಲೆಗಳ ಶಾಸಕರ್ಯಾರೂ ಇದರ ಬಗ್ಗೆ ಆಕ್ಷೇಪ ಎತ್ತಿಲ್ಲ. ಸರಕಾರದ ಮೇಲೆ ಒತ್ತಡ ತರುವ ಕೆಲಸಕ್ಕೆ ಮುಂದಾಗಿಲ್ಲ.

ಶಿಕ್ಷಕರ ಸಮಸ್ಯೆ ಹೊಸದಲ್ಲ
ಮಹಾರಾಷ್ಟ್ರದ ಸಾಂಗ್ಲಿ ಮತ್ತು ಸೊಲ್ಲಾಪುರ ಜಿಲ್ಲೆಗಳಲ್ಲಿ ಸುಮಾರು 40 ಸಾವಿರಕ್ಕಿಂತ ಹೆಚ್ಚಿನ ಸಂಖ್ಯೆಯ ಮಕ್ಕಳು ಕನ್ನಡ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿದ್ದು, ಈ ಪ್ರದೇಶಗಳಲ್ಲಿ 300ಕ್ಕೂ ಹೆಚ್ಚು ಕನ್ನಡ ಶಾಲೆಗಳಿವೆ.

ಆದರೆ ಈ ಶಾಲೆಗಳಿಗೆ ಹಲವಾರು ವರ್ಷಗಳಿಂದ ಕನ್ನಡ ಶಿಕ್ಷಕರ ನೇಮಕಾತಿ ಮಾಡಿಲ್ಲ. ಇದರ ಬಗ್ಗೆ ಕನ್ನಡ ಹೋರಾಟಗಾರರು ನಿರಂತರ ಆಗ್ರಹ ಮಾಡುತ್ತ ಬಂದಿದ್ದರೂ ಅದಕ್ಕೆ ಸೊಪ್ಪು ಹಾಕದ ಮಹಾರಾಷ್ಟ್ರ ಸರಕಾರವು ಈಗ ಏಕಾಏಕಿ ಕನ್ನಡ ಬಾರದ ಸುಮಾರು 15 ಶಿಕ್ಷಕರನ್ನು ಕನ್ನಡ ಮಾಧ್ಯಮ ಶಾಲೆಗಳಿಗೆ ನೇಮಕ ಮಾಡಿದೆ.
ಕನ್ನಡಿಗರು ಹೆಚ್ಚಿನ ಸಂಖ್ಯೆ ಯಲ್ಲಿರುವ ಭಾಷಾ ಅಲ್ಪಸಂಖ್ಯಾಕ ಪ್ರದೇಶಗಳಾದ ಸಾಂಗ್ಲಿ ಹಾಗೂ ಸೊಲ್ಲಾಪುರ ಜಿಲ್ಲೆಯ ದಕ್ಷಿಣ ಭಾಗ ಜತ್‌, ಅಕ್ಕಲಕೋಟೆ ತಾಲೂಕುಗಳು ಕಡ್ಡಾಯ ಮರಾಠಿ ಭಾಷಾ ಕಲಿಕೆಯಿಂದ ವಿನಾಯಿತಿ ಪಡೆದಿದ್ದರೂ ಸರಕಾರ ಮಾತ್ರ ಇದನ್ನು ಸಂಪೂರ್ಣ ಕಡೆಗಣಿಸಿದೆ.

ಸಂವಿಧಾನ ಬದ್ಧ
ಹಕ್ಕು ಏನು?
ಸಂವಿಧಾನದ ಅನುಚ್ಛೇದ 347, 350 ಮತ್ತು 350ಎ ಪ್ರಕಾರ ಭಾಷಾ ಅಲ್ಪಸಂಖ್ಯಾಕ ಪ್ರದೇಶಗಳ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಭಾಷಾ ಅಲ್ಪಸಂಖ್ಯಾಕ ವಿದ್ಯಾರ್ಥಿಗಳಿಗೆ ತಮ್ಮ ಮಾತೃ ಭಾಷೆಯನ್ನು ಕಲಿಯುವುದನ್ನು ನಿರ್ಬಂಧಿಸುವಂತಿಲ್ಲ ಅಥವಾ ಮಾತೃ ಭಾಷೆ ಹೊರತು ಅನ್ಯ ಭಾಷೆ ಕಲಿಯಲು ಒತ್ತಾಯಿಸುವಂತಿಲ್ಲ. ಅದರೆ ಇದಾವುದೂ ಇಲ್ಲಿ ಪಾಲನೆಯಾಗುತ್ತಿಲ್ಲ ಎಂಬುದು ಸಾಂಗ್ಲಿ ಮತ್ತು ಜತ್‌ ಭಾಗದ ಕನ್ನಡ ಹೋರಾಟಗಾರರ ಆರೋಪ.

ಮನವಿ
ಹಾಗೆಂದು ಗಡಿ ಭಾಗದ ಕನ್ನಡ ಶಾಲೆಗಳ ದುಸ್ಥಿತಿ ಹಾಗೂ ಕನ್ನಡ ಶಿಕ್ಷಕರ ಕೊರತೆ ಬಗ್ಗೆ ಕರ್ನಾಟಕ ಸರಕಾರಕ್ಕೆ ಗೊತ್ತಿಲ್ಲ ಎನ್ನುವಂತಿಲ್ಲ. ಸರಕಾರದ ಮುಂದೆ ಸಮಸ್ಯೆಗಳ ಸಮಗ್ರ ವರದಿಗಳೇ ಇವೆ. ಕನ್ನಡ ಹೋರಾಟಗಾರರ ಮನವಿಗಳ ಗಂಟೇ ಇದೆ. ಆದರೆ ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಇಚ್ಛಾಶಕ್ತಿ ಇಲ್ಲ ಅಷ್ಟೇ.
ಕರ್ನಾಟಕದ ಗಡಿಭಾಗದಲ್ಲಿರುವ ಮರಾಠಿ ಶಾಲೆಗಳಿಗೆ ಕರ್ನಾಟಕ ಸರಕಾರ ಎಲ್ಲ ಸೌಲಭ್ಯಗಳನ್ನು ನೀಡುತ್ತಿದೆ. ಮರಾಠಿ ಶಿಕ್ಷಕರನ್ನು ನೇಮಿಸುವ ರಾಜ್ಯ ಸರಕಾರವು ಇದೇ ಮಾರ್ಗವನ್ನು ನೀವೂ ಅನುಸರಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಏಕೆ ತಾಕೀತು ಮಾಡುತ್ತಿಲ್ಲ? ಎರಡೂ ಸರಕಾರಗಳು ಪರಸ್ಪರ ಶಾಶ್ವತ ಒಪ್ಪಂದ ಮಾಡಿಕೊಳ್ಳಲು ಏಕೆ ಆಸಕ್ತಿ ತೋರಿಸುತ್ತಿಲ್ಲ ಎಂಬ ಪ್ರಶ್ನೆಗಳು ಎಲ್ಲರನ್ನು ಕಾಡುತ್ತಿದೆ.

ಕಳೆದ 15 ವರ್ಷ ಗಳಿಂದ ಉದ್ದೇಶ ಪೂರ್ವಕ ವಾಗಿ ಕನ್ನಡ ಶಿಕ್ಷಕರನ್ನು ನೇಮಕ ಮಾಡದ ಮಹಾರಾಷ್ಟ್ರ ಸರಕಾರ ಹಂತಹಂತವಾಗಿ ಕನ್ನಡ ಶಾಲೆಗಳನ್ನು ಮುಚ್ಚುವ ಕ್ರಮಕ್ಕೆ ಮುಂದಾಗಿದೆ. ಕನ್ನಡ ಶಾಲೆಗಳಿಗೆ ಉರ್ದು ಶಿಕ್ಷಕರನ್ನು ನೇಮಕ ಮಾಡಿ ಕನ್ನಡ ಕಲಿತವರಿಗೆ ಬಹಳ ಅನ್ಯಾಯ ಮಾಡಿದೆ. ಕರ್ನಾಟಕ ಸರಕಾರ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಗಡಿ ಭಾಗದ ಕನ್ನಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ.
– ಸೋಮಶೇಖರ ಜಾಮಶೆಟ್ಟಿ,
ಕಸಾಪ ಮಹಾರಾಷ್ಟ್ರ ಘಟಕದ ಅಧ್ಯಕ್ಷರು

ಸಾಂಗ್ಲಿ ಮತ್ತು ಸೊಲ್ಲಾಪುರ ಜಿಲ್ಲೆಗಳ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಮಹಾರಾಷ್ಟ್ರ ಸರಕಾರವು ಸಂವಿಧಾನದ ಅನುಚ್ಛೇದ 14, 29, 30, 347, 350 ಮತ್ತು 350ಎ ಅನ್ನು ಉಲ್ಲಂಘಿಸಿದೆ. ಇದನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಇದರ ಬಗ್ಗೆ ಮಹಾರಾಷ್ಟ್ರ ಸರಕಾರದ ಗಮನಕ್ಕೆ ತರುವಂತೆ ನಮ್ಮ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿದ್ದೇನೆ.
– ಸೋಮಶೇಖರ ಬೇವಿನಮರದ,
ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು

ಮಹಾರಾಷ್ಟ್ರದಲ್ಲಿ ಕನ್ನಡ ಕಲಿಸುವ ಶಿಕ್ಷಕರೇ ಇಲ್ಲ. ಅಲ್ಲಿನ ಸರಕಾರ 10 ವರ್ಷಗಳ ಹಿಂದೆಯೇ ಡಿಇಡಿ ಕೋರ್ಸ್‌ಗಳನ್ನು ಬಂದ್‌ ಮಾಡಿದೆ. ಹೀಗಾಗಿ ಅಲ್ಲಿ ಕನ್ನಡ ಶಿಕ್ಷಕರೇ ಇಲ್ಲ. ಅಲ್ಲಿನ ಮಕ್ಕಳು ಅನಿವಾರ್ಯವಾಗಿ ಮರಾಠಿ ಕಲಿಯಬೇಕು. ಈ ಬಗ್ಗೆ ಮುಖ್ಯ ಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ.
ಸತೀಶ ಜಾರಕಿಹೊಳಿ,
ಲೋಕೋಪಯೋಗಿ ಸಚಿವ

- ಕೇಶವ ಆದಿ

ಟಾಪ್ ನ್ಯೂಸ್

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

belagvi

Belagavi; ರೈತರಿಗೆ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.