ಬೆಳಗಾವಿ ಪಾಲಿಕೆಗೆ ಕನ್ನಡಿಗ ಮೇಯರ್‌


Team Udayavani, Mar 2, 2018, 6:00 AM IST

27.jpg

ಬೆಳಗಾವಿ: ಮರಾಠಿ ಭಾಷಿಕ ಸದಸ್ಯರ ಬಹುಮತವಿದ್ದರೂ ಮೀಸಲು ಭಾಗ್ಯ ಒಲಿದು ಬಂದಿದ್ದರಿಂದ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡಿಗರಾದ ಬಸಪ್ಪ ಸಿದ್ದಪ್ಪ ಚಿಕ್ಕಲದಿನ್ನಿ ಮೇಯರ್‌ ಆಗಿ ಅವಿರೋಧ ಆಯ್ಕೆಯಾಗಿದ್ದಾರೆ. ಮರಾಠಿ ಭಾಷಿಕ ಸದಸ್ಯೆಯಾಗಿದ್ದರೂ ಮೂಲತಃ ಕನ್ನಡದವರಾದ ಮಧುಶ್ರೀ ಅಪ್ಪಾಸಾಹೇಬ ಪೂಜಾರಿ 8 ಮತಗಳ ಅಂತರದಿಂದ ಉಪಮೇಯರ್‌
ಆಗಿ ಆಯ್ಕೆಯಾದರು. ಪಾಲಿಕೆ ಸಭಾಂಗಣದಲ್ಲಿ ಗುರುವಾರ ನಡೆದ 20ನೇ ಅವಧಿಯ ಮೇಯರ್‌-ಉಪಮೇಯರ್‌ ಚುನಾವಣೆಯಲ್ಲಿ ಪ್ರಾದೇಶಿಕ ಆಯುಕ್ತ ಪಿ.ಎ. ಮೇಘನ್ನವರ ಈ ಇಬ್ಬರ ಹೆಸರನ್ನು ಘೋಷಿಸಿದರು. ಮೇಯರ್‌ ಸ್ಥಾನ ಎಸ್‌ಟಿ ಮೀಸಲು ಹಾಗೂ ಉಪಮೇಯರ್‌ ಸ್ಥಾನಕ್ಕೆ ಪ್ರವರ್ಗ ಆ ಮಹಿಳೆಗೆ ನಿಗದಿ ಪಡಿಸಲಾಗಿತ್ತು. ಎಸ್‌ಟಿ ಮೀಸಲು ಕನ್ನಡ ಸದಸ್ಯರಲ್ಲಿ ಬಸಪ್ಪ ಚಿಕ್ಕಲದಿನ್ನಿ ಹಾಗೂ ಸುಚೇತಾ ಗಂಡಗುದರಿ ಇದ್ದರು.

ಚಿಕ್ಕಲದಿನ್ನಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾಯಿತು. ಉಪಮೇಯರ್‌ ಸ್ಥಾನಕ್ಕೆ ಐವರು ನಾಮಪತ್ರ ಸಲ್ಲಿಕೆ ಮಾಡಿದ್ದು, ಇಬ್ಬರು ಮರಾಠಿ ಭಾಷಿಕ ಸದಸ್ಯರು ಹಿಂಪಡೆದರು. ನಂತರ ಕನ್ನಡದ ಶಾಂತಾ ಉಪ್ಪಾರ ಹಾಗೂ ಮರಾಠಿಯ ಮಧುಶ್ರೀ ಪೂಜಾರಿ ಮಾತ್ರ ಕಣದಲ್ಲಿ ಉಳಿದರು. ಹೀಗಾಗಿ ಮತದಾನ ನಡೆದು ಶಾಂತಾ 23 ಮತ ಪಡೆದರೆ, ಮಧುಶ್ರೀ 31 ಮತ ಪಡೆಯುವ ಮೂಲಕ ಗೆಲುವು ಸಾಧಿಸಿದರು. ಮತ ಚಲಾಯಿಸಬೇಕಾದ ಸಂಸದರಾದ ಸುರೇಶ ಅಂಗಡಿ, ಪ್ರಕಾಶ ಹುಕ್ಕೇರಿ, ಶಾಸಕರಾದ ಸತೀಶ ಜಾರಕಿಹೊಳಿ, ಫಿರೋಜ ಸೇಠ ಹಾಗೂ ಸಂಜಯ ಪಾಟೀಲ ಗೈರು ಹಾಜರಾಗಿದ್ದರು. 

ಟಾಪ್ ನ್ಯೂಸ್

1-rain

Rain; ಮಳೆಯಬ್ಬರಕ್ಕೆ ಹಲವು ರಾಜ್ಯಗಳು ಹೈರಾಣ: ಜನಜೀವನ ಅಸ್ತವ್ಯಸ್ತ

1-asree

Mumbai: ರೋಗಿಗಳ ದಾಖಲೆ ಪತ್ರಗಳಿಂದ ಪೇಪರ್‌ ಪ್ಲೇಟ್‌!: ವಿಡಿಯೋ ವೈರಲ್‌

robbers

Uttar Pradesh ನಕಲಿ ವಿಮೆ ಜಾಲಕ್ಕೆ ಕರ್ನಾಟಕ ನಂಟು!: 11 ಮಂದಿ ಸೆರೆ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1-rain

Rain; ಮಳೆಯಬ್ಬರಕ್ಕೆ ಹಲವು ರಾಜ್ಯಗಳು ಹೈರಾಣ: ಜನಜೀವನ ಅಸ್ತವ್ಯಸ್ತ

1-asree

Mumbai: ರೋಗಿಗಳ ದಾಖಲೆ ಪತ್ರಗಳಿಂದ ಪೇಪರ್‌ ಪ್ಲೇಟ್‌!: ವಿಡಿಯೋ ವೈರಲ್‌

robbers

Uttar Pradesh ನಕಲಿ ವಿಮೆ ಜಾಲಕ್ಕೆ ಕರ್ನಾಟಕ ನಂಟು!: 11 ಮಂದಿ ಸೆರೆ

sebi

Adani ವರದಿ 2 ತಿಂಗಳ ಮುಂಚೆ ಹಂಚಿಕೊಂಡಿದ್ದ ಹಿಂಡನ್‌ಬರ್ಗ್‌: ಸೆಬಿ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.