ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ವಿವಿಧ ಕಾಮಗಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ಶಂಕುಸ್ಥಾಪನೆ


Team Udayavani, Oct 8, 2024, 2:34 PM IST

3-belagavi

ಬೆಳಗಾವಿ: ಚನ್ನಮ್ಮನ ಕಿತ್ತೂರಿನಲ್ಲಿ ಆ.8ರ ಮಂಗಳವಾರ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ವಿವಿಧ ಕಾಮಗಾರಿಗಳಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಶಂಕುಸ್ಥಾಪನೆ ನೆರವೇರಿಸಿದರು.

30 ಕೋಟಿ ವೆಚ್ಚದಲ್ಲಿ ವಿದ್ಯುನ್ಮಾನ ಮಾದರಿ ಉದ್ಯಾನವನ ನಿರ್ಮಾಣ ಮಾಡಲಾಗುವುದಾಗಿ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ಭವಿಷ್ಯದಲ್ಲಿ ಕಿತ್ತೂರು ನಾಡಿನ ಇತಿಹಾಸ ಉಳಿಸಲು ಕಿತ್ತೂರು ಕೋಟೆಯ ಐತಿಹಾಸಿಕ ಅವಶೇಷಗಳ ಸಂರಕ್ಷಿಸಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಕಿತ್ತೂರು ಕೋಟೆಯನ್ನು ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.

30 ಕೋಟಿ ಅನುದಾನದಲ್ಲಿ ಹೊಸ ತಂತ್ರಜ್ಞಾನ ಬಳಕೆಯ ಮೂಲಕ ವಿದ್ಯುನ್ಮಾನ ಮಾದರಿಯ ಉದ್ಯಾನವನ (ಥೀಮ್ ಪಾರ್ಕ್) ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಕೋಟೆಯ ಮಹಾದ್ವಾರ, ಗೋಡೆಗಳು ಸೇರಿದಂತೆ ವಿವಿಧ ಅವಶೇಷಗಳನ್ನು ಸಂರಕ್ಷಿಸಲು 12.11 ಕೋಟಿ ರೂ ಹಾಗೂ ವಿವಿಧ ಕಾಮಗಾರಿಗಳಿಗೆ 2.4 ಕೋಟಿ ಅನುದಾನ ಬಳಕೆಯಾಗಲಿದೆ. ಕಳೆದ 1 ವರ್ಷದಿಂದ ಈ ಭಾಗದ ಶಾಸಕರ ಬೇಡಿಕೆಯಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಟೆ ಅಭಿವೃದ್ಧಿಗೆ ಕೂಡಲೇ ಅನುದಾನ ಮಂಜೂರು ಮಾಡಿದ್ದಾರೆ ಎಂದರು.

ಕೋಟೆಯ ಕೆಲವು ಭಾಗ ಶೀಥಿಲಗೊಂಡಿದ್ದು, ಇನ್ನಷ್ಟು ದುರಸ್ಥಿ ಕಾಮಗಾರಿಯ ಅವಶ್ಯಕತೆಯಿದೆ. ಕೋಟೆಯ ಕುಸಿದ ಗೋಡೆಗಳನ್ನು ನವೀಕರಿಸಿ ಕೋಟೆ ಅವಶೇಷಗಳ ಸಂರಕ್ಷಣೆಯ ಮೂಲಕ ಇತಿಹಾಸ ಉಳಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.

ಕಿತ್ತೂರಿನ 200 ವರ್ಷದ ವಿಜಯೋತ್ಸವದಲ್ಲಿ ಈ ಕಾಮಗಾರಿಗಳನ್ನು ಪೂರ್ಣಗೊಳಿಸುವುದು ಉದ್ದೇಶವಾಗಿತ್ತು. ಆದರೆ ಇನ್ನಷ್ಟು ಭದ್ರ ಕೆಲಸವಾಗಬೇಕು ಎಂಬುದು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಸಮಯ ತೆಗೆದುಕೊಂಡು ಕಾಮಗಾರಿಗಳನ್ನು ಪ್ರಾರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು.

ಕೋಟೆ ಮರು ನಿರ್ಮಾಣದ ಚಿಂತನೆ ಇದೆ. ಆದರೆ ಅರಮನೆಯ ಮೂಲ ವಿನ್ಯಾಸದ ಮಾಹಿತಿಯಿಲ್ಲದ ಕಾರಣ ಮರು ನಿರ್ಮಾಣ ವಿಳಂಬವಾಗುತ್ತಿದೆ. ಸದ್ಯ ಉಳಿದ ಅವಶೇಷಗಳನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ತ್ವರಿತವಾಗಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕದ ಕಿತ್ತೂರು ಭಾಗವನ್ನು ದೊಡ್ಡ ಪ್ರವಾಸಿ ತಾಣವಾಗಿ ಮಾರ್ಪಡು ಮಾಡುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ.

30 ಕೋಟಿ ಅನುದಾನದಲ್ಲಿ ಕಿತ್ತೂರು ಇತಿಹಾಸವನ್ನು ಇಂದಿನ ಪೀಳಿಗೆ ಪರಿಚಯಿಸಲು ಆಧುನಿಕ ಮಾದರಿಯ ಉದ್ಯಾನವನ ನಿರ್ಮಾಣ ಮಾಡಲು ಸದ್ಯದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು.

ಈ ಬಾರಿ ಕಿತ್ತೂರು ಉತ್ಸವಕ್ಕೆ 5 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅತ್ಯಂತ ಅದ್ದೂರಿಯಾಗಿ ಆಚರಿಸಲಾಗುವುದು ಎಂದರು.

ಇದಕ್ಕೂ ಮುಂಚೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಕಿತ್ತೂರು ಕೋಟೆ ಆವರಣದಲ್ಲಿ ರೂ. 12.11 ಕೋಟಿ ಹಾಗೂ 2.4 ಕೋಟಿ ಅನುದಾನದ ಚನ್ನಮ್ಮನ ಕಿತ್ತೂರಿನ ಕೋಟೆ, ಅರಮನೆ ಅವಶೇಷಗಳ ಸಂರಕ್ಷಣೆಯ ವಿವಿಧ ಕಾಮಗಾರಿಯ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.

ಟಾಪ್ ನ್ಯೂಸ್

vidhana-Soudha

Guidlines: ಗ್ರಾಮಸಭೆಗೆ ಮಾರ್ಗಸೂಚಿ ಉತ್ತರದಾಯಿತ್ವ ಅಗತ್ಯ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Parameshwar

Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್‌

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Sslc

PUC: ವಿಜ್ಞಾನದಲ್ಲಿ ಪ್ರೀತಂ, ವಾಣಿಜ್ಯದಲ್ಲಿ ಸಾನ್ವಿ, ಕಲಾ ವಿಭಾಗದಲ್ಲಿ ವೇದಾಂತ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಊಹೆ ಮಾತ್ರ: ಸಚಿವ ಕೃಷ್ಣ ಭೈರೇಗೌಡ

Belagavi: ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಊಹೆ ಮಾತ್ರ: ಸಚಿವ ಕೃಷ್ಣ ಭೈರೇಗೌಡ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

1-wqeqwewqe

Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ‌ ದಿಢೀರ್ ರಾಜೀನಾಮೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidhana-Soudha

Guidlines: ಗ್ರಾಮಸಭೆಗೆ ಮಾರ್ಗಸೂಚಿ ಉತ್ತರದಾಯಿತ್ವ ಅಗತ್ಯ

ASEAN Summit: PM Modi to Laos tomorrow

ASEAN Summit: ನಾಳೆ ಲಾವೋಸ್‌ಗೆ ಪ್ರಧಾನಿ ಮೋದಿ

shami is not the part of Bengal Ranji Team

Ranji Trohpy: ಶಮಿ ಬಂಗಾಲ ತಂಡದಲ್ಲಿಲ್ಲ; ಮುಂಬೈಗೆ ಸರ್ಫರಾಜ್‌ ಅಲಭ್ಯ

Power fight in valley state like Delhi?

Jammu Kashmir: ದಿಲ್ಲಿ ರೀತಿ ಕಣಿವೆ ರಾಜ್ಯದಲ್ಲೂ ಅಧಿಕಾರ ಜಗಳ?

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.