ಆಸ್ಪತ್ರೆ ಅವ್ಯವಸ್ಥೆಗೆ ಶಾಸಕ ಕೆಂಡಾಮಂಡಲ


Team Udayavani, Dec 1, 2019, 3:30 PM IST

bg-tdy-1

ಬೆಳಗಾವಿ: ಆಸ್ಪತ್ರೆಯ ತುಂಬೆಲ್ಲ ಹೊಲಸು-ಕೆಸರು, ನೀರಿಲ್ಲದ ಶೌಚಾಲಯ-ಹೆರಿಗೆ ವಾರ್ಡ್‌, ವಾರ್ಡ್‌ ಗಳಲ್ಲಿ ಗಬ್ಬು ವಾಸನೆ, ಆಸನದ ವ್ಯವಸ್ಥೆ ಇಲ್ಲದೇ ಒದ್ದಾಡುತ್ತಿರುವ ರೋಗಿಗಳು, ನಿಗದಿತ ಸಮಯಕ್ಕೆ ಬಾರದ ವೈದ್ಯರು.

ಇಲ್ಲಿಯ ಜಿಲ್ಲಾಸ್ಪತ್ರೆಗೆ ಶನಿವಾರ ಹಠಾತ್‌ ಭೇಟಿ ನೀಡಿದ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಕಂಡ ಅವ್ಯವಸ್ಥೆಯ ದೃಶ್ಯಗಳಿವು.ಇದನ್ನು ಕಂಡು ಕೆಂಡಾಮಂಡಲರಾಗಿ ಅವರ ತಾಪ ನೆತ್ತಿಗೇರಿ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಎರಡು ದಿನಗಳಿಂದ ಸಂಘ-ಸಂಸ್ಥೆಗಳು ನಡೆಸಿದಪ್ರತಿಭಟನೆ ಬಳಿಕ ಶನಿವಾರ ಭೇಟಿ ನೀಡಿದ ಶಾಸಕರು ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಕಿಡಿಕಾರಿದರು.

ಹೆರಿಗೆ ವಾರ್ಡ್‌ಗೆ ತೆರಳಿದ ಶಾಸಕರಿಗೆ ನರಕದ ಅನಾವರಣಆಯಿತು. ಹೆರಿಗೆ ವಾರ್ಡ್‌ನಲ್ಲಿ ಎಲ್ಲೆಂದರಲ್ಲಿಕೆಸರು, ಹೊಲಸು ಕಂಡು ಬಂತು. ಸರಿಯಾದ ನೀರಿನ ವ್ಯವಸ್ಥೆ ಇರಲಿಲ್ಲ. ತೊಟ್ಟಿಗಳಲ್ಲಿ ಬಾರದ ನೀರಿನಿಂದ ಬಾಣಂತಿಯರು ಅನುಭವಿಸುತ್ತಿರುವ ಕಷ್ಟಗಳಿಗೆ ಸ್ಪಂದಿಸುವವರು ಯಾರು ಎಂದು ಪ್ರಶ್ನಿಸಿದರು. ನೀರು ಮತ್ತು ವಿದ್ಯುತ್‌ ಇಲ್ಲದ ಶೌಚಾಲಯಗಳು,ಹೆರಿಗೆ ಬಳಿಕ ಸ್ನಾನಕ್ಕೆ ಬಿಸಿ ನೀರು ಇಲ್ಲದ ಸ್ಥಿತಿ ಇಲ್ಲಿದೆ. ಬಹುತೇಕ ಎಲ್ಲ ವಾರ್ಡ್‌ಗಳಲ್ಲಿ ಸ್ವತ್ಛತೆ ಇಲ್ಲದೇ ದುರ್ವಾಸನೆ ಬರುತ್ತಿದೆ. ಸರಿಯಾದ ಔಷಧ ವ್ಯವಸ್ಥೆಯೂ ಇಲ್ಲವಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ ಬಂದ್‌ ಆಗಿ ಅನೇಕ ದಿನಗಳು ಕಳೆದರೂ ಯಾರೂ ಗಮನಹರಿಸುತ್ತಿಲ್ಲ. ರೋಗಿಗಳಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದೆ. ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸದ ದಾದಿಗಳ ದರ್ಪದ ಮಾತುಗಳು, ಅಧಿಕಾರಿಗಳ ಬೇಜವಾಬ್ದಾರಿ ಕಾರ್ಯನಿರ್ವಹಣೆ ಹಾಗೂ ಸರಿಯಾದ ಸಮಯಕ್ಕೆ ಹಾಜರಾಗದ ವೈದ್ಯರ ಬಗ್ಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.

ಅನುದಾನದ ಕೊರತೆ ಇಲ್ಲ: ಜಿಲ್ಲಾಸ್ಪತ್ರೆಗೆ ಕೇಂದ್ರರಾಜ್ಯ ಸರ್ಕಾರದಿಂದ ಸಾಕಷ್ಟು ಅನುದಾನ ಹರಿದು ಬರುತ್ತಿದ್ದರೂ ಸದ್ಬಳಕೆ ಆಗುತ್ತಿಲ್ಲ. ಆಸ್ಪತ್ರೆ ವಿಷಯದಲ್ಲಿಯಾವುದೇ ಹಣದ ಕೊರತೆ ಇಲ್ಲ. ಬಿಮ್ಸ್‌ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಕೊರತೆ ಕಂಡು ಬರುತ್ತಿದೆ. ನಾಳೆಯೊಳಗೆ ಇಲ್ಲಿಯ ಅವ್ಯವಸ್ಥೆ ಸರಿಯಾಗದಿದ್ದರೆ ಅಧಿ ಕಾರಿಗಳ ಅಮಾನತಿಗೆ ಶಿಫಾರಸು ಮಾಡುವುದಾಗಿ ಶಾಸಕ ಅನಿಲ ಬೆನಕೆ ಎಚ್ಚರಿಕೆ ನೀಡಿದರು.

ಈ ಹಿಂದೆ ಅನೇಕ ಸಲ ಸೂಚನೆಗಳನ್ನು ಕೊಟ್ಟರೂ ಆಸ್ಪತ್ರೆಯ ವ್ಯವಸ್ಥೆ ಸುಧಾರಿಸಿಲ್ಲ. ಹೀಗಾಗಿ ಆಸ್ಪತ್ರೆಯ ಬಗ್ಗೆನಿಗಾ ವಹಿಸುವ ನಿಟ್ಟಿನಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದಶಾಸಕರು, ಜನಪ್ರತಿನಿಧಿಗಳು, ಉನ್ನತ ಅಧಿಕಾರಿಗಳು,ಹೋರಾಟಗಾರರು, ಸಮಾಜ ಸೇವಕರು, ಜವಾಬ್ದಾರಿಯುತ ಎನ್‌ಜಿಒಗಳನ್ನು ಒಳಗೊಂಡಮೇಲ್ವಿಚಾರಣಾ ಸಮಿತಿ ರಚಿಸುವುದಾಗಿ ಹೇಳಿದರು.

ಪ್ರಶ್ನೆಗೆ ಅಧಿಕಾರಿಗಳು ನಿರುತ್ತರ: ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬರುವ ಅನುದಾನವನ್ನು ಸರಿಯಾಗಿಬಳಕೆ ಮಾಡದಿರಲು ಅಧಿಕಾರಿಗಳ ಅಸಡ್ಡೆಯೇ ಮುಖ್ಯ ಕಾರಣ. ಈ ಹಣ ಬಳಕೆಯಾಗದೇ ಎಲ್ಲಿಗೆ ಹೋಯಿತು ಎಂಬ ಶಾಸಕರ ಪ್ರಶ್ನೆಗೆ ಅಧಿಕಾರಿಗಳು ನಿರುತ್ತರರಾದರು. ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಕೇಳಿದ ಪ್ರಶ್ನೆಗೆ ವೈದ್ಯಾಧಿ ಕಾರಿಗಳು ಹಾಗೂ ಮುಖ್ಯ ಶುಶ್ರೂಷಕ ಅಧಿಧೀಕ್ಷಕರು ಸಮಂಜಸ ಉತ್ತರ ನೀಡಲಿಲ್ಲ. ಇದರಿಂದ ಕೆಂಡಾಮಂಡಲರಾದ ಶಾಸಕರು ಅವರನ್ನು ತರಾಟೆಗೆ ತೆಗೆದುಕೊಂಡರು.

ನಂತರ ಶಾಸಕರ ಬಳಿ ನೋವು ತೋಡಿಕೊಂಡ ರೋಗಿಗಳು, ಸಾಮಾಜಿಕ ಹೋರಾಟಗಾರರು, ಸಮಸ್ಯೆಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು. ಡಿ.1 ರಂದು ಮತ್ತೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ.ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು. ಸಾಮಾಜಿಕ ಹೋರಾಟಗಾರ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿವಾಜಿ ಕಾಗಣೀಕರ, ನ್ಯಾಯವಾದಿಎನ್‌.ಆರ್‌. ಲಾತೂರ, ಹೋರಾಟಗಾರ ಕಿರಣಕುಮಾರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.