ರೈತ ಕೇವಲ ರೈತನಾಗಿ ಇರದೇ ಉದ್ದಿಮೆದಾರನಾಗಬೇಕು: ಸಂಸದ ಈರಣ್ಣ ಕಡಾಡಿ


Team Udayavani, Mar 9, 2023, 8:15 PM IST

ರೈತ ಕೇವಲ ರೈತನಾಗಿ ಇರದೇ ಉದ್ದಿಮೆದಾರನಾಗಬೇಕು: ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರು ಕಾಲಕ್ಕೆ ತಕ್ಕಂತೆ ತಮ್ಮ ಚಟುವಟಿಕೆಗಳನ್ನು ಬದಲಾಯಿಸಿಕೊಳ್ಳುವ ಮೂಲಕ ಆಧುನಿಕ ತಂತ್ರಜ್ಞಾನಗಳನ್ನು ಉಪಯೋಗಿಸಿಕೊಂಡು ರೈತ ಕೇವಲ ರೈತನಾಗಿ ಇರದೇ ಉದ್ದಿಮೆಯಾಗಿ, ವ್ಯಾಪಾರಸ್ಥನಾಗಿ ಹೊರಹೊಮ್ಮಬೇಕಾದ ಅಗತ್ಯತೆ ಇದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಗುರುವಾರದಂದು ಮೂಡಲಗಿ ತಾಲ್ಲೂಕಿನ ಕಲ್ಲೋಳಿ ಪಟ್ಟಣದ ಮಲ್ಲಿಕಾರ್ಜುನ ಖಾನಗೌಡ್ರ ತೋಟದಲ್ಲಿ ಕೃಷಿ ಸಂಜೀವಿನಿ ಸಾವಯವ ಕೇಂದ್ರದ ವತಿಯಿಂದ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಯಡಿ ನಿರ್ಮಿಸಲಾದ ಹಲವಾರು ಯಂತ್ರಗಳಿಗೆ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಈರಣ್ಣ ಕಡಾಡಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು ಬೆಳೆದಂತಹ ವಸ್ತುಗಳನ್ನು ಮೌಲ್ಯವರ್ಧನೆ ಮಾಡಲಿಕ್ಕೆ ಹಲವಾರು ತಂತ್ರಜ್ಞಾನಗಳನ್ನು ಒದಗಿಸಿದೆ. ಅವುಗಳನ್ನು ಉಪಯೋಗ ಮಾಡಿಕೊಳ್ಳುವ ಮೂಲಕ ಪ್ರತಿಯೊಬ್ಬ ರೈತನಿಗೆ ಈ ಯೋಜನೆಯಡಿ 30 ಲಕ್ಷ ರೂಪಾಯಿಗಳವರೆಗೆ ಬ್ಯಾಂಕ್ ಸಾಲ ಸೌಲಭ್ಯವಿದ್ದು, ಅದರಲ್ಲಿ ಪ್ರತಿಶತ 50% ರಷ್ಟು ಅಂದರೇ 15 ಲಕ್ಷದವರೆಗೆ ಸಹಾಯಧನ ಲಭ್ಯವಿದ್ದು, ರೈತರು ಕೇವಲ 15 ಲಕ್ಷ ರೂ. ಮಾತ್ರ ಸಾಲವನ್ನು ಪಾವತಿಸಬೇಕಾಗುತ್ತದೆ ಎಂದರು.

ರೈತರು ಈ ಯೋಜನೆಯಲ್ಲಿ ಹಿಟ್ಟಿನ ಗಿರಣಿ, ಖಾರ ಕುಟ್ಟುವ ಮಷೀನ್, ರೊಟ್ಟಿ ಮಾಡುವ ಮಷೀನ್, ಚಿಪ್ಸ್ ಮಾಡುವ ಮಿಷನ್, ಪಾಪಡ್ ಮಾಡೋ ಮಷೀನ್, ನೂಡಲ್ಸ್ ಶಾವಿಗೆ ಮಷೀನ್, ಜ್ಯೂಸ್ ಪ್ರೊಸೆಸಿಂಗ್ ಮಷೀನ್, ರವಾ ಮಾಡುವ ಮಷೀನ್, ದಾಲ್ ಮಾಡುವ ಮಷೀನ್, ಹಾಗೂ ರೈತ ಬೆಳೆದಂತಹ ಎಣ್ಣೆ ಬೀಜಗಳಿಂದ ಮನೆಯಲ್ಲಿಯೇ ಖಾದ್ಯತೈಲಗಳನ್ನು ತಯಾರಿಸಬಹುದು. ಹೀಗೆ ಯಾವುದೇ ಆಹಾರದ ಮೌಲ್ಯವರ್ಧನೆ ಗೊಳಿಸಲು ಬೇಕಾಗುವ ಮಷೀನ್ ಗಳನ್ನು ಪಡೆಯಬಹುದಾಗಿದೆ. ರೈತರು ಇಂತಹ ಯಂತ್ರಗಳನ್ನು ಖರೀದಿ ಮಾಡುವ ಮೂಲಕ ತಮ್ಮ ಬದುಕನ್ನು ಕೃಷಿ ಚಟುವಟಿಕೆ ಜೊತೆಗೆ ತಮ್ಮ ಬೆಳೆಗಳ್ನು ಮೌಲವರ್ಧನೆ ಮಾಡಿಕೊಂಡು ಉದ್ದಿಮೆಯಾಗಿ, ವ್ಯಾಪಾರಸ್ಥನಾಗಲು ಸಾಧ್ಯವಿದೆ. ಆ ದಿಕ್ಕಿನ ಕಡೆಗೆ ವಿದ್ಯಾವಂತ ಯುವ ರೈತರು ಗಮನ ಹರಿಸುವ ಅಗತ್ಯವಿದ್ದು, ನಾವು ಹಳೆ ಪದ್ದತಿಯಲ್ಲಿ ಮುಂದುವರೆಯಲಾರದೇ ರೈತರು ಹೊಸ ಪದ್ದತಿಗಳನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಪ್ರಗತಿಪರ ರೈತರಾದ ಮಲ್ಲಿಕಾರ್ಜುನ ಖಾನಗೌಡ್ರ ಮತ್ತು ರಮೇಶ ಖಾನಗೌಡ್ರ ಅವರನ್ನು ಸಂಸದರು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಶಿವರುದ್ರ ಬಿ.ಪಾಟೀಲ, ಹಣಮಂತ ಸಂಗಟಿ, ಬೋಜರಾಜ ಬೆಳಕೂಡ, ಬಸವರಾಜ ಕಡಾಡಿ, ಮಲ್ಲಪ್ಪ ಖಾನಗೌಡ್ರ, ಅಡಿವೆಪ್ಪ ಕುರಬೇಟ, ಈರಪ್ಪ ಚೌಗಲಾ, ರಮೇಶ ಗೋಸಬಾಳ, ಕೃಷಿ ಇಲಾಖೆ ಸಿಬ್ಬಂದಿಗಳಾದ ಕೃಷಿ ಅಧಿಕಾರಿ ಪರಸಪ್ಪ ಹುಲಗಬಾಳ, ಆತ್ಮಾ ಅಧಿಕಾರಿ ಪೂರ್ಣಿಮಾ ವಡ್ರಾಂಳಿ, ಪರಪ್ಪ ಗಿರೆಣ್ಣವರ ಸೇರಿದಂತೆ ಅನೇಕ ಪ್ರಗತಿಪರ ರೈತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.