ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಜೊಲ್ಲೆ


Team Udayavani, Mar 13, 2021, 3:48 PM IST

ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಜೊಲ್ಲೆ

ಚಿಕ್ಕೋಡಿ: ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಸಮಸ್ಯೆ, ರೈತರಿಗೆ ಸಿಗಬೇಕಾದ ವಿದ್ಯುತ್‌ ಪರಿವರ್ತಕಗಳು, ಗ್ರಾಮೀಣಪ್ರದೇಶದಲ್ಲಿ ಬಸ್‌ ವ್ಯವಸ್ಥೆ , ಗ್ರಾಮೀಣರಸ್ತೆಗಳ ಬೇಡಿಕೆ, ಆರೋಗ್ಯ ಸೇವೆ ಹೀಗೆಹತ್ತು ಹಲವು ಸಮಸ್ಯೆಗಳನ್ನು ಜನರಿಂದ ಆಲಿಸಿ ಸ್ಪಂ ದಿಸಿದ ಸಂಸದ ಅಣ್ಣಾಸಾಹೇಬಜೊಲ್ಲೆ ಅವರು ಶೀಘ್ರವಾಗಿ ಜನರ ಸಮಸ್ಯೆ ಇತ್ಯರ್ಥವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಚಿಕ್ಕೋಡಿ ಲೋಕಸಭೆಯ ಚಿಕ್ಕೋಡಿ-ಸದಲಗಾ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಜನಸಂಪರ್ಕಸಭೆಯಲ್ಲಿ ಸಾರ್ವಜನಿಕರ ಹಲವಾರುಸಮಸ್ಯೆಗಳಿಗೆ ಸಂಸದ ಅಣ್ಣಾಸಾಹೇಬಜೊಲ್ಲೆ ಸಕಾರಾತ್ಮಕ ಸ್ಪಂದಿ ಸಿ ಜನರಿಂದ ಅರ್ಜಿ ಸ್ವೀಕರಿಸಿದರು.

ಚಿಕ್ಕೋಡಿ ತಾಲೂಕಿನ ಶಮನೇವಾಡಿ-ಬೇಡಕಿಹಾಳ ಗ್ರಾಮಗಳಿಗೆ ಹೋಗುವಸಾರ್ವಜನಿಕರಿಗೆ ಬಸ್‌ ವ್ಯವಸ್ಥೆ ಇಲ್ಲವಾಗಿದೆ. ಪ್ರತಿದಿನ ಸಾಕಷ್ಟು ಬಸ್‌ ಸಂಚಾರ ಮಾಡಿದರೂ ಸಹ ಬೇಡಕಿಹಾಳ ಕ್ರಾಸ್‌ದಲ್ಲಿ ನಿಲ್ಲಿಸಿಇಚಲಕರಂಜಿಗೆ ಹೋಗುತ್ತವೆ. ಇದರಿಂದಶಮನೇವಾಡಿ ಹಾಗೂ ಬೇಡಕಿಹಾಳ ಗ್ರಾಮದಜನರಿಗೆ ಬಸ್‌ ಸೇವೆ ಸಿಗುತ್ತಿಲ್ಲ, ಸಂಸದರು ಗಮನ ಹರಿಸಬೇಕು ಎಂದು ಶಮನೇವಾಡಿಗ್ರಾಮದ ಜನರು ಸಂಸದರ ಬಳಿ ಬೇಡಿಕೆಇಟ್ಟರು. ತಾಲೂಕಿನ ವಾಳಕಿ, ಪಟ್ಟಣಕುಡಿ ಮುಂತಾದ ಕಡೆಗಳಲ್ಲಿ ಗ್ರಾಮೀಣ ಪ್ರದೇಶದಜನರಿಗೆ ಆರೋಗ್ಯ ಸೇವೆ ಮರೀಚಿಕೆಯಾಗಿದೆ.ಹಲವು ರೋಗಿಗಳಿಗೆ ಔಷಧ ಸಿಗುತ್ತಿಲ್ಲ,ವೈದ್ಯರ ಕೊರತೆ ಇದೆ ಎಂದು ವಾಳಕಿ ಗ್ರಾಮಸ್ಥರು ಮನವಿ ಮಾಡಿದರು.

ಮಾಂಜರಿ, ಇಂಗಳಿ, ಯಡೂರ, ಕಲ್ಲೋಳಸೇರಿದಂತೆ ಕೃಷ್ಣಾ ನದಿ ವ್ಯಾಪ್ತಿಯ ರೈತರಜಮೀನುಗಳಿಗೆ ಸವಳು-ಜವಳು ಸಮಸ್ಯೆಕಾಡುತ್ತಿದೆ. ಸಂಸದರು ವಿಶೇಷ ಅನುದಾನ ಒದಗಿಸಿ ಸವಳು ಜವಳು ಹೋಗಲಾಡಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆನೀಡಬೇಕೆಂದು ರೈತರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಇಡೀ ರಾಜ್ಯದಲ್ಲಿ ಚಿಕ್ಕೋಡಿ ಲೋಕಸಭೆ ಕ್ಷೇತ್ರ ದೊಡ್ಡ ಕ್ಷೇತ್ರವಾಗಿದೆ. ಸಂಸದರಾಗಿ ಎರಡು ವರ್ಷಕಳೆದಿದೆ. ಕೊರೊನಾ ಮತ್ತು ಪ್ರವಾಹದಿಂದಸರ್ಕಾರದಿಂದ ಬರುವ ಅನುದಾನಕಡಿತವಾಗಿದೆ. ಹೀಗಾಗಿ ಅಭಿವೃದ್ಧಿ ಕೆಲಸಗಳಿಗೆಸ್ವಲ್ಪಮಟ್ಟಿನ ಹಿನ್ನಡೆಯಾಗಿದೆ ಎಂದರು.ಓರ್ವ ಸಂಸದರಿಗೆ ಐದು ವರ್ಷದಲ್ಲಿ 25 ಕೋಟಿ ಅನುದಾನ ಒದಗಿ ಬರಲಿದೆ. ಕ್ಷೇತ್ರದಎಂಟು ವಿಧಾನಸಭೆ ಕ್ಷೇತ್ರಗಳಿಗೆ 25 ಲಕ್ಷರೂ ಹಂಚಿಕೆ ಮಾಡುತ್ತಿದ್ದೇನೆ. ಈಗ ಎರಡು ವರ್ಷದಲ್ಲಿ 5 ಕೋಟಿ ಅನುದಾನ ಬಂದಿದೆ.ಎಲ್ಲ ವಿಧಾನಸಭೆ ಕ್ಷೇತ್ರದಲ್ಲಿ 5 ಲಕ್ಷ ರೂ.ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ ನೀಡಿದ್ದೇನೆ ಎಂದರು.

ಮುಂಬರುವ ದಿನಗಳಲ್ಲಿ ಬಿಜೆಪಿ ಸರ್ಕಾರ ಹೆಚ್ಚಿನ ಅನುದಾನ ನೀಡುವ ಭರವಸೆ ಇದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ನನೆಗುದಿಗೆ ಬಿದ್ದಿರುವ ಯೋಜನೆಗಳಿಗೆಅನುದಾನ ಸಿಗಲಿದೆ. ರಸಗೊಬ್ಬರಕ್ಕೆ ಸಬ್ಸಿಡಿನೀಡಲು ಸರ್ಕಾರ ಸಿದ್ಧತೆ ನಡೆಸಿದೆ. ಕೋವಿಡ್‌ನಂತಹ ಮಾರಕ ರೋಗ ದೂರವಾಗಲು ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದರು.

ಧುರೀಣ ಜಗದೀಶ ಕವಟಗಿಮಠ, ಬಿಜೆಪಿ ಮಂಡಲ ಅಧ್ಯಕ್ಷ ಸಂಜು ಪಾಟೀಲ,ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷದುಂಡಪ್ಪ ಬೆಂಡವಾಡೆ, ವಿಶ್ವನಾಥ ಕಮತೆ,ಅಪ್ಪಾಸಾಹೇಬ ಚೌಗಲೆ, ಪುರಸಭೆಅಧ್ಯಕ್ಷ ಪ್ರವೀಣ ಕಾಂಬಳೆ, ಪುರಸಭೆಸದಸ್ಯರಾದ ನಾಗರಾಜ ಮೇದಾರ, ಸಿದ್ದಪ್ಪಡಂಗೇರ, ಬಾಬು ಮಿರ್ಜೆ, ವಿಶ್ವನಾಥಕಾಮಗೌಡ, ಶಕುಂತಲಾ ಡೋನವಾಡೆ, ಶಾಂಭವಿ ಅಶ್ವಥಪೂರ ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.