![Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!](https://www.udayavani.com/wp-content/uploads/2024/07/de-1-415x235.jpg)
ನೇಸರಗಿ ನಿಲ್ದಾಣಕ್ಕೆ ಬೇಕಿವೆ ಸೌಕರ್ಯ
ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಚಾಲನೆ ನೀಡಿರುವುದು ನಿಲ್ದಾಣದ ಅಭಿವೃದ್ಧಿಯ ಆಸೆ ಮೂಡಿಸಿದೆ
Team Udayavani, May 26, 2022, 2:09 PM IST
![12](https://www.udayavani.com/wp-content/uploads/2022/05/12-16-620x372.jpg)
ಬೈಲಹೊಂಗಲ: ತಾಲೂಕಿನ ನೇಸರಗಿ ಬಸ್ ನಿಲ್ದಾಣದ ಪರಿಸ್ಥಿತಿ ಸುಧಾರಿಸಬೇಕಾದ ಅಗತ್ಯವಿದೆ. ಬಾಗಲಕೋಟೆ, ವಿಜಯಪುರ, ಇಳಕಲ್, ಬನಹಟ್ಟಿ, ಗೋವಾ, ರಾಯಚೂರ, ಗುಲಬುರ್ಗಾ, ಔರಂಗಬಾದ, ಬೀದರ, ಹೆ„ದ್ರಾಬಾದ್, ಗೋಕಾಕ ಸೇರಿದಂತೆ ಹಲವು ನಗರಗಳನ್ನು ಸಂಪರ್ಕಿಸುವ ಬಸ್ ಗಳು ನಿತ್ಯ ನೇಸರಗಿ ಮೇಲಿಂದ ಹಾಯ್ದು ಹೋಗುತ್ತವೆ.
ಇದೀಗ ಶಾಸಕ ಮಹಾಂತೇಶ ದೊಡ್ಡಗೌಡರ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಚಾಲನೆ ನೀಡಿರುವುದು ನಿಲ್ದಾಣದ ಅಭಿವೃದ್ಧಿಯ ಆಸೆ ಮೂಡಿಸಿದೆ. ಈ ರಸ್ತೆ ಬಸ್ ನಿಲ್ದಾಣದ ಎದುರಿನಿಂದ ಹಾಯ್ದು ಹೋಗುತ್ತಿದ್ದು, ನೂತನ ಯೋಜನೆಯಂತೆ ರಸ್ತೆ ಅಗಲೀಕರಣವಾದರೆ ಬಸ್ಗಳ ಸಂಚಾರ ಸುಲಲಿತವಾಗಿ, ರಸ್ತೆ ಮೇಲಿನ ದಟ್ಟಣೆ, ಟ್ರಾಫಿಕ್ ಜಾಮ್ ಇಲ್ಲವಾಗಲಿವೆ. ಸದ್ಯ ಬಸ್ ನಿಲ್ದಾಣ ರಸ್ತೆ ಚಿಕ್ಕದಾಗಿರುವುದರಿಂದ ದಟ್ಟಣೆ ಹೆಚ್ಚಾಗಿ ಬಾಗಲಕೋಟ ಮತ್ತು ಬೆಳಗಾವಿ ಕಡೆ ಹೋಗುವ ಅನೇಕ ಬಸ್ ಗಳು ಬಸ್ ನಿಲ್ದಾಣದೊಳಗೆ ಬಾರದೆ ನೇಸರಗಿ ಕ್ರಾಸ್ ಮೂಲಕ ನೇರವಾಗಿ ಸಂಚರಿಸುವ ಪರಿಪಾಠ ಇದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.
ಇಲ್ಲಿರುವ ಪ್ರಯಾಣಿಕರು ಕುಳಿತುಕೊಳ್ಳುವ ಹಾಸುಗಲ್ಲುಗಳು ಮುರಿದು ಹಾಳಾಗಿವೆ. ಅಲ್ಲಲ್ಲಿ ಕಸ ಬಿದ್ದರೂ ಕ್ಯಾರೆ ಎನ್ನುವರಿಲ್ಲ. ಹಳೆಯ ಶೌಚಾಲಯ ಕೆಡವಿ ಹೊಸದಾಗಿ ಶೌಚಾಲಯ ನಿರ್ಮಿಸಲಾಗಿದೆ. ಆದರೆ ಹಳೆಯ ಶೌಚಾಲಯ ಕೆಡವಿದ ನಂತರವೂ ಕಲ್ಲು ಮಣ್ಣು ಹಾಗೆಯೇ ಬಿದ್ದಿದೆ. ಅದನ್ನು ಬೇರೆಡೆ ಸಾಗಿಸಿದರೆ ನಿಲ್ದಾಣ ಸ್ವತ್ಛ ಆಗುವುದಲ್ಲದೇ ಇನ್ನೊಂದೆರಡು ಬಸ್ ನಿಲ್ಲಲೂ ಅನುಕೂಲವಾಗುತ್ತದೆ.
ಪ್ರಯಾಣಿಕರಿಗೆ ಮೂಲ ಸೌಲಭ್ಯಗಳನ್ನು ಸಾರಿಗೆ ಸಂಸ್ಥೆ ಒದಗಿಸಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.
ನೇಸರಗಿ ಗ್ರಾಮದ ಬಸ್ ನಿಲ್ದಾಣವು ರಾಜ್ಯ ಬಹುತೇಕ ಎಲ್ಲ ಪಟ್ಟಣಗಳನ್ನು ಸಂಪರ್ಕಿಸುವುದರಿಂದ ಸಾಕಷ್ಟು ಸಂಖ್ಯೆಯಲ್ಲಿ ಪ್ರಯಾಣಿಕರು ಇಲ್ಲಿಂದ ಸಂಚರಿಸುತ್ತಾರೆ. ಕೂಡಲೇ ನಿಲ್ದಾಣದಲ್ಲಿ ಮೂಲಸೌಕರ್ಯಕ್ಕೆ ಆದ್ಯತೆ ನೀಡಬೇಕಿದೆ. ಮಹಾಂತೇಶ ಹಿರೇಮಠ, ಜಿಲ್ಲಾ ಗೌರವಾಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ
ಸಿ.ವೈ.ಮೆಣಶಿನಕಾಯಿ
ಟಾಪ್ ನ್ಯೂಸ್
![Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!](https://www.udayavani.com/wp-content/uploads/2024/07/de-1-415x235.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ](https://www.udayavani.com/wp-content/uploads/2024/07/sedam-150x94.jpg)
Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ
![Heavy rain in Amboli; Five feet water rise in Hidkal reservoir in one day](https://www.udayavani.com/wp-content/uploads/2024/07/hidkal-150x83.jpg)
Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ
![belagBelagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ](https://www.udayavani.com/wp-content/uploads/2024/07/belag-150x83.jpg)
Belagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ
![laxmi-hebbalkar](https://www.udayavani.com/wp-content/uploads/2024/07/laxmi-hebbalkar-150x83.jpg)
Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ
![vijaya-sankeshwar1](https://www.udayavani.com/wp-content/uploads/2024/07/vijaya-sankeshwar1-150x102.jpg)
ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ
MUST WATCH
ಹೊಸ ಸೇರ್ಪಡೆ
![Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!](https://www.udayavani.com/wp-content/uploads/2024/07/de-1-150x85.jpg)
Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!
![Renukaswamy ಶವ ಸಾಗಣೆ: ಬ್ಲೂ ಪ್ರಿಂಟ್ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ](https://www.udayavani.com/wp-content/uploads/2024/07/re-150x96.jpg)
Renukaswamy ಶವ ಸಾಗಣೆ: ಬ್ಲೂ ಪ್ರಿಂಟ್ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ
![Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/MANVi-150x91.jpg)
Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
![HD-Kumaraswamy](https://www.udayavani.com/wp-content/uploads/2024/07/HD-Kumaraswamy-150x90.jpg)
Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್ಡಿಕೆ
![1-ree](https://www.udayavani.com/wp-content/uploads/2024/07/1-ree-150x85.jpg)
Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್ಪಾಲ್, ರಶೀದ್ ಸಂಸದರಾಗಿ ಪ್ರಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.