ಮಾರ್ಕಂಡೇಯ ಪ್ರವಾಹ ಈಜಿ ಬಾಕ್ಸಿಂಗ್‌ ಗೆದ್ದ ನಿಶಾನ್‌


Team Udayavani, Aug 13, 2019, 12:13 PM IST

bg-tdy-3

ಬೆಳಗಾವಿ: ಪ್ರವಾಹದ ನೀರಿನಲ್ಲಿ ಸುಮಾರು 2.5 ಕಿ.ಮೀ. ಈಜುತ್ತ ದಡ ಸೇರುವ ಮೂಲಕ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಬಾಕ್ಸಿಂಗ್‌ ಸ್ಪರ್ಧೆಯಲ್ಲಿ ಭಾಗಿಯಾದ ಯುವಕ ಬೆಳ್ಳಿ ಪದಕ ಗಳಿಸುವ ಮೂಲಕ ಸಾಹಸ ಮೆರೆದಿದ್ದಾನೆ.

ಬೆಳಗಾವಿ ತಾಲೂಕಿನ ಮಣ್ಣೂರ ಗ್ರಾಮದ ನಿಶಾನ್‌ ಮನೋಹರ ಕದಮ ಎಂಬ 19 ವರ್ಷದ ಯುವಕ ಪ್ರವಾಹವನ್ನೇ ಎದುರಿಸಿ ದಡ ಸೇರಿ ಪದಕ ಗೆದ್ದು ಬೀಗಿದ್ದಾನೆ.

ಜಿಲ್ಲೆಯಾದ್ಯಂತ ಅಪ್ಪಳಿಸಿದ ಭೀಕರ ಪ್ರವಾಹ ಬೆಳಗಾವಿ ತಾಲೂಕಿನ ಮಣ್ಣೂರ ಗ್ರಾಮಕ್ಕೂ ತಟ್ಟಿತ್ತು. ಕಳೆದ 10-15 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಮಾರ್ಕಂಡೇಯ ನದಿಗೆ ಪ್ರವಾಹ ಬಂದಿತ್ತು. ಇದರಿಂದ ಇಡೀ ಊರಿನ ಸುತ್ತಲೂ ನೀರು ಆವರಿಸಿಕೊಂಡಿತ್ತು. ಊರಿನಿಂದ ಮುಖ್ಯ ರಸ್ತೆಗೆ ಬರಲು ಮೂರು ಮಾರ್ಗಗಳಿದ್ದರೂ ಎಲ್ಲ ಕಡೆಯೂ ನದಿ ನೀರಿನಿಂದ ರಸ್ತೆಗಳೆಲ್ಲ ಕಡಿತಗೊಂಡಿದ್ದವು.

ಆ. 8ರಿಂದ 12ರ ವರೆಗೆ ಆಯೋಜನೆಗೊಂಡಿದ್ದ ರಾಜ್ಯಮಟ್ಟದ ಬಾಕ್ಸಿಂಗ್‌ ಸ್ಪರ್ಧೆಗೆ ನಿಶಾನ್‌ ಕದಮ ಹೋಗಬೇಕಾಗಿತ್ತು. ಧಾರಾಕಾರ ಮಳೆ ಸುರಿದು ರಸ್ತೆಗಳೆಲ್ಲ ಬಂದ್‌ ಆಗಿದ್ದರಿಂದ 3 ದಿನ ಬಾಕ್ಸಿಂಗ್‌ ತರಬೇತಿಗೂ ಹೋಗಿರಲಿಲ್ಲ. ಅ. 7ರಂದು ನಿಶಾನ್‌ ಊರಿನಿಂದ ಮುಖ್ಯ ರಸ್ತೆಗೆ ಹೋಗಿ ಆಲ್ಲಿಂದ ಬೆಳಗಾವಿ ನಗರ ತಲುಪಿ ಬೆಂಗಳೂರಿಗೆ ಪ್ರಯಾಣ ಬೆಳೆಸಬೇಕಾದ ಅನಿವಾರ್ಯತೆ ಇತ್ತು. ಒಂದೆಡೆ ಈ ಹಳ್ಳಿಯ ಸುತ್ತಲೂ ಮಾರ್ಕಂಡೇಯ ನದಿ ನೀರು ಆವರಿಸಿದ್ದರಿಂದ ಹೇಗೆ ಹೋಗುವುದು ಎಂಬ ಆತಂಕಗೊಂಡಿದ್ದನು.

ಮಗ ನಿಶಾನ್‌ ಈ ಸಾಹಸಕ್ಕೆ ತಂದೆ ಮನೋಹರ ಸಾಥ್‌ ನೀಡಿದರು. ಪುತ್ರನ ಕೈ ಹಿಡಿದು ಈಜುತ್ತ ಹೋದರು. ಕೆಲವೊಂದು ಕಡೆಗೆ ನೀರಿನ ಆಳ, ಇನ್ನೊಂದು ಕಡೆಗೆ ಎದೆ ಭಾಗದವರೆಗೆ ನೀರು ಆವರಿಸಿಕೊಂಡಿತ್ತು. ತಂದೆ ಮನೋಹರ ಅವರೊಂದಿಗೆ ನಿಶಾನ್‌ ಸುಮಾರು 2.5 ಕಿ.ಮೀ. ಈಜುತ್ತ ಹೋದನು. ತಂದೆ ಹಾಗೂ ಮಗ ಇಬ್ಬರೂ ಬೆನ್ನಿಗೆ ಹಗ್ಗ ಕಟ್ಟಿಕೊಂಡು ಈಜಿದರು. ನೀರು ರಭಸವಾಗಿ ಹರಿಯುತ್ತಿರುವುದರಿಂದ ರಕ್ಷಣೆಗಾಗಿ ಹಗ್ಗ ಕಟ್ಟಿಕೊಂಡಿದ್ದರು. ತಂದೆ ಮನೋಹರ ಹೆಗಲಿಗೆ ಬ್ಯಾಗ್‌ ಕಟ್ಟಿಕೊಂಡಿದ್ದರು. ಪ್ಲಾಸ್ಟಿಕ್‌ನಿಂದ ಬ್ಯಾಗ್‌ ಪ್ಯಾಕ್‌ ಮಾಡಿದ್ದರು. ಬಳಿಕ ಇಷ್ಟೆಲ್ಲ ಕಷ್ಟಪಟ್ಟು ಉಚಗಾಂವ ಕ್ರಾಸ್‌ ತಲುಪಿ ಅಲ್ಲಿಂದ ಬೆಳಗಾವಿ ಮೂಲಕ ಬೆಂಗಳೂರು ತಲುಪಿದರು. ಮಗನನ್ನು ಬಿಟ್ಟು ಮನೋಹರ ಅವರು ಮತ್ತೆ ಈಜುತ್ತ ತಮ್ಮೂರಿಗೆ ವಾಪಸ್ಸು ಮರಳಿದರು.

ಬೆಳಗಾವಿಯ ಜ್ಯೋತಿ ಪಪೂ ಕಾಲೇಜಿನಲ್ಲಿ ದ್ವಿತೀಯ ಪಿಯು ಮುಗಿಸಿರುವ ನಿಶಾನ್‌ ಕದಮ ಎರಡು ವರ್ಷಗಳಿಂದ ನಗರದ ಎಂ.ಜಿ. ನ್ಪೋರ್ಟಿಂಗ್‌ ಅಕಾಡೆಮಿಯಲ್ಲಿ ಬಾಕ್ಸಿಂಗ್‌ ತರಬೇತಿ ಪಡೆಯುತ್ತಿದ್ದಾನೆ. ನಿಶಾನ್‌ನನ್ನು ಮೊದಲು ಭಜನಾ ಮಂಡಳಕ್ಕೆ ಸೇರಿಸಲಾಗಿತ್ತು. ಅದರಲ್ಲಿ ಆಸಕ್ತಿ ಇಲ್ಲದ್ದಕ್ಕೆ ಬಿಟ್ಟು ಬಂದಿದ್ದನು. ಬಳಿಕ ಟಿವಿಯಲ್ಲಿ ಬಾಕ್ಸಿಂಗ್‌ ನೋಡುವ ಹವ್ಯಾಸ ಬೆಳೆಸಿಕೊಂಡು ಬಾಕ್ಸಿಂಗ್‌ನಲ್ಲಿಯೇ ಮುಂದುವರಿದು ಅಕಾಡೆಮಿಗೆ ಸೇರಿಕೊಂಡನು. ನಿತ್ಯ 30 ಕಿ.ಮೀ. ಓಟ ಹಾಗೂ ಸೈಕ್ಲಿಂಗ್‌ ಮಾಡುತ್ತಿದ್ದನು ಎಂದು ನಿಶಾನ್‌ನ ತಂದೆ ಮನೋಹರ ಹೇಳಿದರು.

ಅರ್ಜುನ ಪ್ರಶಸ್ತಿ ಪುರಸ್ಕೃತ ಮುಕುಂದ ಕಿಲ್ಲೇಕರ ಅವರ ಬಳಿ ತರಬೇತಿ ಪಡೆಯುತ್ತಿದ್ದರು. ಗಜೇಂದ್ರ ತ್ರಿಪಾಟಿ ಕೂಡ ಇವರಿಗೆ ಕೋಚ್ ಆಗಿದ್ದಾರೆ. ಕರ್ನಾಟಕ ರಾಜ್ಯ ಆಮೆಚೂರ್‌ ಬಾಕ್ಸಿಂಗ್‌ ಅಸೋಸಿಯೇಷನ್‌ ಹಾಗೂ ಬಾಕ್ಸಿಂಗ್‌ ಫೆಡರೇಷನ್‌ ಆಫ್‌ ಇಂಡಿಯಾ ವತಿಯಿಂದ ನಡೆದ ರಾಜ್ಯ ಮಟ್ಟದ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯಿಂದ 7 ಜನ ಸ್ಪರ್ಧಾಳುಗಳು ಆಯ್ಕೆಗೊಂಡಿದ್ದರು. ಇದರಲ್ಲಿ ನಾಗೇಶ ಪಾಟೀಲ ಚಿನ್ನ, ನಿಶಾನ್‌ ಕದಮ ಬೆಳ್ಳಿ, ಪೃಥ್ವಿರಾಜ ಚೌಹಾನ ಹಾಗೂ ಬದ್ರುದ್ದಿನ್‌ ದರ್ಗಾ ತಲಾ ಒಂದು ಕಂಚಿನ ಪದಕ ಗಳಿಸಿ ಸಾಧನೆ ಮಾಡಿದ್ದಾರೆ.

 

● ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.