Karnataka Politics; ಈಗ ಸಿಎಂ ಕನಸು ಕಾಣುತ್ತಿಲ್ಲ,ಆದರೆ 2028ರಲ್ಲಿ….: ಸತೀಶ್ ಜಾರಕಿಹೊಳಿ
Team Udayavani, Sep 8, 2024, 2:36 PM IST
ಬೆಳಗಾವಿ: ಯಾವತ್ತೂ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಸ್ಥಾಪನೆ ಮಾಡಿಲ್ಲ. ಈಗಾಗಲೇ ಅನೇಕರು ಸಿಎಂ ಸ್ಥಾನ ಖಾಲಿ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಇದರಲ್ಲಿ ಗುದ್ದಾಟ, ಕುಸ್ತಿ ಮಾಡುವ ಅವಶ್ಯಕತೆಯಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಎಂ.ಬಿ ಪಾಟೀಲ ಶಿವಾನಂದ ಪಾಟೀಲ, ಆರ್ ವಿ ದೇಶಪಾಂಡೆ ಸೇರಿದಂತೆ ಅನೇಕರು ಈಗಾಗಲೇ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದರು.
ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಅಭಿಯಾನ ವಿಚಾರಕ್ಕೆ ಉತ್ತರಿಸಿದ ಅವರು, ಯಾರೋ ಒಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಾಕಿದರೆ ಅದು ರಾಜ್ಯದ ಅಭಿಪ್ರಾಯವಾಗದು. ಎಲ್ಲಾ ಕಡೆ ಈ ರೀತಿ ಅಭಿಯಾನ ಆರಂಭವಾಗಿದ್ದಾಗ ನಮ್ಮವರು ಹಾಕಿದ್ದಾರೆ ಎಂದರು.
ರಾಜ್ಯದಲ್ಲಿ ಈಗ ಸಿಎಂ ಬದಲಾವಣೆ ಸನ್ನಿವೇಶವಿಲ್ಲ. ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಎನ್ನುವ ನಂಬಿಕೆಯಿದೆ. ಈಗ ನಾನು ಸಿಎಂ ಕನಸು ಕಂಡಿಲ್ಲ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದ್ದೇನೆ. ದೆಹಲಿಗೆ ಪದೇಪದೆ ಹೋಗುತ್ತಿರುವದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ದೆಹಲಿಗೆ ಬೇರೆ ಕೆಲಸದ ಮೇಲೆ ಹೋಗಿರುತ್ತೇವೆ ಎಂದು ಜಾರಕಿಹೊಳಿ ಹೇಳಿದರು.
2028ಕ್ಕೆ ಸಿಎಂ ಆಗುವ ತಯಾರಿ ಇದೆ ನಮ್ಮದು. ಅಲ್ಲಿಯವರೆಗೆ ಅಭಿಮಾನಿಗಳು ಕಾಯಬೇಕು ಎಂದು ಸತೀಶ್ ಜಾರಕಿಹೊಳಿ ಮಾರ್ಮಿಕವಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪೊಲೀಸ್ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು
ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್
Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ
Govt., ಕಲ್ಯಾಣ ಅಭಿವೃದ್ಧಿಗೆ ಸರಕಾರದಿಂದ ಪಣ: ದಶಕದ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.