![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 3, 2022, 6:14 PM IST
ಬೆಳಗಾವಿ: ಕೊರೊನಾ ರೂಪಾಂತರಿ ತಳಿ ಒಮಿಕ್ರಾನ್ ಸೋಂಕು ವ್ಯಾಪಿಸುತ್ತಿರುವುದರಿಂದ ಕರ್ನಾಟಕದ ಗಡಿಯಲ್ಲಿ ಖಾಕಿ ಪಡೆ ಕಟ್ಟೆಚ್ಚರ ವಹಿಸಿದ್ದು, ಗಡಿ ದಾಟಿ ಬರುವವರ ಮೇಲೆ ಹೆಚ್ಚಿನ ನಿಗಾ ಇಟ್ಟಿದೆ. ದಾಟಿ ಬಂದವರಿಗೆ ಎರಡು ಡೋಸ್ ಲಸಿಕೆ ಹಾಗೂ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ ಗಡಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ಸೋಂಕು ಗಡಿ ದಾಟಿ ಬೆಳಗಾವಿ ಪ್ರವೇಶಿಸದಂತೆ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ 24×7 ಕರ್ತವ್ಯ ನಿರ್ವಹಿಸುತ್ತಿದ್ದು, ಸೋಂಕು ತಡೆಗೆ ಮುಂಜಾಗ್ರತ ಕ್ರಮ ಕೈಗೊಂಡು ಕಣ್ಗಾವಲು ಇಡಲಾಗಿದೆ.
ವರದಿ ಇರದಿದ್ದರೆ ವಾಹನಗಳು ವಾಪಸ್:
ಬೆಳಗಾವಿ ಗಡಿಭಾಗದಲ್ಲಿ ಒಟ್ಟು 24 ಚೆಕ್ಪೋಸ್ rಗಳನ್ನು ಹಾಕಿರುವ ಜಿಲ್ಲಾಡಳಿತ ಸಿಬ್ಬಂದಿಯನ್ನು ನಿಯೋಜಿಸಿದೆ. ಮಹಾರಾಷ್ಟ್ರ ಹಾಗೂ ಗೋವಾದಿಂದ ಕರ್ನಾಟಕಕ್ಕೆ ಬರುವ ವಾಹನಗಳನ್ನು ತಡೆದು ಪ್ರಯಾಣಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ವಾಹನದಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರ ಎರಡು ಡೋಸ್ ಕೋವಿಡ್ ಲಸಿಕೆ ಹಾಗೂ ಆರ್ಟಿಪಿಸಿಆರ್ ನೆಗೆಟಿವ್ ವರದಿ ಪರಿಶೀಲಿಸಲಾಗುತ್ತಿದೆ. ಒಂದು ವೇಳೆ ಈ ಎರಡರಲ್ಲಿ ಒಂದು ಯಾವುದಾದರೂ ವರದಿ ಇರದಿದ್ದರೆ ಆ ವಾಹನವನ್ನು ವಾಪಸ್ ಕಳುಹಿಸಲಾಗುತ್ತಿದೆ.
ಕೊರೊನಾ ಸೋಂಕು ಭಾರತಕ್ಕೆ ಕಾಲಿಟ್ಟಾಗಿನಿಂದಲೂ ಕರ್ನಾಟಕದ ಗಡಿಗಳನ್ನು ಜಿಲ್ಲಾಡಳಿತ ಗಟ್ಟಿ ಮಾಡಿಕೊಂಡಿದೆ. 2020ರ ಮಾರ್ಚ್ ತಿಂಗಳಿಂದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೆಲ ತಿಂಗಳ ನಂತರ ಸೋಂಕು ತುಸು ಕಡಿಮೆಯಾದ ಬಳಿಕ ಎಂದಿನಂತೆ ಓಡಾಟ ಇತ್ತು. ಕರ್ನಾಟಕ-ಮಹಾರಾಷ್ಟ್ರ, ಕರ್ನಾಟಕ-ಗೋವಾ ಮಧ್ಯೆ ಸಂಚಾರ ಆರಂಭಗೊಂಡಿತ್ತು. ಈಗ ಕೆಲವು ತಿಂಗಳಿಂದ ಗಡಿಯಲ್ಲಿ ಮತ್ತೆ ಚೆಕ್ಪೋಸ್ಟ್ಗಳನ್ನು ಹಾಕಿ ನಿಗಾ ಇಡಲಾಗಿದೆ. ಇಲ್ಲಿ ಸಂಚರಿಸುತ್ತಿರುವ ಪ್ರಯಾಣಿಕರಿಗೆ ತೊಂದರೆ ಆಗುತ್ತಿದ್ದರೂ ಇದು ಸದಸ್ಯದ ಮಟ್ಟಿಗೆ ಅನಿವಾರ್ಯವಾಗಿದೆ.
ಕೋವಿಡ್ ತಪಾಸಣೆ: ಕರ್ನಾಟಕ ಒಳ ಪ್ರವೇಶಿಸುವ ಎಲ್ಲ ಖಾಸಗಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಸರ್ಕಾರದ ನಿಯಮಾವಳಿಯಂತೆ ಲಾರಿ ಮತ್ತು ಗೂಡ್ಸ್ ವಾಹನಗಳ ತಪಾಸಣೆ ಅಗತ್ಯವಿಲ್ಲ. ಬಸ್ ಮತ್ತು ಇತರೆ ಖಾಸಗಿ ವಾಹನಗಳಿಂದ ಬರುವ ಪ್ರಯಾಣಿಕರ ಎರಡು ಡೋಸ್ ಲಸಿಕೆ ಹಾಗೂ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯವಾಗಿ ಪರಿಶೀಲಿಸುವ ಕಾರ್ಯ ನಡೆದಿದೆ. ನೆಗೆಟಿವ್ ವರದಿ ಇಲ್ಲದವರಿಗೆ ಸ್ಥಳದಲ್ಲಿ ಕೋವಿಡ್ ತಪಾಸಣೆ ನಡೆಸಲಾಗುತ್ತಿದೆ. ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಬಾಚಿ, ನಿಪ್ಪಾಣಿ ಸಮೀಪದ ಕೊಗನೊಳ್ಳಿ ಚೆಕ್ಪೋಸ್ಟ್, ಕಾಗವಾಡ ಚೆಕ್ಪೋಸ್ಟ್, ಜಾಂಬೋಟಿ ಚೆಕ್ಪೋಸ್ಟ್ ಸೇರಿದಂತೆ ಎಲ್ಲ ಚೆಕ್ಪೋಸ್ಟ್ಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ.
ಜಿಲ್ಲೆಯಾದ್ಯಂತ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ಧ್ವನಿವರ್ಧಕದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು, ಅನಾವಶ್ಯಕವಾಗಿ ಗುಂಪುಗೂಡದಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಒಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗದಲ್ಲಿ 24 ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ. ಮಹಾರಾಷ್ಟ್ರ ಹಾಗೂ ಗೋವಾದಿಂದ ಬೆಳಗಾವಿ ಪ್ರವೇಶಿಸುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ. ದಿನದ 24 ಗಂಟೆಯೂ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸ್, ಆರೋಗ್ಯ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಕ್ರಮವಾಗಿ ಗಡಿ ಪ್ರವೇಶಿಸುವುದನ್ನು ತಡೆಯಲು ನಿಗಾ ಇಡಲಾಗಿದೆ.
ಲಕ್ಷ್ಮಣ ನಿಂಬರಗಿ, ಎಸ್ಪಿ, ಬೆಳಗಾವಿ
“ಮಹಾ’ ಬಸ್ ಓಡಾಟ ಇಲ್ಲ
ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಸ್ಥಗಿತಗೊಂಡು ಸುಮಾರು ತಿಂಗಳು ಆಗಿದೆ. ಮಹಾರಾಷ್ಟ್ರದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವುದರಿಂದ ಬಸ್ ಸಂಚಾರ ಕಾರ್ಯಾಚರಿಸುತ್ತಿಲ್ಲ. ಮಹಾರಾಷ್ಟ್ರದ ಒಳಗೂ ಹೊರ ರಾಜ್ಯಗಳಿಗೂ ಬಸ್ಗಳು ಓಡಾಡುತ್ತಿಲ್ಲ. ರಾತ್ರಿ ಹೊತ್ತಿನಲ್ಲಿ ಕರ್ನಾಟಕ ಸಾರಿಗೆ ಬಸ್ಗಳು ಮಾತ್ರ ಸಂಚರಿಸುತ್ತಿವೆ.
ಪಿ.ವೈ. ನಾಯಕ, ವಿಭಾಗೀಯ
ನಿಯಂತ್ರಣಾ ಧಿಕಾರಿ, ಸಾರಿಗೆ ಇಲಾಖೆ
*ಭೈರೋಬಾ ಕಾಂಬಳೆ
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.