ಕಾರ್ಯಕರ್ತರ ಜನ ಸೇವೆಯೇ ಬಿಜೆಪಿ ಮೇಲೆ ಜನತೆಯ ವಿಶ‍್ವಾಸ ಬಲಗೊಳ್ಳಲು ಕಾರಣ :ಈಶ್ವರಪ್ಪ


Team Udayavani, Aug 12, 2021, 4:23 PM IST

pArty Workers public service is the reason why people’s confidence in BJP is strengthened: Eshwarappa

ಚಿಕ್ಕೋಡಿ :  ಕೋವಿಡ್ ನಂತಹ ಸಂಕಷ್ಟದ ಸಮಯದಲ್ಲಿ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ತಮ್ಮ ಜೀವವನ್ನು ಪಣಕ್ಕಿಟ್ಟು ಜನರ ಸೇವೆಯಲ್ಲಿ ತೊಡಗಿಸಿಕೊಂಡಿದ್ದರಿಂದಲೇ ಬಿಜೆಪಿ ಮೇಲೆ ಜನತೆಯ ವಿಶ್ವಾಸ ಬಲಗೊಳ್ಳಲು ಕಾರಣವಾಯಿತು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಚಿಕ್ಕೋಡಿಯ ಕೇಶವ ಕಲಾ ಭವನದಲ್ಲಿ ಆರೋಗ್ಯ ಸ್ವಯಂ ಸೇವಕರ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಕೋವಿಡ್ ಮೊದಲ ಹಾಗೂ ಎರಡನೇಯ ಅಲೆಯಲ್ಲಿ ಯಾರೂ ಮನೆಯಿಂದ ಹೊರಗೆ ಬರಲಾರದಂತಹ ಸಮಯದಲ್ಲಿ ಬಿಜೆಪಿಯ ಸಾವಿರಾರು ಕಾರ್ಯಕರ್ತರು, ಪದಾಧಿಕಾರಿಗಳು ತನು, ಮನ, ಧನದ ಮೂಲಕ ಕೋವಿಡ್ ಸೋಂಕಿಗೆ ತುತ್ತಾದ ರೋಗಿಗಳಿಗೆ ಹಾಗೂ ರೋಗಿಗಳ ಕುಟುಂಬದ ಸದಸ್ಯರಲ್ಲಿ ನೈತಿಕ ಧೈರ್ಯ ತುಂಬುವ ಕೆಲಸ ಮಾಡಿದ್ದಲ್ಲದೆ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಸೇರಿದಂತೆ ಅನೇಕ ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಈ ಎಲ್ಲ ಕಾರ್ಯಕರ್ತರು, ಪದಾಧಿಕಾರಿಗಳು ಅಭಿನಂದನಾರ್ಹರು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮಾವಿನ ಹಣ್ಣಿಗೆ ಗುರಿ ಇಡುತ್ತಿದ್ದ ರಿಕ್ಷಾ ಚಾಲಕನ ಪುತ್ರಿ ಇಂದು ಜಗಮೆಚ್ಚುವ ಆರ್ಚರ್

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಕೊವೀಡ್ ಸಾಂಕ್ರಾಮಿಕ ರೋಗದ ಮೊದಲ ಹಾಗೂ ಎರಡನೇ ಅಲೆಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಜನರಿಗೆ ಉತ್ತಮ ಆರೋಗ್ಯ ಹಾಗೂ ಇನ್ನಿತರ ಅವಶ್ಯಕ ಸೇವೆಗಳನ್ನು ಒದಗಿಸಿವೆ ಎಂದ ಅವರು ಮೂರನೇ ಅಲೆಯ ಮುನ್ಸೂಚನೆ ಕೂಡ ಕಂಡು ಬರುತ್ತಿದ್ದು, ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜನರನ್ನು ಎಚ್ಚರಿಸುವ ಕೆಲಸ ಮಾಡಬೇಕಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ವಿಧಾನ ಪರಿಷತ್  ಸದಸ್ಯ ಮಹಾಂತೇಶ ಕವಟಗಿಮಠ, ಪ್ರಧಾನಿ ಮೋದಿ‌ ಸರಕಾರ ಇಡೀ ವಿಶ್ವಕ್ಕೆ ಮಾದರಿಯಾಗುವ ರೀತಿಯಲ್ಲಿ ಕೋವಿಡ್ ಸಾಂಕ್ರಾಮಿಕ‌ ರೋಗದ ಮೊದಲ ಹಾಗೂ ಎರಡನೇ ಅಲೆಯನ್ನು ಎದುರಿಸಿದೆ ಅಲ್ಲದೆ ರೋಗವನ್ನು ನಿರ್ಮೂಲನೆ ಮಾಡುವ ದೃಷ್ಟಿಯಿಂದ ಲಸಿಕೆಗಳನ್ನು ಗ್ರಾಮ ಮಟ್ಟದಲ್ಲೂ ತಲುಪಿಸುವ ಮೂಲಕ 50 ಕೋಟಿಗೂ ಅಧಿಕ  ಭಾರತೀಯರಿಗೆ ವ್ಯಾಕ್ಸಿನ್ ಉಚಿತವಾಗಿ ಒದಗಿಸಿರುವುದು ದೊಡ್ಡ ಸಾಧನೆ ಎಂದರು.

ಅಧ್ಯಕ್ಷತೆಯನ್ನು ಚಿಕ್ಮೋಡಿ ಜಿಲ್ಲಾ ಅಧ್ಯಕ್ಷ ಡಾ.ರಾಜೇಶ್ ನೇರ್ಲಿ ವಹಿಸಿದ್ದರು. ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಖೇತ ಗೌಡರ ಸಂಘಟನಾತ್ಮಕ ಜಿಲ್ಲಾ ಸಮಿತಿಯಿಂದ ಸಚಿವ ಈಶ್ವರಪ್ಪನವರನ್ನು ಸತ್ಕರಿಸಿದರು.

ಜಿಲ್ಲಾ ಸಹ ಪ್ರಭಾರಿ ಹಾಗೂ ರಾಜ್ಯ ಕಾರ್ಯದರ್ಶಿ ಉಜ್ವಲಾ  ಬಡವಣಾಚೆ, ನಿಪ್ಪಾಣಿ ನಗರ ಸಭಾ ಅಧ್ಯಕ್ಷ ಜಯವಂತ ಭಾತಲೆ, ಚಿಕ್ಕೋಡಿ ಪುರಸಭಾಧ್ಯಕ್ಷ ಪ್ರವೀಣ ಕಾಂಬಳೆ, ಮಾಜಿ ಸಂಸದ ಅಮರಸಿಂಹ ಪಾಟೀಲ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ದುಂಡಪ್ಪಾ ಬೆಂಡವಾಡೆ, ಆರೋಗ್ಯ ಅಭಿಯಾನ ಜಿಲ್ಲಾ ಸಂಯೋಜಕ ಪ್ರಸಾದ ಪಚಂಡಿ, ದೀಪಕ ಪಾಟೀಲ ಹಾಗೂ ಚಿಕ್ಕೋಡಿ ಜಿಲ್ಲಾ ಮಟ್ಟದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಆರೋಗ್ಯ ಅಭಿಯಾನ ಸ್ವಯಂ ಸೇವಕರು ಉಪಸ್ಥಿತರಿದ್ದರು.

ಇದೇ ವೇಳೆ ಡಾ.ರವಿ ಸಂಕ ಆರೋಗ್ಯ ಅಭಿಯಾನ ಕುರಿತು ಮಾತನಾಡಿದರು. ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಶಾಂಭವಿ ಅಶ್ವಥಪುರ ವಂದೇ ಮಾತರಂ ಗೀತೆ ಹಾಡಿದರು. ಆರ್.ಎಸ್.ಎಸ್ ನ ನರಸಿಂಹ ಕುಲಕರ್ಣಿ ಮೂರನೇ ಅಲೆ ಮುಂಜಾಗೃತೆಯ ಕುರಿತಾಗಿ ಹಾಗೂ ಡಾ.ರಾಜೇಶ್ ನೇರ್ಲಿ ಸಂಘಟನಾತ್ಮಕ‌ ಗೋಷ್ಟಿಯಲ್ಲಿ ಮಾತನಾಡಿದರು. ಮಾಧ್ಯಮ ವಿಭಾಗದ ರಮೇಶ ಕುಮಾರ ಘಂಟಿ ನಿರೂಪಿಸಿ ದರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ ಅಪ್ಪಾಜಿಗೋಳ ಸ್ವಾಗತಿಸಿದರು, ನಿಂಗಪ್ಪಾ ಖೋಕಲೆ ವಂದಿಸಿದರು.

ಇದನ್ನೂ ಓದಿ : ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಪ್ರಕರಣ: ಏನಿದು ಬೇಗೂರು ಕೆರೆ ಶಿವನ ಮೂರ್ತಿ ವಿವಾದ?

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.