
ವಿದ್ಯುತ್ ಸಂಘದ ಬಾಕಿ ಬಿಲ್ ಪಾವತಿಸಿ: ಕತ್ತಿ
ನೂತನ 63 ಕೆವಿಎ ವಿದ್ಯುತ್ ಪರಿವರ್ತಕ ಉದ್ಘಾಟನೆ ; ಬಾಕಿ ಉಳಿಸಿಕೊಂಡಿರುವ 4308 ಗ್ರಾಹಕರು
Team Udayavani, Jun 17, 2022, 1:17 PM IST

ಹುಕ್ಕೇರಿ: ಗ್ರಾಹಕರು ಹಲವಾರು ವರ್ಷಗಳಿಂದ ಮನೆ, ವಾಣಿಜ್ಯ ಮಳಿಗೆಗಳ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದಾರೆ. ಬೇಗನೆ ಬಿಲ್ ಸಂದಾಯ ಮಾಡಿ ಸಂಘದ ಏಳಿಗೆಗೆ ಸಹಕಾರ ನೀಡಬೇಕೆಂದು ಎಂದು ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.
ತಾಲೂಕಿನ ಹುಲ್ಲೋಳಿ ಗ್ರಾಮದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ವತಿಯಿಂದ ನೂತನ 63 ಕೆವಿಎ ವಿದ್ಯುತ್ ಪರಿರ್ವಕ ಉದ್ಘಾಟಿಸಿ ಮಾತನಾಡಿದರು.
ವಿದ್ಯುತ್ ಬಾಕಿ ಉಳಿಸಿದ 4308 ಗ್ರಾಹಕರಿಗೆ ತಾಲೂಕಾ ಕಾನೂನು ಸೇವಾ ಸಮಿತಿ ಮುಖಾಂತರ ಎರಡು ಬಾರಿ ನೋಟಿಸು ನೀಡಲಾಗಿದೆ. ಆದರೂ ಕೂಡ ಬಿಲ್ ಸಂದಾಯ ಮಾಡಿರುವುದಿಲ್ಲ. ಹುಕ್ಕೇರಿ ನ್ಯಾಯಾಲಯದಲ್ಲಿ ಜೂ. 4ರಿಂದ 25 ರವರೆಗೆ ನಡೆಯಲಿರುವ ಲೋಕ ಅದಾಲತ್ದಲ್ಲಿ ಹಾಜರಾಗಿ ವಿದ್ಯುತ್ ಬಿಲ್ಗೆ ವಿಧಿಸಿದ ಬಡ್ಡಿ ರಿಯಾಯಿತಿ ಸೌಲಭ್ಯ ಪಡೆದು ಹಣ ಭರಣಾ ಮಾಡುವುದರ ಮೂಲಕ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ರೈತರು ಅನಧಿಕೃತವಾಗಿ ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಬಳಕೆ ಮಾಡಿಕೊಳ್ಳುವುದರಿಂದ ವಿದ್ಯುತ್ ಪೂರೈಸುವ ಟಿಸಿಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಟಿಸಿಗಳು ಹಾನಿಗೀಡಾಗುವುದರ ಜತೆಗೆ ಇನ್ನೂಳಿದ ರೈತರು ತೊಂದರೆ ಅನುಭವಿಸಬೇಕಾಗುತ್ತಿದೆ. ರೈತರು ಅಧಿಕೃತ ಜೋಡಣೆ ಪಡೆದುಕೊಂಡಲ್ಲಿ ವಿದ್ಯುತ್ ಪೂರೈಸುವ ಟಿಸಿ ಸಾಮರ್ಥ್ಯಕ್ಕೆ ಅನುಸಾರವಾಗಿ ಮತ್ತಷ್ಟು ಹೆಚ್ಚು ಹೊಸ ಟಿಸಿಗಳನ್ನು ಅಳವಡಿಸಲು ಸಾಧ್ಯವಾಗುತ್ತದೆ ಎಂದು ರೈತರಿಗೆ ಕಿವಿಮಾತು ಹೇಳಿದರು.
ಮುಖಂಡರಾದ ಆನಂದ ದಪ್ಪಾದುಳಿ, ಗ್ರಾಪಂ ಅಧ್ಯಕ್ಷೆ ಶಿವಲೀಲಾ ಮಾಯಪ್ಪಗೋಳ, ಸದಸ್ಯ ಸಿದ್ದಪ್ಪಾ ಪೂಜೇರಿ, ಪಿ.ಕೆ.ಪಿ.ಎಸ್ ಅಧ್ಯಕ್ಷ ಕೆ.ಬಿ.ಪಾಟೀಲ, ಗ್ರಾಮದ ಹಿರಿಯರಾದ ಪಿ.ಡಿ. ಚೌಗಲಾ, ಮಾಯಪ್ಪಾ ಹೊಳೆಪ್ಪಗೊಳ, ಶಾಂತಿನಾಥ ಚೌಗಲಾ, ಬೀರಪ್ಪಾ ನರಸಗೋಳ, ಜಯಪಾಲ ಚೌಗಲಾ, ಆನಂದ ಚೌಗಲಾ ಮತ್ತು ಬಸವರಾಜ ದೇಸಾಯಿ, ಸಂಘದ ಸ್ಥಾನಿಕ ಅಭಿಯಂತರ ನೇಮಿನಾಥ ಖೇಮಲಾಪುರೆ, ಶಾಖಾಧಿಕಾರಿ ಮನೋಜಕುಮಾರ ಕಾರಾಡೆ, ಗ್ರಾಮಸ್ಥರು, ರೈತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.