ಬೀಜ, ಗೊಬ್ಬರ ಕೊಡಿ-ಸಾಲ ಮನ್ನಾ ಮಾಡಿ

ತರಕಾರಿಗೆ ಬೆಲೆ ನಿಗದಿ ಮಾಡಿ ; ರೈತರ ಸಮಸ್ಯೆಗಳಿಗೆ ಸ್ಪಂದಿಸಿ

Team Udayavani, Jun 7, 2022, 4:03 PM IST

22

ಬೆಳಗಾವಿ: ರಾಜ್ಯದ ರೈತರ ಸಾಲ ಮನ್ನಾ ಮಾಡಬೇಕು. ಬಿತ್ತನೆ ಬೀಜ ಹಾಗೂ ಗೊಬ್ಬರ ನೀಡಬೇಕು ಎಂದು ಆಗ್ರಹಿಸಿ ರೈತ ಸೇವಾ ಸಂಘದ ನೇತೃತ್ವದಲ್ಲಿ ರೈತರು ಸೋಮವಾರ ಜಿಲ್ಲಾ ಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು. ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಖರೀದಿ ಕೇಂದ್ರಗಳನ್ನು ಪ್ರತಿ ಗ್ರಾಮದಲ್ಲಿ ಸ್ಥಾಪಿಸಬೇಕು. ಪಕ್ಕದ ರಾಜ್ಯವಾದ ಕೇರಳ ಸರ್ಕಾರವು ತರಕಾರಿಗೆ ಬೆಲೆ ನಿಗದಿ ಮಾಡಿದಂತೆ ಕರ್ನಾಟಕ ಸರ್ಕಾರ ತರಕಾರಿ ಬೆಳೆಗಳಿಗೆ ನಿರ್ದಿಷ್ಟ ಬೆಲೆ ನಿಗದಿ ಪಡಿಸಬೇಕು ಎಂದು ಆಗ್ರಹಿಸಿದರು.

ತುಂತುರು ನೀರಾವರಿ ಮತ್ತು ಹನಿ ನೀರಾವರಿ ಸೌಲಭ್ಯವನ್ನು ಶೇ. 90ರಷ್ಟು ಸಬ್ಸಿಡಿಯಲ್ಲಿ ಎಲ್ಲ ರೈತರಿಗೂ ಸಿಗುವಂತೆ ಕ್ರಮ ಕೈಗೊಳ್ಳಬೇಕು. ಮತ್ತು ಈ ಎರಡು ರಿಯಾಯಿತಿ ಏಕಕಾಲದಲ್ಲಿ ಎಲ್ಲ ರೈತರಿಗೆ ಸಿಗುವಂತೆ ಕ್ರಮ ಕೈಗೊಳ್ಳಬೇಕು. ಗಂಗಾ ಕಲ್ಯಾಣ ಯೋಜನೆಯನ್ನು ಎಲ್ಲ ಸಣ್ಣ ರೈತರಿಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ಭತ್ತ, ಸೊಯಾಬಿನ್‌, ರಾಗಿ, ಗೊಂಜಾಳ, ಶೇಂಗಾ, ಹತ್ತಿ, ಮುಂತಾದ ಬೆಳೆಗಳನ್ನು ಖರೀದಿಸುವ ಕೇಂದ್ರಗಳು ಸುಲಲಿತವಾಗಿ ನಡೆಯುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಕ್ರಮ ಕೈಗೊಳ್ಳಬೇಕು. ರೈತರ ಮಕ್ಕಳ ಶೈಕ್ಷಣಿಕ ಸಾಲ ಹಾಗೂ ಸೌರ್ಹಾದ ಸಹಕಾರಿ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಅಕಾಲಿಕ ಮಳೆಯಲ್ಲಿ ಬೆಳೆ ಹಾನಿಯಾದರೂ ಬೆಳೆ ವಿಮೆ ರೈತರಿಗೆ ಇನ್ನೂ ಸಮರ್ಪಕವಾಗಿ ತಲುಪುತ್ತಿಲ್ಲ. ಹೀಗಾಗಿ ಪ್ರಕೃತಿ ವಿಕೋಪದಿಂದ ಬೆಳೆ ನಾಶವಾದ ಸಂದರ್ಭಗಳಲ್ಲಿ ಬೆಳೆ ವಿಮೆ ಎಲ್ಲ ರೈತರಿಗೂ ಸಮರ್ಪಕವಾಗಿ ಸಿಗುವಂತಾಗಬೇಕು ಎಂದು ಆಗ್ರಹಿಸಿದರು.

ಬಿತ್ತನೆ ಬೀಜ ಹಾಗೂ ಗೊಬ್ಬರವನ್ನು ರೈತರು ಬೇರೆ ಕಡೆಯಿಂದ ಖರೀದಿಸಿ ತರುತ್ತಿದ್ದಾರೆ. ಬೀಜಗಳನ್ನು ವಿತರಿಸುವಂತೆ ಕೃಷಿ ಸಚಿವರ ಗಮನಕ್ಕೆ ತಂದರೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಕೂಡಲೇ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ ಬೀಜಗಳನ್ನು ವಿತರಿಸುವ ಮೂಲಕ ರೈತರ ಸಮಸ್ಯೆಗೆ ಸ್ಪಂದಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.

ಕಳ್ಳ ಮಾರ್ಗದ ಮೂಲಕ ರೈತ ಹೋರಾಟವನ್ನು ಕುಗ್ಗಿಸುವ ಕೆಲಸ ಯಾರಾದರೂ ಮಾಡಿದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವ ಶಕ್ತಿ ರೈತರ ಹಸಿರು ಶಾಲಿಗೆ ಇದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.