ಪಿಯು ಫಲಿತಾಂಶ: ಬೈಲಹೊಂಗಲದ ಸಹನಾ ರಾಜ್ಯಕ್ಕೆ 3 ನೇ ರ‍್ಯಾಂಕ್


Team Udayavani, Apr 21, 2023, 7:48 PM IST

1-qweqwewq

ಬೈಲಹೊಂಗಲ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಹನಾ ಉಳವಪ್ಪ ಕಡಕೋಳ ದ್ವೀತಿಯ ಪಿಯುಸಿ ಕಲಾ ವಿಭಾಗದಲ್ಲಿ ಶೇ 98.5ಅಂಕ ಪಡೆದು ರಾಜ್ಯಕ್ಕೆ 3 ನೇ ರ‍್ಯಾಂಕ್ ಪಡೆದು ಬೈಲಹೊಂಗಲ ನಾಡಿಗೆ ಕೀರ್ತಿ ತಂದಿದ್ದಾಳೆ.

ಕನ್ನಡ 98, ಇಂಗ್ಲಿಷ್ 96, ಇತಿಹಾಸ 100, ಭೂಗೋಳ ಶಾಸ್ತ್ರ100, ಅರ್ಥಶಾಸ್ತ್ರ 99, ರಾಜ್ಯಶಾಸ್ತ್ರ 98 ಅಂಕ ಪಡೆದಿದ್ದಾಳೆ.
ತಾಲೂಕಿನ ಆನಿಗೋಳ ಗ್ರಾಮದ ಬಡ ಕೃಷಿ ಕುಟುಂಬದಿಂದ ಬಂದ ಇವಳು ತನ್ನ ಪ್ರಾಥಮಿಕ, ಪ್ರೌಡಶಿಕ್ಷಣವನ್ನು ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆ, ಪ್ರೌಡಶಾಲೆಯಲ್ಲಿ ವ್ಯಾಸಂಗ ಮುಗಿಸಿದಳು. ಬಾಲ್ಯದಿಂದಲೂ ಶಾಲೆಯಲ್ಲಿ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದಳು. ತಂದೆ ಉಳವಪ್ಪ ಇವರು ಕೃಷಿ ತೊಡಗಿಸಿಕೊಂಡಿದ್ದಾರೆ. ತಾಯಿ ಪುಷ್ಪಾ ಮನೆಗೆಲಸ ನಿರ್ವಹಿಸುತ್ತಾರೆ. ಸಹೋದರ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದಾನೆ.

ಸಹನಾ ಇವಳು ತನ್ನ ವಿದ್ಯಾರ್ಥಿ ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಮಹಾದಾಸೆ ಇಟ್ಟುಕೊಂಡು ಪ್ರತಿನಿತ್ಯ ಬೆಳಿಗ್ಗೆ ೪ರಿಂದ ೮ ವರೆಗೆ ತೊಡಗಿಸಿ ನಂತರ ತಂದೆ ತಾಯಂದಿರಿಗೆ ಮನೆಗೆಲಸಸದಲ್ಲಿ ಸಹಕಾರ ನೀಡುತ್ತಿದ್ದಳು. ನನ್ನ ಈ ಯಶಸ್ವಿಗೆ ತಂದೆ ತಾಯಿ, ಸಹೋದರ, ಉಪನ್ಯಾಸಕರು ಪ್ರೇರಣೆಯಾಗಿದೆ ಎಂದು ಉದಯವಾಣಿಗೆ ತಿಳಿಸಿದರು.

ರಾಜ್ಯಕ್ಕೆ ಮೂರನೇ ರ‍್ಯಾಂಕ ಪಡೆದ ಸುದ್ದಿ ತಿಳಿದ ತಾಯಿ ಪುಷ್ಪಾ ಆನಂದ ಭಾಷ್ಪ ಹೊರ ಹಾಕಿ ಮಾತನಾಡಿ, ಮಗಳು ಪ್ರಾಥಮಿಕ ಶಿಕ್ಷಣದಲ್ಲಿಯೇ ಪ್ರತಿಭಾವಂತೆಯಾಗಿದ್ದು ಇವಳ ಸಾಧನೆಗೆ ಕಾಲೇಜಿನ ಉಪನ್ಯಾಸಕರು ಪ್ರೇರಣೆಯಾಗಿದ್ದು ನಾವೂ ಕೂಡ ಅವಳಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿದ್ದೆವೆ. ಅವಳ ಸಹೋದರ ಕೂಡ ಎಲ್ಲ ಸಹಕಾರ ನೀಡುತ್ತಿದ್ದಾನೆ ಎಂದರು.

ವಿದ್ಯಾರ್ಥಿನಿ ಸಹನಾ ಪತ್ರಿಕೆಯೊಂದಿಗೆ ಮಾತನಾಡಿ, ನಾನು ಯುಪಿಎಸ್ಸಿ ಮಾಡಬೇಕೆಂದು ಮಹಾದಾಸೆ ಹೊಂದಿದ್ದೆನೆ. ನನ್ನ ಸಾಧನೆಗೆ ಪ್ರೇರಣೆ ನೀಡಿದ ಪಾಲಕರು, ಉಪನ್ಯಾಸಕರಿಗೆ ಕೃತಜ್ಞತೆಗಳನ್ನು ತಿಳಿಸಿದರು.

ವಿದ್ಯಾರ್ಥಿನಿಯ ಸಾಧನೆಗೆ ಉಪನ್ಯಾಸಕರು, ಅತಿಥಿ ಉಪನ್ಯಾಸಕ ವೃಂದ, ಪಾಲಕರು ಅತ್ಯಂತ ಹರ್ಷ ವ್ಯಕ್ತಪಡಿಸಿ ಸಿಹಿ ತಿನ್ನಿಸಿ ಸನ್ಮಾನಿಸಿದರು.
ಪ್ರಾಚಾರ್ಯ ಬಸವರಾಜ ಕುರಿ, ಉಪನ್ಯಾಸಕರಾದ ಬಸವರಾಜ ಪುರಾಣಿಕಮಠ, ಎಚ್.ಆರ್.ಪಾಟೀಲ, ಬಿ.ಎಂ.ಕೊಳವಿ, ಎಂ.ಆರ್.ಬಾಗೇವಾಡಿ, ಆರ್.ಬಿ.ಹುನಗುಂದ, ಬಿ.ಸಿ.ಅಡಕಿ, ಪ್ರೌಡಶಾಲಾ ಶಿಕ್ಷಕ ಎಂ.ಸಿ.ಅಗಸಗಿ, ಶಂಕರ ತುರಮರಿ ಹಾಗೂ ಸಿಬ್ಬಂದಿ ಇದ್ದರು.

ವಿದ್ಯಾರ್ಥಿನಿ ಸಾಧನೆಗೆ ಶಾಸಕ ಮಹಾಂತೇಶ ಕೌಜಲಗಿ, ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ ಹಾಗೂ ಆಡಳಿತ ಮಂಡಳಿ ಸದಸ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ: ವೈಭವದ ಮೆರವಣಿಗೆ

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.