ದಾಹ ತೀರಿಸದ ಶುದ್ಧ ನೀರಿನ ಘಟಕಗಳು

| ನೀರು ಬಾರದೇ ಪರಿತಪಿಸುತ್ತಿರುವ ಜನರು | ಬೇಸಿಗೆಯಲ್ಲಿಯೇ ಕುಡಿಯಲು ನೀರು ಇಲ್ಲದಿದ್ದರೆ ಹೇಗೆ?

Team Udayavani, Jun 9, 2019, 10:26 AM IST

bg-tdy-1..

ಬೆಳಗಾವಿ: ಸ್ಮಾರ್ಟ್‌ ಸಿಟಿ ಯೋಜನೆಯಡಿ ನರಗುಂದಕರ ಭಾವೆ ಚೌಕ್‌ದಲ್ಲಿಯ ಶುದ್ಧ ಕುಡಿಯುವ ನೀರಿನ ಘಟಕ ಬಂದ್‌ ಬಿದ್ದಿರುವುದು.

ಬೆಳಗಾವಿ: ಸ್ಮಾರ್ಟ್‌ ಸಿಟಿ ಯೋಜನೆಯಡಿ ಆಯ್ಕೆಯಾದ ಬೆಳಗಾವಿ ನಗರದಲ್ಲಿ ಜನರ ದಾಹ ತೀರಿಸಲು ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಇದ್ದೂ ಇಲ್ಲದಂತಾಗಿದ್ದು, ಪ್ರಾಯೋಗಿಕವಾಗಿ ಐದು ಕಡೆ ಆರಂಭವಾಗಿದ್ದರೂ ಸಮರ್ಪಕ ನೀರು ಸರಬರಾಜು ಇಲ್ಲದೇ ಕೆಲವು ಘಟಕಗಳು ಬಂದ್‌ ಬಿದ್ದಿದ್ದರಿಂದ ಜನರು ಪರಿತಪಿಸುವಂತಾಗಿದೆ.

ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಸರಿಯಾಗಿ ನೀರು ಪೂರೈಕೆ ಆಗುತ್ತಿಲ್ಲ ಒಂದೆಡೆ ಸ್ಮಾರ್ಟ್‌ ಸಿಟಿ ಅಧಿಕಾರಿಗಳು ಹಾಗೂ ಇನ್ನೊಂದೆಡೆ ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳ ಮಧ್ಯೆ ಸಮನ್ವಯ ಕೊರತೆಯಿಂದಾಗಿ ಜನ ತೊಂದರೆ ಅನುಭವಿಸುವಂತಾಗಿದೆ. ಸರಿಯಾದ ನಿರ್ವಹಣೆಯೂ ಇಲ್ಲದ ಈ ಘಟಕಗಳನ್ನು ಆರಂಭಿಸಿದ್ದಾದರೂ ಎಕೆ ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ತರಾತುರಿಯಲ್ಲಿ ನಿರ್ಮಾಣ: ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಿರುವ ಈ ಘಟಕಗಳು ಕೇವಲ ಕಾಟಾಚಾರಕ್ಕೆ ಮಾಡಿದಂತಾಗಿದೆ. ನಿರಂತರ ನೀರು ಪೂರೈಕೆ ಆಗದ ಸ್ಥಳದಲ್ಲಿಯೇ ಈ ಘಟಕಗಳು ನಿರ್ಮಾಣ ಮಾಡಲಾಗಿದೆ. ಸರಿಯಾಗಿ ಸರ್ವೇ ನಡೆಸದೇ ಘಟಕಗಳನ್ನು ತರಾತುರಿಯಲ್ಲಿ ಆರಂಭಿಸಲಾಗಿದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ ತಮಗೆ ಕೊಟ್ಟಿರುವ ಟಾರ್ಗೆಟ್ ಪೂರ್ಣಗೊಳಿಸಲು ಘಟಕ ಮಾಡಿ ಜನರೊಂದಿಗೆ ಚೆಲ್ಲಾಟ ಆಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂಬ ಆರೋಪ ಸಾರ್ವಜನಿಕರದ್ದಾಗಿದೆ.

ಈಗಾಗಲೇ ನಗರದ ಐದು ಕಡೆ ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ಮಾಣವಾಗಿದೆ. ರವಿವಾರ ಪೇಟೆ, ಧರ್ಮವೀರ ಸಂಭಾಜಿ ವೃತ್ತ, ಗೋವಾವೇಸ್‌, ಶ್ರೀನಗರ ಗಾರ್ಡನ್‌ ಹಾಗೂ ಜಿಲ್ಲಾಧಿಕಾರಿ ಕಚೇರಿ ಬಳಿಯ ಕೋರ್ಟ್‌ ಆವರಣದಲ್ಲಿ ಘಟಕಗಳು ನಿರ್ಮಾಣವಾಗಿವೆ.

ಅಧಿಕಾರಿಗಳಿಗೆ ಹಿಡಿಶಾಪ: ರವಿವಾರ ಪೇಟೆಯಲ್ಲಿರುವ ಘಟಕದಲ್ಲಿ ಅಂತೂ ನೀರೇ ಸಿಗುವುದಿಲ್ಲ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರಸ್ಥರು ಇದ್ದಾರೆ. ಜನರ ಓಡಾಟ ಹೆಚ್ಚಾಗಿ ಇರುವುದರಿಂದ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಅಗತ್ಯವಿದೆ. ಆದರೆ ಘಟಕ ನಿರ್ಮಾಣ ಮಾಡಿದರೂ ನೀರು ಬಾರದಿರುವುದಕ್ಕೆ ಜನರು ಹಿಡಿಶಾಪ ಹಾಕುವಂತಾಗಿದೆ. ಇಲ್ಲಿ ನೀರು ಬರುತ್ತಿಲ್ಲ ಎಂಬುದನ್ನು ಪಾಲಿಕೆಯ ಗಮನಕ್ಕೆ ತಂದರೂ ಯಾವೊಬ್ಬ ಅಧಿಕಾರಿಗಳು ಇತ್ತ ಗಮನಹರಿಸಿಲ್ಲ ಎಂಬುದು ಜನರ ಆರೋಪ.

ಘಟಕ ನಿರ್ಮಾಣವಾಗಿ ಕೆಲವೇ ದಿನಗಳಲ್ಲಿ ಬಂದ್‌ ಆಗಿದೆ. ನೀರಿಗಾಗಿ ಚಿಲ್ಲರೆ ಹಾಕಿದರೆ ಹಣ ವಾಪಸ್ಸು ಬರುತ್ತದೆಯೇ ಹೊರತು ನೀರು ಬರುವುದಿಲ್ಲ. ಒಂದು ಲೀಟರ್‌ಗೆ ಒಂದು ರೂ., ಐದು ಲೀಟರ್‌ಗೆ 2 ರೂ. ಹಾಗೂ 10 ಲೀಟರ್‌ ನೀರಿಗಾಗಿ 5 ರೂ. ನಿಗದಿ ಮಾಡಲಾಗಿದೆ. ಆದರೆ ನೀರೇ ಇಲ್ಲದಿದ್ದಾಗ ಎಲ್ಲಿಂದ ಬರಬೇಕು. ಆರ್‌ಒ ಪ್ಲಸ್‌ ಯುವಿ ನೀರು ಸಿಗುತ್ತದೆ ಎಂಬ ಫಲಕ ಇದ್ದರೂ ನೀರು ಮಾತ್ರ ಯಾರ ಕಣ್ಣಿಗೂ ಕಾಣ್ತಿಲ್ಲ.

ನಿರ್ವಹಣೆ ಇಲ್ಲದ ಘಟಕಗಳು: ನಿರ್ವಹಣೆ ಇಲ್ಲದೇ ರವಿವಾರ ಪೇಟೆಯ ನೀರಿನ ಘಟಕ ಅನಾಥವಾಗಿ ಬಿದ್ದಿದೆ. ನರಗುಂದಕರ ಭಾವೆ ಚೌಕ್‌ದಲ್ಲಿಯೇ ನಿರ್ಮಿಸಿರುವ ಈ ಘಟಕದ ಸುತ್ತಲೂ ಬೀದಿ ಬದಿ ತರಕಾರಿ ವ್ಯಾಪಾರಸ್ಥರು ಕುಳಿತಿರುತ್ತಾರೆ. ಘಟಕ ಆರಂಭವಾಗಿದ್ದಾಗ ಜನ ಇಲ್ಲಿ ನೀರು ತರಲೂ ಹೋಗಲು ಪರದಾಡುವಂತಿತ್ತು. ಈಗಂತೂ ಇಲ್ಲಿ ನೀರಿಲ್ಲದ್ದಕ್ಕೆ ಜನ ತೊಂದರೆ ಪಡುತ್ತಿದ್ದಾರೆ. ಇದರ ಪಕ್ಕದಲ್ಲಿಯೇ ಈ ಮುಂಚೆ ಕುಡಿಯುವ ನೀರಿನ ಟ್ಯಾಂಕ್‌ ಅಳವಡಿಸಲಾಗಿತ್ತು. ಈಗ ಈ ಘಟಕವೂ ಇಲ್ಲ, ಟ್ಯಾಂಕರ್‌ ಕೂಡ ಇಲ್ಲವಾಗಿದೆ.

ಡಿಸಿ ಕಚೇರಿ ಆವರಣ, ಶ್ರೀನಗರ, ಧರ್ಮವೀರ ಸಂಭಾಜಿ ವೃತ್ತದಲ್ಲಿರುವ ಘಟಕಗಳಲ್ಲಿಯೂ ಒಂದೊಂದು ದಿನ ನೀರೇ ಇರುವುದಿಲ್ಲ. ಸರಿಯಾದ ನಿರ್ವಹಣೆ ಮಾಡದ್ದಕ್ಕೆ ನೀರು ಬರುತ್ತಿಲ್ಲ. ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಪಾಲಿಕೆ ಅಧಿಕಾರಿಗಳಿಗೆ, ನೀರು ಸರಬರಾಜು ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾರೊಬ್ಬರೂ ಇತ್ತ ಗಮನ ಹರಿಸುತ್ತಿಲ್ಲ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.