ರಾಜಾಪೂರ: ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೋರ್ವ ನೇಣಿಗೆ ಶರಣು..!


Team Udayavani, Sep 19, 2021, 5:26 PM IST

rajapura news

ರಾಜಾಪೂರ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪೂರದಲ್ಲಿ ವ್ಯಕ್ತಿವೊರ್ವ ನೇಣಿಗೆ ಶರಣಾದ ಘಟನೆ ನಡೆದಿದೆ.

ನೇಣಿಗೆ ಶರಣಾದ ವ್ಯಕ್ತಿ ರಾಜಾಪೂರ ಗ್ರಾಮದ ಗಂಗಪ್ಪ ಪೀರಪ್ಪ ವಡೆಯರ (50) ಎಂದು ತಿಳಿದು ಬಂದಿದೆ.  ತಾನೂ ಮಾಡಿದ ಅಪಘಾತವೇ ಇತನ ಸಾವಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ.

ಒಂದು ತಿಂಗಳ ಹಿಂದೆ ರಾಯಭಾಗದಲ್ಲಿ ಬೈಕ್ ಅಪಘಾತವೊಂದು ಸಂಭವಿಸಿ, ಓರ್ವ ವ್ಯಕ್ತಿ ಮೃತಪಟ್ಟಿದ್ದರು. ಆ ಅಪಘಾತ ಸಂಭವಿಸಲು ಈತನೇ ಕಾರಣವೆಂದು ರಾಯಭಾಗ ಪೊಲೀಸ್ ಠಾಣೆಯಲ್ಲಿ  ಆರೋಪಿಯನ್ನಾಗಿ ಪ್ರಕರಣ ದಾಖಲು ಮಾಡಿದ್ದರು. ಅಪಘಾತವಾದ ಬೈಕಿಗೆ ಸರಿಯಾದ ದಾಖಲೆಗಳು ಇರಲಿಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ಆರೋಪ ಸಾಬೀತಾದರೆ ತನ್ನ ಆಸ್ತಿಯನ್ನು ಮಾರಬೇಕಾಗುತ್ತದೆ ಎಂದು ಈತ ಹೆದರಿ ಮಾನಸಿಕವಾಗಿ ನೊಂದುಕೊಂಡು ಸಾರಾಯಿ ಕುಡಿಯಲು ಪ್ರಾರಂಭಿಸಿದನೆಂದು ಹೇಳಲಾಗುತ್ತಿದೆ. ‌

ಹೀಗೆ ಪ್ರತಿದಿನ ಕುಡಿದು ಅಡ್ಡಾಡಲು ಪ್ರಾರಂಭಿಸಿದ ಈ ವ್ಯಕ್ತಿ ಗುರುವಾರ (ದಿ.16) ಸಾಯಂಕಾಲದಿಂದ ಕಾಣೆಯಾಗಿದ್ದನು. ಮಾರನೇ ದಿನವಾದರೂ  ಮನೆಗೆ ಬಾರದಿರುವುದನ್ನು ಗಮನಿಸಿದ ಮನೆಯವರು ಸಂಬಂಧಿಕರಿಗೆಲ್ಲ ಪೋನ್ ಮಾಡಿ ವಿಚಾರಿಸಿದ್ದು, ಕುಡಿದು ಎಲ್ಲಿಯೋ ಹೋಗಿರಬಹುದು ಮತ್ತೆ ಮನೆಗೆ ವಾಪಸ್ಸು ಬರುತ್ತಾನೆಂದು ಸುಮ್ಮನಾಗಿದ್ದಾರೆ. ಆದರೆ ಗಂಗಪ್ಪ ಮಾತ್ರ ಈ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದು, ರಾಜಾಪೂರದ ಹೊರ ವಲಯದ ಹೊಲದಲ್ಲಿದ್ದ ಬಾವಿಯ ಪಕ್ಕದ ಮರಕ್ಕೆ ನೇಣಿಗೆ ಶರಣಾಗಿದ್ದಾನೆ.

ಇದನ್ನೂ ಓದಿ:ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ: ಕಟೀಲ್ ವಿಶ್ವಾಸ

ರವಿವಾರ(ದಿ.19) ಬೆಳಗ್ಗೆ 6 ಗಂಟೆ ಸುಮಾರಿಗೆ ಆ ಹೊಲದ ಮಾಲೀಕ ಗದ್ದೆಗೆ ನೀರು ಹಾಯಿಸಲೆಂದು ಬಾವಿ ಕಡೆ ಹೋದಾಗ ಈ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಕಂಡು ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಘಟಪ್ರಭಾ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆಯನ್ನು ಆರಂಭಿಸಿದ್ದಾರೆ.

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.