ಮನೆ ಹಂಚಿಕೆಗೆ ನಿರಾಶ್ರಿತರ ಮನವಿ


Team Udayavani, May 14, 2019, 1:08 PM IST

bel-2

ಬೆಳಗಾವಿ: ಇಲ್ಲಿಯ ಶ್ರೀನಗರ ಬಳಿ ರಾಜು ಆವಾಸ್‌ ಯೋಜನೆಯಡಿ ನಿರ್ಮಿಸಿದ 272 ಬಹುಮಹಡಿ ಕಟ್ಟಡಗಳನ್ನು ವಂಟಮೂರಿ ಜೋಪಡಪಟ್ಟಿ ನಿರಾಶ್ರಿತರಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿ ನಿವಾಸಿಗಳು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ವಂಟಮೂರಿ ಕಾಲೋನಿ ಜೋಪಡಪಟ್ಟಿಯಲ್ಲಿ ಸುಮಾರು 20-25 ವರ್ಷಗಳಿಂದ ನಿರಾಶ್ರಿತರಾಗಿ ವಾಸವಾಗಿದ್ದು, ಈವರೆಗೆ ಯಾವುದೇ ಆಶ್ರಯವಿಲ್ಲದೇ ಜೀವನ ಸಾಗಿಸುತ್ತಿದ್ದೇವೆ. ರಾಜು ಆವಾಸ್‌ ಯೋಜನೆಯಡಿ ಜಿ ಪ್ಲಸ್‌ 3 ಯೋಜನೆಯಡಿ ಅರ್ಜಿ ತುಂಬಿ ಎಲ್ಲ ದಾಖಲಾತಿಗಳನ್ನು ಲಗತ್ತಿಸಿ ಕೊಡಲಾಗಿದೆ. ಆಗಿನ ಜಿಲ್ಲಾಧಿಕಾರಿ ಎನ್‌. ಜಯರಾಮ್‌ ಅವರು ಶ್ರೀನಗರ ಗಾರ್ಡನ್‌ ಬಳಿಯ ಆಶ್ರಯ ಮನೆ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಎಂದು ದೂರಿದರು.

ಆಶ್ರಯ ಮನೆಗಳಿಗೆ ಹಣ ತುಂಬಲು ಸಿದ್ಧರಿದ್ದರೂ ನಮಗೆ ಚಲನ್‌ ನೀಡದೇ, ನಮ್ಮ ಅಹವಾಲು ಸ್ವೀಕರಿಸದೇ, ಅರ್ಹ ಫಲಾನುಭವಿಗಳನ್ನು ಬದಿಗಿಟ್ಟು ತರಾತುರಿಯಲ್ಲಿ ಬೇರೆಯವರಿಂದ ಅರ್ಜಿ ತುಂಬಿಸಿಕೊಂಡಿದ್ದಾರೆ. ಮಹಾನಗರ ಪಾಲಿಕೆಯವರು ಸರಿಯಾದ ಮಾಹಿತಿ ನೀಡುತ್ತಿಲ್ಲ. ಜನಪ್ರತಿನಿಧಿಗಳನ್ನು ಕೇಳಿದರೆ ಚುನಾವಣಾ ನೀತಿ ಸಂಹಿತಿ ಎಂದು ಹೇಳುತ್ತಿದ್ದಾರೆ. ಈಗ ನೋಡಿದರೆ ಲಾಟರಿ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ನಮ್ಮ ಕಾಲೋನಿಗೆ ಜಿಲ್ಲಾಧಿಕಾರಿಗಳು ಇತರೆ ಅಧಿಕಾರಿಗಳೊಂದಿಗೆ ಬಂದು ಭೇಟಿ ನೀಡಬೇಕು. ಆಶ್ರಯ ಮನೆಗಳಿಗಾಗಿ ಜನಪ್ರತಿನಿಧಿಗಳು ಹಾಗೂ ಮಹಾನಗರ ಪಾಲಿಕೆ ಸದಸ್ಯರ ಕಡೆಗೆ ತಿರುಗಾಡಿ ಸಾಕಾಗಿ ಹೋಗಿದೆ. ನಮ್ಮ ಜೀವನ ಸ್ಥಿತಿಗತಿ ನೋಡಿ ಮುಂದಿನ ಕ್ರಮ ಕೈಗೊಳ್ಳಬೇಕು. ಝೋಪಡಪಟ್ಟಿ ನಿವಾಸಿಗಳಿಗೆ ಆಶ್ರಯ ಒದಗಿಸಿ ನ್ಯಾಯ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.

ನಿವಾಸಿಗಳಾದ ಮಾರುತಿ ಗೊಡಚಿ, ಬಸಪ್ಪ ಕರಡಿಗುಡ್ಡ, ಶಿವಪ್ಪ ಬೆಡಸೂರ, ರಮೇಶ ಮಾದರ, ಕರಿಯಪ್ಪ ಮಾದರ, ರಮೇಶ ಪ್ಯಾಟಿ, ಬೀರಪ್ಪ ಚೌಡಕಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

Jaya-Swamiji

Reservation: ಬೆಳಗಾವಿಯಲ್ಲಿ ಸೆ.22ಕ್ಕೆ ಲಿಂಗಾಯತ ಪಂಚಮಸಾಲಿ ವಕೀಲರ ಬೃಹತ್ ಸಮಾವೇಶ

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Coat ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

Missing Case; ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.