![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 31, 2020, 3:57 PM IST
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ 11 ಏತ ನೀರಾವರಿ ಯೋಜನೆ ಜಾರಿಗೆ ಕರ್ನಾಟಕ ನೀರಾವರಿ ನಿಗಮ ಅನುಮತಿ ನೀಡಿದೆ. ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಯೋಜನೆಗಳು ಶೀಘ್ರ ಅನುಷ್ಠಾನವಾದರೆ ಇದೊಂದು ಇತಿಹಾಸ ಎಂದು ಹಿರಿಯ ಮುಖಂಡ ಬಿ.ಆರ್.ಸಂಗಪ್ಪಗೋಳ ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ 11 ಏತ ನೀರಾವರಿ ಯೋಜನೆಯಿಂದ ಎರಡು ಲಕ್ಷ ಎಕರೆಗೂ ಅಧಿ ಕ ಜಮೀನಿಗೆ ನೀರಾವರಿ ಸೌಲಭ್ಯ ಸಿಗಲಿದೆ. 9.1 ಟಿಎಂಸಿ ಸಾಮರ್ಥ್ಯದ ಯೋಜನೆ ಇದಾಗಿದೆ. ಈಗಾಗಲೇ ಸರ್ವೇ ಮಾಡಲು ಏಜೆನ್ಸಿ ಗುರ್ತಿಸಲಾಗಿದೆ. ಈವರೆಗೆ ಇಂತಹ ದೊಡ್ಡ ಯೋಜನೆಯನ್ನು ಯಾರೂ ಮಾಡಿಲ್ಲ, ಅದನ್ನು ರಮೇಶ ಜಾರಕಿಹೊಳಿ ಮಾಡಿರುವುದು ರೈತಾಪಿ ಜನರಿಗೆ ದೊಡ್ಡ ಕೊಡುಗೆ ಕೊಟ್ಟಂತಾಗಿದೆ ಎಂದರು. ಚಿಕ್ಕೋಡಿ ಜಿಲ್ಲೆ ರಚನೆ ಭರವಸೆ: ಕೊರೊನಾ ಸೋಂಕು ಪ್ರಭಾವ ಕಡಿಮೆಯಾದ ಬಳಿಕ ಚಿಕ್ಕೋಡಿ ಜಿಲ್ಲೆ ರಚನೆ ಬಗ್ಗೆ ಸಿಎಂ ಬಳಿ ಚರ್ಚಿಸುತ್ತೇನೆಂದು ಸಚಿವ ರಮೇಶ ಜಾರಕಿಹೊಳಿ ಆಶ್ವಾಸನೆ ನೀಡಿದ್ದಾರೆ. ಚಿಕ್ಕೋಡಿ ಜಿಲ್ಲೆ ಮಾಡಲು ಯಾರು ಯಾರು ರಾಜಕಾರಣ ಮಾಡಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು ಸಂಗಪ್ಪಗೋಳ ಕಿಡಿಕಾರಿದರು.
ಚಿಕ್ಕೋಡಿ ಜಿಲ್ಲೆಯ ಘೋಷಣೆ ಬಗ್ಗೆ ನಾಟಕದ ಮಾತು ಹಾಗೂ ಸ್ವಚ್ಛ ಮಾತು ನನಗೆ ಅರ್ಥವಾಗುತ್ತದೆ. ಇವರಿಗೆ ರಾಜಕಾರಣ ಕಲಿಸಿದವನು ನಾನು. ಆದರೆ ರಮೇಶ್ ಜಾರಕಿಹೊಳಿ ಜಿಲ್ಲೆ ಮಾಡುತ್ತೇನೆಂದು ಆಶ್ವಾಸನೆ ಕೊಟ್ಟಿದ್ದಾರೆ. ಇಲ್ಲ ಅಂದರೆ ಇಲ್ಲ, ಹೂಂ ಎಂದರೆ ಹೂಂ ಎನ್ನುವ ಮಾತುಗಳನ್ನು ರಮೇಶ್ ಮಾತನಾಡಿದ್ದಾರೆ. ಇವರ ಮಾತುಗಳನ್ನ ಕೇಳಿದರೆ ಚಿಕ್ಕೋಡಿಯನ್ನು ಜಿಲ್ಲೆ ಮಾಡುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದರು. ಚಿಕ್ಕೋಡಿಯಲ್ಲಿ 500 ಹಾಸಿಗೆಯ ಸಿವಿಲ್ ಆಸ್ಪತ್ರೆ ಮಾಡಿ ಎಂದು ಸಚಿವ ರಮೇಶ ಜಾರಕಿಹೊಳಿ ಹಾಗೂ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಮನವಿ ಮಾಡಲಾಗಿದೆ. ಇದರಿಂದ ಅಥಣಿ, ಕಾಗವಾಡ, ರಾಯಬಾಗ, ನಿಪ್ಪಾಣಿ ಹಾಗೂ ಹುಕ್ಕೇರಿ ತಾಲೂಕಿನ ಗ್ರಾಮೀಣ ಜನರಿಗೆ ಅನುಕೂಲವಾಗುತ್ತದೆ ಎಂದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.