ಠೇವಣಿ ಹಣ ವಾಪಸ್ ನೀಡುವಂತೆ ಆಗ್ರಹ
Team Udayavani, Nov 26, 2019, 2:12 PM IST
ಬೆಳಗಾವಿ: ಸಮೃದ್ಧಿ ಜೀವನ ಮಲ್ಟಿ ಸ್ಟೇಟ್, ಮಲ್ಟಿ ಪರ್ಪಸ್ ಕೋ ಆಪ್ ಸೊಸೈಟಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಹಣ ಮರಳಿಸದೇ ವಂಚನೆ ಮಾಡಿದ್ದು, ಹೀಗಾಗಿ ಈ ಸೊಸೈಟಿ ವಿರುದ್ಧ ಕ್ರಮ ಕೈಗೊಂಡು ಗ್ರಾಹಕರ ಹಣ ವಾಪಸ್ಸು ನೀಡಬೇಕು ಎಂದು ಆಗ್ರಹಿಸಿ ಠೇವಣಿದಾರರು, ಏಜೆಂಟರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಮಹಾರಾಷ್ಟ್ರದಲ್ಲಿ ಮುಖ್ಯ ಕಚೇರಿ ಹೊಂದಿರುವ ಈ ಸೊಸೈಟಿ ದೇಶದ 17 ಕಡೆಗಳಲ್ಲಿ 17 ಶಾಖೆಗಳನ್ನುತೆರೆದಿದೆ. 2009ರಿಂದ 2017ರ ಅವಧಿಯಲ್ಲಿ ಕರ್ನಾಟಕದಲ್ಲಿ 4 ಸಾವಿರ ಕೋಟಿ ರೂ.ಗೂ ಹೆಚ್ಚು ವಹಿವಾಟು ನಡೆಸಿದೆ. ಅದೇ ರೀತಿ ಬೆಳಗಾವಿ ಜಿಲ್ಲೆಯ ಗೋಕಾಕ, ಸವದತ್ತಿ, ಬೈಲಹೊಂಗಲ,
ರಾಮದುರ್ಗ ತಾಲೂಕುಗಳಲ್ಲಿ 95 ಕೋಟಿಗಿಂತಲೂಹೆಚ್ಚು ಹಣವನ್ನು ಗ್ರಾಹಕರು ಈ ಸೊಸೈಟಿಯಲ್ಲಿ ಹೂಡಿಕೆ ಮಾಡಿದ್ದಾರೆ ಎಂದರು. ಕೆಲ ತಿಂಗಳುಗಳಿಂದ ಗ್ರಾಹಕರು ತಮ್ಮ ಠೇವಣಿ ಹಣ ಕೇಳಲು ಸೊಸೈಟಿಗೆ ಹೋದರೆ ಸಿಬ್ಬಂದಿ ಸರಿಯಾಗಿ ಸ್ಪಂದಿಸುತ್ತಿಲ್ಲ. ಹಣ ಮರಳಿಸದೇ ತಮಗೆ ವಂಚನೆ ಮಾಡಲಾಗಿದೆ. ಹೀಗಾಗಿ ಅನೇಕ ಠೇವಣಿದಾರರು ವಂಚನೆಗೆ ಒಳಗಾಗಿದ್ದಾರೆ. ಆರ್ಥಿಕ ಸಂಕಷ್ಟದಿಂದ ತೊಂದರೆ ಅನುಭವಿಸುತ್ತಿರುವ ಠೇವಣಿದಾರರ ಬದುಕು ಬೀದಿಗೆ ಬಿದ್ದಿದೆ. ಕೂಡಲೇ ಈ ಅಂತಾರಾಜ್ಯ ಸೊಸೈಟಿ ವಿರುದ್ಧ ಕೇಂದ್ರ ಹಾಗೂ ರಾಜ್ಯಸರ್ಕಾರ ಕ್ರಮ ಕೈಗೊಂಡು ಹಣ ಹಿಂದಿರುಗಿಸಬೇಕು ಎಂದು ಒತ್ತಾಯಿಸಿದರು. ಠೇವಣಿದಾರರಾದ ಪ್ರಶಾಂತ ಪೇಟಿ, ಮಾರುತಿ ಪಾಟೀಲ, ನಾಮದೇವ ದಾಸರ, ಈರವ್ವಾ ಕಡಕೋಳ, ಮಾಲಾ ಪೇಟಿ, ಮಹಾದೇವ ತಿಗಳನ್ನವರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ
Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ
Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ
Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು
Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.