ಲಾಕ್‌ಡೌನ್‌ನಲ್ಲಿ ಖಾಲಿ ಕೂರದೇ ರೈತರೇ ನಿರ್ಮಿಸಿದ್ರು ರಸ್ತೆ!

ಕಿವಿ ಇಲ್ಲದ ಸರ್ಕಾರಕ್ಕೆ ರಸ್ತೆ ನಿರ್ಮಿಸಿ ತೊಡೆ ತಟ್ಟಿದ ಅನ್ನದಾತ

Team Udayavani, May 5, 2020, 3:28 PM IST

ಲಾಕ್‌ಡೌನ್‌ನಲ್ಲಿ  ಖಾಲಿ ಕೂರದೇ ರೈತರೇ ನಿರ್ಮಿಸಿದ್ರು ರಸ್ತೆ!

ಬೆಳಗಾವಿ: ಲಾಕ್‌ಡೌನ್‌ ಮಧ್ಯೆ ಖಾಲಿ ಕುಳಿತು ಸಮಯ ವ್ಯರ್ಥ ಮಾಡದೇ ತಮ್ಮ ಹೊಲಗಳಿಗೆ ಹೋಗುವ 2.5 ಕಿ.ಮೀ. ರಸ್ತೆಗಾಗಿ ರೈತರೇ ತಮ್ಮ ಕೈಯಿಂದ ಹಣ ವೆಚ್ಚ ಮಾಡಿ, ಅವರೇ ಕಲ್ಲು-ಮಣ್ಣು ಹೊತ್ತು ಸುಸಜ್ಜಿತ ರಸ್ತೆ ನಿರ್ಮಿಸುವ ಮೂಲಕ ಸರ್ಕಾರಕ್ಕೆ ತೊಡೆ ತಟ್ಟಿದ್ದಾರೆ.

ಬೆಳಗಾವಿ ತಾಲೂಕಿನ ಮಾರೀಹಾಳ ಗ್ರಾಮದ ರೈತರು ತಮ್ಮ ಹೊಲಗಳಿಗೆ ಹೋಗಲು ನಿತ್ಯ ಪರದಾಡುತ್ತಿದ್ದರು. ಕಳೆದ ಸಲ ಅಪ್ಪಳಿಸಿದ್ದ ಪ್ರವಾಹದಲ್ಲಿ ಇಡೀ ಮಣ್ಣಿನ ರಸ್ತೆ ಕಿತ್ತು ನಡೆದಾಡುವುದೇ ದುಸ್ತರವಾಗಿತ್ತು. ಇಂಥದರಲ್ಲಿ ಮುಂಬರುವ ಮಳೆಗಾಲದಲ್ಲಿ ಕಷ್ಟ ಪಡಬಾರದೆಂಬ ಉದ್ದೇಶದಿಂದ ರೈತರೇ ಬೆಳಗ್ಗೆಯಿಂದ ಸಂಜೆವರೆಗೆ ಬೆವರು ಸುರಿಸಿ ದುಡಿದು ರಸ್ತೆ ನಿರ್ಮಿಸಿ ಮಾದರಿಯಾಗಿದ್ದಾರೆ.

ಮಾರೀಹಾಳ ಗ್ರಾಮದ ಶ್ರೀ ಪತ್ರಿ ಬಸವಣ್ಣ ದೇವಸ್ಥಾನದಿಂದ ಮೋದಗಾ ಗ್ರಾಮದ ಹೊಲಗಳಿಗೆ ಸಂಪರ್ಕಿಸುವ ರಸ್ತೆ ಹದಗೆಟ್ಟಿತ್ತು. ಕಳೆದ 15 ವರ್ಷಗಳಿಂದ ರೈತರು ನಿತ್ಯ ಸಂಕಟ ಪಡುತ್ತಿದ್ದರು. ರಸ್ತೆ ನಿರ್ಮಿಸುವಂತೆ ಸಂಸದರು, ಶಾಸಕರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಬಳಿ ಕೈ ಮುಗಿದು ಬೇಡಿಕೊಂಡಿದ್ದರೂ ಪ್ರಯೋಜನವಾಗಿರಲಿಲ್ಲ.

ಶಿಫ್ಟ್‌ ಪ್ರಕಾರ ದುಡಿದ ರೈತರು: ಈ ರಸ್ತೆಗೆ ಹೊಂದಿಕೊಂಡು 250ಕ್ಕೂ ಹೆಚ್ಚು ರೈತರ ಗದ್ದೆಗಳು ಇವೆ. ಪ್ರತಿಯೊಬ್ಬ ರೈತರಿಂದ 2-3 ಸಾವಿರ ರೂ. ಸಂಗ್ರಹಿಸಿಕೊಂಡು 400 ಟ್ರಿಪ್‌ ಕಲ್ಲು ಹಾಗೂ 400 ಟ್ರಿಪ್‌ ಟ್ರ್ಯಾಕ್ಟರ್‌ ಕೆಂಪು ಮಣ್ಣು ತಂದಿದ್ದಾರೆ. ಕಳೆದ ಆರೇಳು ದಿನಗಳಿಂದ 40 ಜನ ರೈತರ ತಂಡ ಶಿಫ್ಟ್‌ ಪ್ರಕಾರ ಕೆಲಸ ಮಾಡಿ ಬಹುತೇಕ ರಸ್ತೆ ಕೆಲಸ ಮುಗಿಸಿದೆ. 15 ಅಡಿ ಅಗಲ ಹಾಗೂ ಆರು ಅಡಿ ಎತ್ತರದಲ್ಲಿ ರಸ್ತೆಯನ್ನು ನಿರ್ಮಿಸಿಕೊಂಡು ಮುಂಬರುವ ಮಳೆಯಿಂದ ಎದುರಾಗುವ ಸಮಸ್ಯೆಯಿಂದ ಮುಕ್ತಿ ಪಡೆದಿದ್ದಾರೆ.

ಖಾಲಿ ಕೂರದೇ ಕೆಲಸ ಮಾಡಿದ್ರು: ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಬಹುತೇಕ ರೈತರಿಗೆ ಕೃಷಿ ಚಟುವಟಿಕೆ ಅಷ್ಟಕ್ಕಷ್ಟೇ ಇತ್ತು. ಜತೆಗೆ ಕಳೆದ ಒಂದು ವಾರದಿಂದ ಗ್ರಾಮದಲ್ಲಿ ಶ್ರೀ ಬಸವೇಶ್ವರರ ಜಾತ್ರೆ ಇತ್ತು. ಜಾತ್ರೆ ವೇಳೆ ಗ್ರಾಮದ ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ವಾರ ಬಿಡಲಾಗುತ್ತದೆ. ಈ ಸಲದ ಜಾತ್ರೆ ಲಾಕ್‌ಡೌನ್‌ ದಿಂದಾಗಿ ರದ್ದು ಮಾಡಲಾಗಿತ್ತು. ಇಂಥದರಲ್ಲಿ ರೈತರಿಗೆ ಖಾಲಿ ಕೂರುವುದಕ್ಕಿಂತ ತಾವೇ ಸ್ವತಃ ರಸ್ತೆ ನಿರ್ಮಿಸಬೇಕೆಂಬ ಯೋಚನೆ ಹೊಳೆದಿದೆ. ಸರ್ಕಾರದವರು ಗ್ರಾಮ, ಪಟ್ಟಣವನ್ನೇ ಕೇಂದ್ರೀಕರಿಸಿಕೊಂಡು ಕೆಲಸ ಮಾಡುತ್ತಾರೆ ಹೊರತು ಹೊಲದಲ್ಲಿರುವ ರಸ್ತೆ ಮಾಡೋದಿಲ್ಲ. ಹೀಗಾಗಿ ನಾವೆಲ್ಲ ಸೇರಿಕೊಂಡು ರಸ್ತೆ ನಿರ್ಮಿಸುವ ಮೂಲಕ ನಿರಾಳರಾಗಿದ್ದೇವೆ ಎನ್ನುತ್ತಾರೆ ರೈತರಾದ ಈರಣ್ಣ ಮತ್ತು ಉದಯ ಮಲ್ಲನ್ನವರ.

ಹೊಲದ ಮಧ್ಯ ಭಾಗದಲ್ಲಿರುವ ಈ ರಸ್ತೆ ನಿರ್ಮಾಣಕ್ಕಾಗಿ ಅನೆಕ ಜನಪ್ರತಿನಿಧಿ  ಗಳ ಗಮನಕ್ಕೆ ತರಲಾಗಿದೆ. 15 ವರ್ಷಗಳಿಂದ ಅಲೆದಾಡಿದರೂ ರಸ್ತೆ ಮಾತ್ರ ನಿರ್ಮಾಣವಾಗಿರಲಿಲ್ಲ. ಕಳೆದ ವರ್ಷದ ಭಾರೀ ಮಳೆಯಿಂದ ಮಣ್ಣೆಲ್ಲ ಕಿತ್ತು ಹೋಗಿತ್ತು. ಈಗ ಲಾಕ್‌ಡೌನ್‌ನಲ್ಲಿ ನಾವೆಲ್ಲ ಸೇರಿಕೊಂಡು ಕೈಯಿಂದ ಹಣ ಕೂಡಿಸಿ ಲಕ್ಷಾಂತರ ರೂ. ಖರ್ಚು ಮಾಡಿ ರಸ್ತೆ ನಿರ್ಮಿಸಿದ್ದೇವೆ. -ಮಲ್ಲಿಕಾರ್ಜುನ ಮಾದಮ್ಮನವರ, ರೈತ ಮುಖಂಡರು

ಖಾಲಿ ಕುಂತ ಟೈಮ್‌ ವೇಸ್ಟ್‌ ಮಾಡೋದಕ್ಕಿಂತ ನಾವ ಎಲ್ಲಾರೂ ಕೈಯಿಂದ ರೊಕ್ಕಾ ಹಾಕಿ ರಸ್ತಾ ಮಾಡ್ಕೊಳ್ಳಾಕತೇವ. ಮುಂದ ಮಳಿ ಬಂತಂದ್ರ ನಮ್ಮ ಹೊಲಾ ಅತ್ತ, ನಾವ ಇತ್ತ ಆಗತಿದ್ರು. ಹೆಂಗರೇ ಮಾಡಿ ರಸ್ತಾ ಮಾಡೋಣು ಅಂತ ಎಲ್ಲಾರೂ ಒಂದಾಗಿ ದುಡದ ರಸ್ತಾ ಮಾಡಕೊಂಡ ಪಾರ ಆಗೇವ. -ಸಿದ್ದಯ್ಯ ಪೂಜೇರಿ, ರೈತರು

 

­-ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.