![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 28, 2021, 2:29 PM IST
ಐಗಳಿ: ಅಥಣಿ ತಾಲೂಕಿನಲ್ಲಿ ತೊಗರಿ ಬೆಳೆಗಾರರು ಅಪಾರ ಹಾನಿಗೊಳಗಾಗಿದ್ದು, ಸರಕಾರ ಸಮಗ್ರ ಸಮೀಕ್ಷೆ ಮಾಡಿ ಯೋಗ್ಯ ಪರಿಹಾರ ನೀಡಬೇಕು ಹಾಗೂ ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಕರಿ ಮಸೂತಿ ನೀರಾವರಿಯಿಂದ ಹೊರಗುಳಿದ ತಾಲೂಕಿನ ಒಣ ಬೇಸಾಯದ ಜಮೀನುಗಳಲ್ಲಿ ತೊಗರಿ ಬಿತ್ತನೆಗೆ ವೇಳೆಯಲ್ಲಿ ಮಳೆ ಕೊರತೆಯಿಂದ ಕೆಲಭಾಗ ಸರಿಯಾಗಿ ನಾಟಿ ಆಗಿಲ್ಲ. ಬಹುತೇಕ ಜಮೀನುಗಳಿಗೆ ನೀರಿನ ಕೊರತೆಯಾಗಿ ಹಾನಿಗೊಳಪಟ್ಟಿತು. ಇನ್ನೂಳಿದ ಕೆಲ ತೊಗರಿ ಬೆಳೆ ಕಾಳು ತುಂಬುವ ಸಮಯದಲ್ಲಿಯೇ ಅಕಾಲಿಕ ತುಂತುರು ಮಳೆ ಆಪತ್ತು ತಂದು ಕೋಟ್ಯಾಂತರ ಫಸಲು ಹಾಳು ಮಾಡಿತು. ಕಾರಣ ಒಣ ಬೇಸಾಯಗಾರರ ಬದುಕು ದುಸ್ತರವಾಗಿದೆ.
ಬಿಜೆಪಿ ಕಚೇರಿಯಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿದರು.
ಕಾಯಿ ಕಟ್ಟುವ ಹಂತದಲ್ಲಿಯೇ ಒಣಗಿದ ತೊಗರಿ ಬೆಳೆ. ಸಮೀಕ್ಷೆ ಮಾಡಿ ಸರಕಾರಕ್ಕೆ ವರದಿ ನೀಡಿ ತೊಂದರೆಯಲ್ಲಿರುವ ತೊಗರಿ ಬೆಳೆಗಾರರ ಸಹಾಯಕ್ಕೆ ಬರಬೇಕು ಎಂದು ಕೇದಾರಿಗೌಡ ಬಿರಾದಾರ ಒತ್ತಾಯಿಸಿದ್ದಾರೆ.
ಅಥಣಿ ಪೂರ್ವ ಭಾಗದ ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಮಳೆಯಾಗಿಲ್ಲ. ಹೀಗಾಗಿ ತೊಗರಿ ಬೆಳೆ ಒಣಗುತ್ತಿವೆ. ಇಲಾಖೆ ಸಮಗ್ರ ಸರ್ವೇ ಮಾಡಿ ರೈತರಿಗೆ ಪರಿಹಾರ ಮತ್ತು ಅಥಣಿ ತಾಲೂಕನ್ನು ಬರ ಪ್ರದೇಶ ಎಂದು ಘೋಷಿಸಬೇಕು ಎಂದು ತಾಪಂ ಸದಸ್ಯ ಯಲ್ಲಪ್ಪ ಮಿರ್ಜಿ ಆಗ್ರಹಿಸಿದ್ದಾರೆ.
ಅಲ್ಪಸ್ವಲ್ಪ ಜಮೀನಿರುವ ರೈತರು ಬೆಳೆ ತೊಗರಿಯನ್ನೇ ಅವಲಂಬಿಸಿದ್ದು, ಬೆಳೆ ಹಾಳಾಗಿ ಅವರ ಬದುಕು ಕಷ್ಟಕರವಾಗಿದೆ. ಕಾರಣ ಸರಕಾರ ಯೋಗ್ಯ ಪರಿಹಾರ ಕೊಡಬೇಕು ಎಂದು ಐಗಳಿ ಪ್ರಗತಿಪರ ರೈತ ಶಂಕರಗೌಡ ಪಾಟೀಲ ಒತ್ತಾಯಿಸಿದ್ದಾರೆ.
ತೆಲಸಂಗ ಹೊಬಳಿಯಲ್ಲಿ 8000 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆಯಿದ್ದು, ಶೇ.80ರಷ್ಟು ನೀರಿನ ಕೊರತೆಯಿಂದ ಹಾಳಾಗಿದೆ. ಇದರ ಸಮಗ್ರ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ತೆಲಸಂಗ ಹೋಬಳಿ ಕೃಷಿ ಅಧಿಕಾರಿ ಯಂಕಪ್ಪ ಉಪ್ಪಾರ ತಿಳಿಸಿದ್ದಾರೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.