![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 13, 2024, 6:31 PM IST
ಬೆಳಗಾವಿ: ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಸಿಗುತ್ತಿರುವ ಅಭೂತಪೂರ್ವ ಬೆಂಬಲ ನೋಡಿ ಇಂದು ರಾತ್ರಿ ಲಕ್ಷ್ಮಿ ಹೆಬ್ಬಾಳಕರಗೆ ನಿದ್ದೆ ಬರುವುದಿಲ್ಲ. ಮಾತ್ರೆ ತೆಗೆದುಕೊಂಡು ಮಲಗಬೇಕು. ಸಾಧ್ಯವಾದರೆ ಎಕ್ಸಟ್ರಾ ಪೆಗ್ ತೆಗೆದುಕೊಂಡು ನಿದ್ದೆ ಮಾಡಬೇಕು ಎಂದು ಮಾಜಿ ಶಾಸಕ ಸಂಜಯ ಪಾಟೀಲ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ಶನಿವಾರ ನಡೆದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಕಾಲಿಡುತ್ತಿದ್ದಂತೆ ಹೆಬ್ಬಾಳಕರ ಅವರ ನಿದ್ದೆ ಹಾರಿ ಹೋಗಿದೆ. ಹೀಗಾಗಿ ಎಕ್ಸಟ್ರಾ ಪೆಗ್ ತೆಗೆದುಕೊಂಡು ನಿದ್ದೆ ಮಾಡಬೇಕು ಎಂದರು.
ಬೆಳಗಾವಿ ಲೋಕಸಭೆ ಕ್ಷೇತ್ರದ ಎಲ್ಲಾ ಕಡೆಗೆ ನಾನು ಪ್ರಚಾರ ಭಾಷಣ ಮಾಡುತ್ತಿದ್ದೇನೆ. ಗೋಕಾಕ, ಅರಭಾವಿ ವಿಧಾನಸಭಾ ಕ್ಷೇತ್ರಕ್ಕಿಂತಲೂ ಬೆಳಗಾವಿ ಗ್ರಾಮೀಣದಲ್ಲಿ ಅತಿ ಹೆಚ್ಚು ಮಹಿಳೆಯರು ಸೇರಿರುವ ಮೊದಲನೇ ಸಭೆ ಇದಾಗಿದೆ. ಹೀಗಾಗಿ ಹೆಬ್ಬಾಳಕರರಿಗೆ ನಿದ್ದೆ ಬರುವುದಿಲ್ಲ ಎಂದರು.
ಬಿಜೆಪಿ ಸಭೆಗೆ ಮಹಿಳೆಯರು ಹೋದರೆ ನಿಮ್ಮ 2 ಸಾವಿರ ರೂ., ಉಚಿತ ಬಸ್ ಪ್ರಯಾಣ, ಉಚಿತ ಕರೆಂಟ್ ಸ್ಥಗಿತಗೊಳ್ಳಲಿದೆ ಎಂದು ಸಚಿವೆ ಹೆಬ್ಬಾಳಕರ ಬೆದರಿಕೆ ಹಾಕುತ್ತಿರುವ ಬಗ್ಗೆ ಕೆಲ ಕಾರ್ಯಕರ್ತರು ಮೆಸೇಜ್ ಮಾಡಿದ್ದಾರೆ. ಸರ್ಕಾರದ ಯೋಜನೆಗಳು ಬಂದ್ ಮಾಡಲು ಇವರಪ್ಪನ ಮನೆಯದ್ದಾ? ಯೋಜನೆಗಳನ್ನು ಯಾವ ಜನಪ್ರತಿನಿಧಿಗಳು ಎಂದು ಖಾರವಾಗಿ ಹೇಳಿದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.