ನಮ್ಮ ಗುಪ್ತಚರ ವರದಿ ಕೈಕೊಟ್ಟಿರುವುದಕ್ಕೆ ಕ್ಷೇತ್ರ ಕಳೆದುಕೊಂಡಿದ್ದೇವೆ: ಸತೀಶ್ ಜಾರಕಿಹೊಳಿ
Team Udayavani, Jun 5, 2024, 8:18 PM IST
ಬೆಳಗಾವಿ: ನಾವು ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂದರೆ ನಮ್ಮ ನಾಯಕ ಮತ್ತು ನಿರ್ದೇಶಕರು ಸರಿಯಾಗಿ ಮಾರ್ಗದರ್ಶನ ಮಾಡಬೇಕು ಜೊತೆಗೆ ಆಕ್ಷನ್ – ಕಟ್ ಸರಿಯಾಗಿ ಕೊಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ನಿರ್ದೇಶಕರೆ ಟೋಪಿ ಹಾಕಿಕೊಂಡು ಎಲ್ಲೋ ಕುಳಿತರೆ ಎಲ್ಲವೂ ದಾಟಿ ಹೋಗುತ್ತದೆ. ಇದು ಚುನಾವಣೆ. ಇಲ್ಲಿ ನಿರ್ದೇಶಕರು ಹಾಗೂ ನಿರ್ಮಾಪಕರು ಒಬ್ಬರೇ. ಸರಿಯಾಗಿ ನಿರ್ದೇಶನ ಹಾಗೂ ಚಿತ್ರಕಥೆ ಕೊಡಬೇಕು. ಸ್ವಲ್ಪ ನಿರ್ಲಕ್ಷ ಮಾಡಿದರೂ ಸೋಲಾಗುತ್ತದೆ.
ಕೆಲವು ಕಡೆ ನಿರ್ಲಕ್ಷವಾಗಿದೆ. ಅತಿಯಾದ ಆತ್ಮವಿಶ್ವಾಸ ಕೈಕೊಟ್ಟಿದೆ. ಅವರವರ ಕ್ಷೇತ್ರದಲ್ಲೇ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ. ಯಾರು ಗೆಲ್ಲಿಸುತ್ತೇನೆ ಎಂದು ಜವಾಬ್ದಾರಿ ತೆಗೆದುಕೊಂಡವರ ಕ್ಷೇತ್ರದಲ್ಲಿ ಹಿನ್ನಡೆಯಾಗಿದೆ ಎಂದು ಪರೋಕ್ಷವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳಕರಗೆ ಟಾಂಗ್ ನೀಡಿದರು.
ಬೆಳಗಾವಿಯಲ್ಲಿ ನಮ್ಮ ತಪ್ಪು ವರದಿಯಿಂದ ನಾವು ಸಂಪೂರ್ಣ ವಿಫಲವಾಗಿದ್ದೇವೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಆದರೆ ನಾವು ಮಹತ್ವದ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳಲು ವಿಫಲವಾಗಿದ್ದೇವೆ.
ಮುಖ್ಯವಾಗಿ ಎದುರಾಳಿಯ ಶಕ್ತಿಯನ್ನು ನಾವು ಅರಿಯುವಲ್ಲಿ ಸೋತಿದ್ದೇವೆ. ನಮ್ಮ ಗುಪ್ತಚರ ವರದಿ ಕೈಕೊಟ್ಟಿದೆ. ಇದೇ ಕಾರಣದಿಂದ ನಾವು ಕ್ಷೇತ್ರ ಕಳೆದುಕೊಂಡಿದ್ದೇವೆ.
ನಾವು ಈ ಬಾರಿ ಕೇವಲ ಗೆಲ್ಲುವದಕ್ಕಷ್ಟೇ ತಂತ್ರಗಾರಿಕೆ ಮಾಡಿದ್ದೇವೆ. ಸೋಲಿನಲ್ಲಿ ನಮ್ಮ ಯಾವುದೇ ರೀತಿಯ ಪಾತ್ರ ಇಲ್ಲ.
ಬೆಳಗಾವಿ ಕ್ಷೇತ್ರದಲ್ಲಿ ಐದು ಲಕ್ಷ ಜನ ಲಿಂಗಾಯತರಿದ್ದಾರೆ. ಹೀಗಿದ್ದರೂ ಸೋತಿದ್ದೇಕೆ ಎಂಬುದರ ಬಗ್ಗೆ ಅವರೇ ಹೇಳಬೇಕು ಎಂದು ಹೆಬ್ಬಾಳಕರಗೆ ಟಾಂಗ್.
ಐದು ಲಕ್ಷ ಲಿಂಗಾಯತರಿರುವಾಗ ಮನಸ್ಸು ಮಾಡಿದರೆ ನಿರಾಯಾಸವಾಗಿ ಗೆಲ್ಲಿಸಬೇಕಿತ್ತು. ಲಿಂಗಾಯತರು ಜಾರಕಿಹೊಳಿ ಸಹೋದರರ ಮಾತು ಕೇಳುತ್ತಾರೆಯೇ. ಇಲ್ಲಿಯೇ ನಾವು ಮೊದಲು ತಪ್ಪು ಮಾಡಿದ್ದೇವೆ. ನಮ್ಮ ಲೆಕ್ಕಾಚಾರ ತಪ್ಪಿದೆ.
ಲಿಂಗಾಯತರನ್ನು ಅಂದಾಜಿಸಲು ನಾವು ಹಿಂದೆ ಬಿದ್ದಿದ್ದೇವೆ, ಇದಕ್ಕೆ ಕೆಲ ಶಾಸಕರು ಸಹ ಕಾರಣ ಇರಬಹುದು
ಇದನ್ನೂ ಓದಿ: ‘ಗ್ಯಾರಂಟಿ’ ಕೈ ಹಿಡಿಯುವ ನಿರೀಕ್ಷೆ ಹುಸಿಯಾಗಿದೆ, ಸೋಲಿನ ಕುರಿತು ವರಿಷ್ಠರಿಗೆ ವರದಿ: ಆಲಗೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.