ಸ್ವಂತ ಕಟ್ಟಡವಿಲ್ಲದೆ ಸೊರಗುತ್ತಿದೆ ಶಾಲೆ


Team Udayavani, Jan 1, 2020, 1:31 PM IST

bg-tdy-1

ಚಿಕ್ಕೋಡಿ: ನಗರದ ಹೃದಯ ಭಾಗದಲ್ಲಿ ಇರುವ ವೆಂಕಟೇಶ ಗಲ್ಲಿಯ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯು ಅನೇಕ ದಶಕಗಳಿಂದ ಸ್ವಂತ ಕಟ್ಟಡ ಇಲ್ಲದೆ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ನಿತ್ಯ ಸಮಸ್ಯೆಯಾಗಿ ಪರಿಣಮಿಸುತ್ತಿದೆ.

ಸ್ಥಳೀಯ ವೆಂಕಟೇಶ ಮಂದಿರ ವ್ಯವಸ್ಥಾಪಕ ಕಮಿಟಿಗೆ ಸೇರಿದ ಕಟ್ಟಡ ಮೂರು ಕೋಣೆಯಲ್ಲಿ ಬಾಡಿಗೆ ಆಧಾರದ ಮೇಲೆ ಶಾಲೆ ನಡೆಯುತ್ತಿದೆ. ಈ ಶಾಲೆಯಲ್ಲಿ ಒಂದರಿಂದ ಐದನೆ ತರಗತಿ ನಡೆಯುತ್ತಿದ್ದು, ಶಾಲೆಯಲ್ಲಿ 32 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಯಲ್ಲಿ ಮೂರು ಕೊಠಡಿಯಿದ್ದು, ಒಂದರಲ್ಲಿ ಮಧ್ಯಾಹ್ನ ಬಿಸಿಯೂಟ ತಯಾರು ಮಾಡಲು ಬಳಕೆ ಮಾಡಲಾಗುತ್ತದೆ. ಇದರಿಂದ ಕೇವಲ ಎರಡು ಕೊಠಡಿಗಳಲ್ಲಿ ತರಗತಿ ನಡೆಯುತ್ತಿವೆ.

ಶಾಲೆಯಲ್ಲಿ ಶೌಚಾಲಯವೆ ಇಲ್ಲ: ದೇಶದಲ್ಲಿ ಎಲ್ಲ ಕಡೆ ಶೌಚಾಲಯ ನಿರ್ಮಾನ ಹಾಗೂ ಸ್ವಚ್ಛತೆ ಬಗ್ಗೆ ಅಭಿಯಾನ ಭರದಿಂದ ನಡೆದಾಗ ಈ ಶಾಲೆಯಲ್ಲಿ ಶೌಚಾಲಯವೇ ಇಲ್ಲದೇ ಇರುವುದು ದುರ್ದೈವದ ಸಂಗತಿ. ಇದರಿಂದ ಇಡೀ ದಿನ ವಿದ್ಯಾರ್ಥಿಗಳ ಜೊತೆ ಶಿಕ್ಷಕಿಯರು ಶೌಚಾಲಯಕ್ಕೆ ಅಲೆದಾಡಬೇಕಾದ ಅನುವಾರ್ಯತೆ ಇದೆ. ಅನೇಕ ಪಾಲಕರು ತನ್ನ ಹೆಣ್ಣು ಮಕ್ಕಳಿಗೆ ಈ ಶಾಲೆಗೆ ಕಳಿಸಲು ಹಿಂದೆಟ್ಟು ಹಾಕುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

ರಸ್ತೆಯೇ ಶಾಲಾ ಮೈದಾನ: ಒಂದು ಶಾಲೆ ಎಂದರೇ ಅಲ್ಲಿ ಮೂಲಭೂತ ಸೌಲಭ್ಯ ಇರಬೇಕೆನ್ನುವುದು ಸಹಜ, ಆದರೆ ಈ ಶಾಲೆಯ ಮಕ್ಕಳು ಆಟವಾಡಲು ಮೈದಾನ ಇಲ್ಲದಂತಾಗಿದೆ. ಶಾಲೆಯ ಮುಂಭಾಗದಲ್ಲಿ ಇರುವ ರಸ್ತೆಯ ಮೇಲೆ ಆಟ ಆಡುತ್ತಾರೆ. ಹೀಗಾಗಿ ರಸ್ತೆಯ ಮೇಲೆ ಹೋಗಿ ಬರುವ ವಾಹನಗಳಿಂದ ಆಗುವ ಅಪಘಾತದ ಬೀತಿ ಮಕ್ಕಳನ್ನು ಕಾಡುತ್ತಿದೆ. ವೆಂಕಟೇಶ ಮಂದಿರದ ಕಟ್ಟಡದಲ್ಲಿ ಇರುವ ಶಾಲೆಯ ಅನಾನುಕೂಲತೆ ಗುರ್ತಿಸಿ 2015ರಲ್ಲಿ ಗಾಲೆಗಲ್ಲಿಯ ಹಳೆ ಮರಾಠಿ ಶಾಲೆಯ ಹತ್ತಿರ 480 ಅಳತೆಯ ಜಾಗ ಮೀಸಲಿಡಲಾಗಿದೆ.

ಈಗ ಚಿಕ್ಕೋಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹೆಸರಿನಲ್ಲಿದೆ. ಆದರೆ ಕಳೆದ ನಾಲ್ಕೈದು ವರ್ಷಗಳಿಂದ ಕಟ್ಟಡಕ್ಕಾಗಿ ಶಿಕ್ಷಣ ಇಲಾಖೆ ಯಾವುದೇ ಹೆಜ್ಜೆ ಇಟ್ಟಿಲ್ಲ, ಇದಕ್ಕಾಗಿ ಯಾವುದೇ ಅನುದಾನ ಮಂಜೂರಾಗಿಲ್ಲ, ಇದರಿಂದ ಇನ್ನು ಎಷ್ಟು ವರ್ಷ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬಾಡಿಗೆ ಕೊಠಡಿಯಲ್ಲಿ ಶಿಕ್ಷಣ ಪಡೆಯಬೇಕು ಎನ್ನುವ ಗೊಂದಲದಲ್ಲಿ ಮಕ್ಕಳ ಪಾಲಕರು ಇದ್ದಾರೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಜನಪ್ರತಿನಿ ಧಿಗಳು ಈ ಶಾಲೆಯ ಕಟ್ಟಡ ನಿರ್ಮಾಣ ಮಾಡಿ ಅನುಕೂಲ ಕಲ್ಪಿಸಬೇಕು ಎನ್ನುವುದು ಮಕ್ಕಳ ಪಾಲಕರ ಒತ್ತಾಯವಾಗಿದೆ.

ಶಾಲಾ ಕಟ್ಟಡ ಕಟ್ಟಲು ಇಲ್ಲಿವರೆಗೆ ಜಾಗದ ಸಮಸ್ಯೆ ಇತ್ತು. ಇತ್ತಿಚೀಗೆ ಪುರಸಭೆಯವರು ಜಾಗವನ್ನು ಶಿಕ್ಷಣ ಇಲಾಖೆಗೆ ನೀಡಿದ್ದಾರೆ. ಕಟ್ಟಡ ನಿರ್ಮಾಣಕ್ಕೆ ಸರ್ಕಾರಕ್ಕೆ ಅನುದಾನ ಕೇಳಲಾಗಿದೆ.. ದೇವಸ್ಥಾನ ಹತ್ತಿರ ಇರುವದರಿಂದ ಶೌಚಾಲಯ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಅನುದಾನ ಬಂದ ತಕ್ಷಣವೇ ಕಟ್ಟಡ ನಿರ್ಮಿಸಿ ಮಕ್ಕಳಿಗೆ ಅನುಕೂಲ ಮಾಡಿಕೊಡಲಾಗುವುದು. ಬಿ.ಎ. ಮೇಕನಮರಡಿ, ಕ್ಷೇತ್ರ ಶಿಕ್ಷಣಾಧಿಕಾರಿ, ಚಿಕ್ಕೋಡಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.