ಕುರಿ ಸಂತೆಯೋ? ರಾಯಬಾಗ ಬಸ್‌ ನಿಲ್ದಾಣವೋ?


Team Udayavani, Jun 23, 2022, 2:51 PM IST

16

ರಾಯಬಾಗ: ಪಟ್ಟಣದಲ್ಲಿ ಸೋಮವಾರ ನಡೆಯುವ ಕುರಿ ಆಡುಗಳ ಸಂತೆ ಈಗ ಮತ್ತೆ ಪಟ್ಟಣದ ಬಸ್‌ ನಿಲ್ದಾಣದಲ್ಲಿ ನಡೆಯುತ್ತಿದ್ದು, ಇದು ಬಸ್‌ ನಿಲ್ದಾಣವೋ? ಇಲ್ಲಾ ಕುರಿ ಆಡುಗಳ ಸಂತೆ ಮಾರುಕಟ್ಟೆಯೋ ಎನ್ನುವ ಪ್ರಶ್ನೆ ಜನರನ್ನು ಕಾಡುತ್ತಿದೆ.

ಪಟ್ಟಣದಲ್ಲಿ ಪ್ರತಿ ಸೋಮವಾರ ಕುರಿ-ಆಡುಗಳ ಸಂತೆ ಜರುಗುತ್ತಿದ್ದು, ಪ್ರಸಿದ್ಧಿ ಪಡೆದ ಈ ಸಂತೆಗೆ ಹಬ್ಬಗಳು ಸಮೀಪಿಸುತ್ತಿದ್ದಂತೆ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ ಮತ್ತು ಆಂಧ್ರ ಪ್ರದೇಶಗಳಿಂದಲೂ ವ್ಯಾಪಾರಸ್ಥರು ಬರುತ್ತಾರೆ.

ಬಸ್‌ ನಿಲ್ದಾಣದ ಆವರಣದಲ್ಲಿ ನಡೆಯುತ್ತಿದ್ದ ಕುರಿ-ಆಡುಗಳ ಸಂತೆಯಿಂದ ಪ್ರಯಾಣಿಕರಿಗೆ ಆಗುವ ತೊಂದರೆ ಗಮನಿಸಿ ಇತ್ತೀಚಿನ ಕೆಲವು ತಿಂಗಳ ಹಿಂದೆ ಬೇರೆ ಕಡೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಈ ವಾರ ಮತ್ತೆ ಬಸ್‌ ನಿಲ್ದಾಣದಲ್ಲಿ ಸಂತೆ ಜಮಾಯಿಸಿದ್ದು, ಪ್ರಯಾಣಿಕರು ಮತ್ತೆ ಕಿರಿ ಕಿರಿ ಅನುಭವಿಸುವಂತಾಯಿತು. ಕುರಿ ಆಡುಗಳನ್ನು ತುಂಬಲು ಬಂದ ಖಾಸಗಿ ವಾಹನಗಳು ಬಸ್‌ ನಿಲ್ದಾಣದಲ್ಲಿ ನಿಂತಿದ್ದರಿಂದ ಸಾರಿಗೆ ವಾಹನಗಳು ನಿಲ್ದಾಣಕ್ಕೆ ಬಂದು ಹೋಗಲು ಹರಸಾಹಸ ಪಡುವಂತಾಯಿತು.

ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಸಂತೆ ನಡೆದರೂ ನಂತರ ಬಸ್‌ ನಿಲ್ದಾಣ ಆವರಣ ಕುರಿ, ಆಡುಗಳ ಹಿಕ್ಕೆ, ಮೂತ್ರ, ಕಸಕಡ್ಡಿಗಳಿಂದ ಗಲೀಜುಗೊಂಡು ಗಬ್ಬೆದ್ದು ನಾರುತ್ತದೆ. ಇದರಿಂದ ಪ್ರಯಾಣಿಕರು ವಾರವಿಡಿ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಉಂಟಾಗುತ್ತದೆ. ಕೂಡಲೇ ಜಾನುವಾರು ಸಂತೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂಬುದು ಪಟ್ಟಣದ ನಾಗರಿಕರ ಒತ್ತಾಯವಾಗಿದೆ.

ರಾಯಬಾಗ ಪಟ್ಟಣದ ಬಸ್‌ ನಿಲ್ದಾಣ ಆವರಣದಲ್ಲಿ ಕುರಿ ಆಡುಗಳ ಸಂತೆ ಈಗ ಮತ್ತೆ ಕೂಡಿರುವುದು ತಮಗೂ ಕಂಡು ಬಂದಿದೆ. ಕುರಿ ಆಡುಗಳ ಸಂತೆ ಮಾರುಕಟ್ಟೆಯನ್ನು ಬೇರೆಡೆ ಸ್ಥಳಾಂತರಿಸುವಂತೆ ತಹಶೀಲ್ದಾರ್‌ ಅವರಿಗೆ ದೂರು ನೀಡಿದ್ದೇನೆ. ಮುಂದಿನ ವಾರ ಬೇರೆಡೆ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ. –ಎಸ್‌.ಬಿ. ಹಂಚಿನಾಳಕರ, ವ್ಯವಸ್ಥಾಪಕರು, ಸಾರಿಗೆ ಘಟಕ-ರಾಯಬಾಗ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ: ವೈಭವದ ಮೆರವಣಿಗೆ

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.