![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 22, 2021, 7:40 AM IST
ಬೆಳಗಾವಿ: ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ತೆರಿವಿಗೆ ಮುಂದಾಗಿದ್ದ ಮಹಾರಾಷ್ಟ್ರದ ಶಿವಸೇನೆ ಮುಖಂಡರು ಪೊಲೀಸರ ಕಣ್ಣು ತಪ್ಪಿಸಿ ಕದ್ದುಮುಚ್ಚಿ ಬೆಳಗಾವಿ ತಾಲೂಕಿನ ಕೋನೇವಾಡಿ ಗ್ರಾಮಕ್ಕೆ ಅಕ್ರಮವಾಗಿ ನುಗ್ಗಿ ಭಗವಧ್ವಜ ಹಾರಿಸಿದ್ದಾರೆ.
ಬೆಳಗಾವಿ ಸಮೀಪದ ಕೊಗನೊಳ್ಳಿ ಹಾಗೂ ಶಿನೋಳಿ ಚೆಕ್ಪೋಸ್ಟ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದರಿಂದ ಶಿವಸೇನೆ ಕಾರ್ಯಕರ್ತರನ್ನು ಪೊಲೀಸರು ವಾಪಸ್ಸು ಕಳುಹಿಸಿದ್ದರು. ಕರ್ನಾಟಕ ಪ್ರವೇಶಿಸದಂತೆ ಪೊಲೀಸರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದರು. ಆದರೆ ಪೊಲೀಸರ ಕಣ್ಣು ತಪ್ಪಿಸಿ ಅನ್ಯ ಮಾರ್ಗದಿಂದ ಶಿವಸೇನೆ ಮುಖಂಡರು ತುರಮುರಿ ಸಮೀಪದ ಕೋನೇವಾಡಿ ಗ್ರಾಮದ ಶ್ರೀ ಬ್ರಹ್ಮಲಿಂಗ ತರುಣ ಯುವಕ ಮಂಡಳದ ನಾಮಫಲಕದ ಎದುರು ಭಗವಧ್ವಜ ಹಚ್ಚಿದ್ದಾರೆ.
ಕೊಲ್ಲಾಪುರ ಜಿಲ್ಲೆಯ ಶಿವಸೇನೆಯ ಮುಖಂಡರು ಬೆಳಗಾವಿ ಪ್ರವೇಶಿಸಲು ಎಷ್ಟೇ ಪ್ರಯತ್ನಿಸಿದರೂ ಶಿನ್ನೋಳಿಯಲ್ಲಿಯೇ ಎಲ್ಲರನ್ನೂ ಪೊಲೀಸರು ತಡೆ ಹಿಡಿದಿದ್ದರು. ಅರ್ಧ ಗಂಟೆಗಳ ಕಾಲ ಪ್ರತಿಭಟನೆ ನಡೆಸಿ ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ವಾಪಸ್ಸಾಗಿದ್ದರು. ಆದರೆ ಗಡಹಿಂಗ್ಲಜ್ನ ಶಿವಸೇನೆ ಮುಖಂಡರಾದ ಸುನೀಲ್ ಶಿಂತ್ರೆ, ಸಂಗ್ರಾಮ ಕುಪೇಕರ, ಪ್ರಭಾಕರ ಖಾಂಡೇಕರ ಸೇರಿದಂತೆ ಅನೇಕರು ಸೇರಿ ಭಗವಧ್ವಜ ಹಚ್ಚಿ ಕರ್ನಾಟಕ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.