ಬೆಳೆಗಾರರಿಗೆ ಮೆಣಸಿನಕಾಯಿ ಖಾರ


Team Udayavani, Jun 11, 2020, 3:55 PM IST

Bg-tdy-4

ಖಾನಾಪುರ: ತಾಲೂಕಿನಲ್ಲಿ ಈ ವರ್ಷ ಅಂದಾಜು ಎರಡು ಸಾವಿರ ಹೆಕ್ಟೇರ್‌ನಲ್ಲಿ ಮೆಣಸಿನಕಾಯಿ ಬೆಳೆದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಬಿಡುಗಡೆ ಮಾಡಿದ ಸಬ್ಸಿಡಿ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತಿದೆ.

ಉತ್ತಮ ಇಳುವರಿ ಬಂದಿದ್ದರೂ ರೈತರಿಗೆ ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತಾಗಿದೆ. ಮಾ. 23ರಿಂದ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಮೆಣಸಿನ ಕಾಯಿ ಮಾರುಕಟ್ಟೆಯಲ್ಲಿ ಕೆಜಿಗೆ 2 ರೂ.ಗೆ ಕುಸಿದಿತ್ತು. ನಂತರ ಒಂದಿಷ್ಟು ಚೇತರಿಸಿಕೊಂಡು 8 ರೂ. ದರ ದೊರಕಿತು. ಆದರೆ ರೈತರಿಗೆ ಕೂಲಿ ಹಣ ಮತ್ತು ರಸಗೊಬ್ಬರ ಖರ್ಚು ಕೂಡ ಮರಳಲಿಲ್ಲ. ಇದೀಗ ಕೆಜಿಗೆ 14 ರೂ. ದರ ಇದ್ದರೂ ರೈತರಿಗೆ ಸಂತೃಪ್ತಿಯಾಗಿಲ್ಲ. ಈ ವರ್ಷ 4 ಸಾವಿರ ರೈತರು ಮೆಣಸಿನ ಬೆಳೆ ಬೆಳೆದಿದ್ದು, ಸರ್ಕಾರದ ಘೋಷಿಸಿದ ಸಬ್ಸಿಡಿ ಮರೀಚಿಕೆಯಾಗಿದೆ.

ಸರ್ಕಾರದ ನಿಯಮಾವಳಿಯಲ್ಲಿ 462 ಹೆಕ್ಟೇರ್‌ ಮೆಣಸಿನ ಬೆಳೆಯ ಫಲಾನುಭವಿಗಳು ಇದ್ದು, ಕೇವಲ 450 ಜನರು ಮಾತ್ರ ಫಲಾನುಭವಿಗಳು ಆಗುತ್ತಾರೆ. ಮಾ. 23ರಿಂದ ಹತ್ತು ದಿನಗಳ ಕಾಲ ಮಾರುಕಟ್ಟೆ ಇಲ್ಲದ ಸಮಯದಲ್ಲಿ ಮೆಣಸಿನ ಬೆಳೆ ಮಾರಾಟ ಮಾಡುತ್ತಿದ್ದ ರೈತರು ಮಾತ್ರ ಸಬ್ಸಿಡಿ ಪಡೆಯಲು ಅರ್ಹರಾಗುತ್ತಾರೆ ಎನ್ನುವುದು ತೋಟಗಾರಿಕೆ ಇಲಾಖೆ ಅಭಿಪ್ರಾಯ.

ರೈತರ ಬಗ್ಗೆ ಅಧಿಕಾರಿಗಳ ನೀತಿ ಕೂಡ ಗೊಂದಲಮಯವಾಗಿದೆ. ತೋಟಗಾರಿಕೆ ಇಲಾಖೆ ಖಾಸಗಿ ವ್ಯಕ್ತಿಗಳಿಂದ ಜನವರಿ-ಫೆಬ್ರವರಿಯಲ್ಲಿ ಮೆಣಸಿನಕಾಯಿ ಬೆಳೆದ ರೈತರ ಗದ್ದೆಗಳ ಸರ್ವೇ ಮಾಡಿಸಿದೆ. ಸರ್ವೇಯಲ್ಲಿ ಸಾಕಷ್ಟು ಲೋಪಗಳಿದ್ದು, ಗೊಂದಲಗಳಿಂದ ರೈತರು ಫಲಾನುಭವಿಗಳಾಗುತ್ತಿಲ್ಲ. ರೈತರು ಕಬ್ಬು ಮತ್ತು ಭತ್ತ ಫಸಲು ಮಾತ್ರ ತೋರಿಸಿ ಕೃಷಿ ಸಾಲ ಪಡೆಯುತ್ತಾರೆ. ಮೆಣಸಿನ ಬೆಳೆ ಪ್ರತ್ಯೇಕವಾಗಿ ತೋರಿಸುವುದಿಲ್ಲ. ಭತ್ತ ಮತ್ತು ಕಬ್ಬು ಕಟಾವು ನಂತರ ಮೆಣಸಿನ ಬೆಳೆ ಬೆಳೆಯಲಾಗುತ್ತದೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳ ಪ್ರಕಾರ ರೈತರು ಮೆಣಸಿನ ಬೆಳೆ ಕುರಿತು ಫಸಲು ತೋರಿಸದೇ ಇರುವುದರಿಂದ ಇವರಿಗೆ ಸಬ್ಸಿಡಿ ದೊರೆಯುವುದು ಕಷ್ಟ ಎನ್ನುತ್ತಾರೆ. ಖಾನಾಪುರ, ಬೀಡಿ ಮತ್ತು ಜಾಂಬೋಟಿ ಹೋಬಳಿಗಳಲ್ಲಿ ಅಧಿಕ ಮೆಣಸಿನ ಬೆಳೆ ಬೆಳೆಯಲಾಗುತ್ತಿದೆ. ಲಾಕ್‌ ಡೌನ್‌ ಸಂದರ್ಭದಲ್ಲಿ ಚಿಕ್ಕದಿನಕೊಪ್ಪ ಮತ್ತು ಕಡತನಬಾಗೇವಾಡಿ ಗ್ರಾಮಗಳಲ್ಲಿ ಮೆಣಸಿನ ಬೆಳೆಗೆ ಮಾರುಕಟ್ಟೆ ಕಲ್ಪಿಸಲಾಗಿದ್ದರೂ ದಲ್ಲಾಳಿಗಷ್ಟೇ ಲಾಭವಾಗಿದೆ.

ಮೆಣಸಿನ ಬೆಳೆ ಫಲಾನುಭವಿಗಳ ಆಯ್ಕೆ ವಿಷಯದಲ್ಲಿ ಯಾವ ಹಸ್ತಕ್ಷೇಪವೂ ಇಲ್ಲ. ನಿಯಮಾವಳಿ ಪ್ರಕಾರವೇ ಫಲಾನುಭವಿಗಳ ಆಯ್ಕೆ ಇಲ್ಲಿ ನಡೆಯುತ್ತದೆ. ಶಮಂತ, ಸಹಾಯಕ ನಿರ್ದೇಶಕ, ತೋಟಗಾರಿಕೆ ಇಲಾಖೆ

ಮೆಣಸಿನ ಬೆಳೆ ಬೆಳೆದ ರೈತ ಫಲಾನುಭವಿಗಳ ಆಯ್ಕೆ ಅವೈಜ್ಞಾನಿಕವಾಗಿದೆ. ಮೆಣಸಿನ ಬೆಳೆ ಬೆಳೆದ ರೈತರೆಲ್ಲರೂ ಫಲಾನುಭವಿಗಳಾಗಬೇಕು. ಯಶವಂತ ಕೊಡೋಳ್ಳಿ, ನಿರ್ದೇಶಕ ಟಿಎಪಿಸಿಎಂಎಸ್‌ ನಂದಗಡ -ಮೆಣಸಿನ ಬೆಳೆ ಬೆಳೆದ ರೈತರು

ಸಂಕಷ್ಟದಲ್ಲಿದ್ದು ಸರ್ಕಾರ ನೆರವಿಗೆ  ಬರಬೇಕು. ಸರ್ಕಾರದ ನಿಯಮಗಳು ರೈತರಿಗೆ ಅನ್ಯಾಯ ಮಾಡುವಂತಿವೆ. -ಹಣಮಂತ ಪಾಟೀಲ, ಬಿಜೆಪಿ ಮುಖಂಡ  

 

-ಜಗದೀಶ ಹೊಸಮನಿ

ಟಾಪ್ ನ್ಯೂಸ್

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.