![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 1, 2019, 1:02 PM IST
ಅಥಣಿ: ಕೃಷ್ಣಾ ನದಿ ನೀರಿನ ಶಾಶ್ವತ ಪರಿಹಾರಕ್ಕಾಗಿ ಆಗ್ರಹಿಸಿ ಕೃಷ್ಣಾ ಹೋರಾಟ ಸಮಿತಿ ಸದಸ್ಯರು ಶುಕ್ರವಾರ ಬೊಬ್ಬೆ ಚಳವಳಿ ನಡೆಸಿದರು.
ಅಥಣಿ: ಕೃಷ್ಣಾ ನದಿ ನೀರಿನ ಶಾಶ್ವತ ಪರಿಹಾರಕ್ಕಾಗಿ ಆಗ್ರಹಿಸಿ ನಡೆಸುತ್ತಿರುವ ಕೃಷ್ಣಾ ಹೋರಾಟ ಸಮಿತಿ ಸದಸ್ಯರ ಅಹೋರಾತ್ರಿ ಧರಣಿ 12 ದಿನ ಪೂರೈಸಿದ್ದು, ಶುಕ್ರವಾರ ಬೊಬ್ಬೆ ಚಳವಳಿ ನಡೆಸಿ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.
ಪ್ರತಿಭಟನೆಯಲ್ಲಿ ನ್ಯಾಯವಾದಿ ಎಸ್.ಎಸ್. ಪಾಟೀಲ ಮಾತನಾಡಿ, ಉತ್ತರ ಕರ್ನಾಟಕದ ಪ್ರಮುಖ ಕೃಷ್ಣಾ ನದಿ ಬತ್ತಿ ಹೋಗಿ 2 ತಿಂಗಳು ಕಳೆದರೂ ಕೂಡ ಇಲ್ಲಿಯವರೆಗೂ ರಾಜ್ಯದ ಮುಖ್ಯಮಂತ್ರಿಗಳಾಗಲಿ, ಜಲಸಂಪನ್ಮೂಲ ಸಚಿವರಾಗಲಿ ಅಥವಾ ಕೃಷ್ಣಾ ನದಿ ಪ್ರದೇಶಕ್ಕೆ ಒಳಪಡುವ ಶಾಸಕರುಗಳು ಯಾವುದೇ ರೀತಿ ಸ್ಪಂದಿಸಿಲ್ಲ. ಒಂದು ವೇಳೆ ಇಂತಹ ಸಮಸ್ಯೆ ಮಂಡ್ಯ ಅಥವಾ ಮೈಸೂರು ಭಾಗದಲ್ಲಿ ನಡೆದಿದ್ದರೆ ಇಷ್ಟೊತ್ತಿಗಾಗಲೇ ರಾಜ್ಯದ ಮುಖ್ಯಮಂತ್ರಿ ಸಮಸ್ಯೆ ಬಗೆ ಹರಿಸಲು ಹರ ಸಾಹಸ ಪಡುತ್ತಿದ್ದರು. ಆದರೆ ಕಳೆದ ಎರಡು ತಿಂಗಳಿನಿಂದ ಕುಡಿಯುವ ನೀರಿನ ಗೋಳು ಸಹಿಸಿಕೊಂಡ ಈ ಭಾಗದ ಜನ 12 ದಿನಗಳಿಂದ ಕೃಷ್ಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದರೂ ರಾಜಕಾರಣಿಯೂ ಸ್ಪಂದಿಸದೇ ಇರುವುದು ವಿಷಾದಕರವಾಗಿದೆ ಎಂದರು.
ಕಾವೇರಿ ನದಿ ಹೋರಾಟದಲ್ಲಿ ಕಾವೇರಿ ನಮ್ಮದು ಎನ್ನುವ ಭಾವದಿಂದ ಉತ್ತರ ಕರ್ನಾಟಕ ಭಾಗದವರಾದ ನಾವೂ ಕೂಡ ಭಾಗವಹಿಸುತ್ತೇವೆ. ಆದರೆ ಈ ಭಾಗದ ಕೃಷ್ಣಾ ನದಿ ಅಥವಾ ನೀರಿನ ಸಮಸ್ಯೆ ತಲೆ ದೋರಿದಾಗ ಮೈಸೂರು ಮತ್ತು ಮಂಡ್ಯ ಭಾಗದವರು ಹೋರಾಟ ತಮಗೆನು ಸಂಬಂಧ ಇಲ್ಲ ಎನ್ನುವಂತೆ ನಡೆದುಕೊಳ್ಳುತ್ತಿರುವುದು ಸರಿಯಲ್ಲ. ಇದೇ ರೀತಿ ತಾರತಮ್ಯ ಮುಂದುವರೆದರೆ ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯ ಹೋರಾಟ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ವಿಜಯಕುಮಾರ ಅಡಹಳ್ಳಿ, ಕರವೇ ಅಧ್ಯಕ್ಷ ಬಸನಗೌಡಾ ಪಾಟೀಲ, ರಮೇಶ ಬಾದವಾಡಗಿ, ಪರಶುರಾಮ ನಂದೇಶ್ವರ, ದೀಪಕ ಸಿಂಧೆ, ಮಹಾಂತೇಶ ಬಾದವಾಡಗಿ, ರಾಕೇಶ ಮೈಗೂರ, ಹಣಮಂತ ಕಂಠಿಕರ, ಫಿರೋಜ ಕರೋಲಿ, ಲೆನಿನ್ ಹಳಿಂಗಳಿ, ಸುನೀಲ ಸಂಕ, ಎಸ್.ಸಿ. ನಾಯಿಕ, ಪಿ.ಜಿ. ಬಿಸಗುಪ್ಪಿ, ಪರಶುರಾಮ ತುಬಚಿ, ಪ್ರಕಾಶ ಕಾಂಬಳೆ, ಪ್ರಶಾಂತ ತೊಡಕರ, ಸುಭಾಶ ಕಾಂಬಳೆ, ಕಲ್ಲೇಶ ಮಡ್ಡಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.