ಇಂದಿರಾ ಆಪ್ತ ಸಿದ್ನಾಳ ಟಾಪ್‌ ಲೀಡರ್‌

­80-90ರ ದಶಕದ ಉತ್ತರ ಕರ್ನಾಟಕದ ಪ್ರಮುಖ ನಾಯಕ­ಕೃಷಿ, ವಕೀಲಿಕಿಯಿಂದ ರಾಜಕೀಯದತ್ತ ಸಿದ್ನಾಳ ಹೆಜ್ಜೆ

Team Udayavani, Apr 28, 2021, 4:28 PM IST

fhfhyt

ವರದಿ: ಭೈರೋಬಾ ಕಾಂಬಳೆ

ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ನಾಲ್ಕು ಬಾರಿ ಸಂಸದರಾಗಿದ್ದ ಎಸ್‌.ಬಿ. ಸಿದ್ನಾಳ ಅವರು ಉತ್ತರ ಕರ್ನಾಟಕದಲ್ಲಿ ಜಾತ್ಯಾತೀತ ರಾಜಕಾರಣಿ ಎಂದೇ ಹೆಸರುವಾಸಿಯಾಗಿದ್ದರು.

ಇಂದಿರಾ ಗಾಂಧಿ ಯ ಅಪ್ಪಟ ಭಕ್ತರಾಗಿದ್ದ ಸಿದ್ನಾಳ ಸುಮಾರು ಒಂದೂವರೆ ದಶಕಗಳ ಕಾಲ ಬೆಳಗಾವಿಯನ್ನು ಆಳಿದ್ದರು. ಎಸ್‌.ಬಿ. ಸಿದ್ನಾಳ ಅವರು ನಾಲ್ಕು ಬಾರಿ ಸಂಸದರಾಗಿ ಬೆಳಗಾವಿಯ ಕೋಟೆಯಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿದ್ದರು. ಸಿದ್ನಾಳ ತಮ್ಮ 44ನೇ ವಯಸ್ಸಿನಲ್ಲಿ ಸಂಸದರಾಗಿದ್ದು, ಇಂದಿರಾ ಗಾಂಧಿಯ ಅಪ್ಪಟ ಭಕ್ತರಾಗಿದ್ದು, ಇಂದಿರಾರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

ರಾಜಕೀಯದಲ್ಲಿ ಸಿದ್ನಾಳ ಹಿಡಿತ: 80 ಹಾಗೂ 90ರ ದಶಕದಲ್ಲಿ ಸಿದ್ನಾಳ ಎಂದರೆ ಈ ಭಾಗದ ಕಾಂಗ್ರೆಸ್‌ನ ಪ್ರಮುಖ ನಾಯಕರಾಗಿ ಹೊರ ಹೊಮ್ಮಿದ್ದರು. ಜಾತಿಗೆ ಲಿಂಗಾಯತ ಎಂಬ ಹಣೆಪಟ್ಟಿ ಇದ್ದರೂ ಇದನ್ನು ತಮ್ಮ ಲಾಭಕ್ಕಾಗಿ ಎಂದಿಗೂ ಬಳಸಿಕೊಂಡಿರಲಿಲ್ಲ. ಜಾತ್ಯಾತೀತ ನಾಯಕರೆಂದೇ ರಾಜಕೀಯದಲ್ಲಿ ಹಿಡಿತ ಸಾಧಿಸಿದ್ದರು.

ಮೂಲತಃ ಕೃಷಿಕರು ಹಾಗೂ ವಕೀಲರಾಗಿದ್ದ ಎಸ್‌.ಬಿ. ಸಿದ್ನಾಳ 1978ರಲ್ಲಿ ಬೆಳಗಾವಿಗೆ ಬಂದು 1979ರಲ್ಲಿ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿದ್ದರು. ಬೆಳಗಾವಿಯಲ್ಲಿ ಕೆಲ ವರ್ಷಗಳ ಕಾಲ ವಕೀಲ ವೃತ್ತಿ ನಡೆಸಿದ್ದರು. ದೆಹಲಿ ನಾಯಕರೊಂದಿಗೆ ಒಡನಾಟ: ಬೈಲಹೊಂಗಲ ತಾಲೂಕಿನ ಚನ್ನಮ್ಮನ ಕಿತ್ತೂರು ವಿಧಾನಸಭಾ ಮತಕ್ಷೇತ್ರದಿಂದ 1972ರಲ್ಲಿ ಬಿ.ಡಿ. ಇನಾಮದಾರ ವಿರುದ್ಧ ಸ್ಪ ರ್ಧಿಸಿ ಎಸ್‌.ಬಿ. ಸಿದ್ನಾಳ ಸೋಲನುಭವಿಸಿದ್ದರು. ಇಲ್ಲಿಂದಲೇ ತಮ್ಮ ರಾಜಕೀಯ ಜೀವನ ರೂಪಿಸಿಕೊಳ್ಳುವತ್ತ ಹೆಜ್ಜೆ ಹಾಕಿದ್ದ ಸಿದ್ನಾಳ ವಕೀಲ ವೃತ್ತಿಯ ಜೊತೆಗೆ ರಾಜಕೀಯ ನಾಯಕರೊಂದಿಗೆ ನಿಕಟ ಸಂಪರ್ಕ ಆರಂಭಿಸಿದರು.

ಸಂಸದರ ಆಗುವ ಮುನ್ನವೇ ದೆಹಲಿಯ ಪ್ರಮುಖ ಘಟನಾಘಟಿ ನಾಯಕರು ಸಿದ್ನಾಳ ಅವರಿಗೆ ಪರಿಚಯವಿದ್ದರು. ಒಳ್ಳೆಯ ವಾಗ್ಮಿ ಆಗಿದ್ದ ಎಸ್‌.ಬಿ.ಸಿದ್ನಾಳ ಅವರು ರಾಜಕೀಯದಲ್ಲಿ ಅನೇಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ಸಿದ್ನಾಳ ಅವರು ಲಿಂಗಾಯತರಾಗಿದ್ದರೂ ಜಾತಿ ರಾಜಕಾರಣ ಎಂದಿಗೂ ಮಾಡಿರಲಿಲ್ಲ. ಲಿಂಗಾಯತ ಇದ್ದರೂ ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ವರ್ಗದವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ ಜಾತ್ಯಾತೀತ ನಾಯಕರಾಗಿದ್ದರು. ಇದು ಇಂದಿರಾ ಗಾಂಧಿ ಅವರಿಗೆ ಬಹಳ ಇಷ್ಟವಾಗಿತ್ತು. ಇದೇ ವೇಳೆ ಚಿಕ್ಕೋಡಿ ಸಂಸದರಾಗಿದ್ದ ಬಿ. ಶಂಕರಾನಂದ ಅವರೊಂದಿಗೆ ಸಿದ್ನಾಳಗೆ ಭಿನ್ನಾಭಿಪ್ರಾಯವಿತ್ತು. ಈ ಭಿನ್ನಾಭಿಪ್ರಾಯ ಹೆಚ್ಚು ತೋರಿಸಿಕೊಡುತ್ತಿರಲಿಲ್ಲ. ಪಕ್ಷದಲ್ಲಿ ನಾವೆಲ್ಲರೂ ಒಂದು ಎಂದೇ ಜನರ ಬಳಿ ಹೇಳಿಕೊಳ್ಳುತ್ತಿದ್ದರು.

ಸಿದ್ನಾಳ ಕೃಷಿಯಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು. ವಕೀಲಿಕಿ ನಡೆಸುತ್ತಿದ್ದರೂ ಕೃಷಿಯನ್ನು ಎಂದಿಗೂ ಬಿಟ್ಟು ಕೊಟ್ಟಿರಲಿಲ್ಲ. ಬೆಳಗಾವಿಯಲ್ಲಿ ಭೂಸ್ವಾ ಧೀನ ವಕೀಲರೆಂದೇ ಖ್ಯಾತರಾಗಿದ್ದರು. ವಕೀಲಿಕಿ ಬಿಟ್ಟು ನಂತರದಲ್ಲಿ ರಾಜಕೀಯವನ್ನು ಅಪ್ಪಿಕೊಂಡಿದ್ದರು. ವಕೀಲರಾಗಿದ್ದಾಗ ಬೆಳಗಾವಿಯಲ್ಲಿ ಸಮಾರಂಭವೊಂದಕ್ಕೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಆಗಿದ್ದ ವೈ.ವಿ. ಚಂದ್ರಚೂಡ ಅವರನ್ನು ಕರೆಯಿಸಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.