Chittapur ಶಿವಲಿಂಗದ ಮೇಲೆ ಕಾಲಿಟ್ಟು ಸ್ವಾಮೀಜಿ ಪಾದಪೂಜೆ: ಭಕ್ತರ ಆಕ್ರೋಶ
Team Udayavani, Sep 11, 2024, 7:25 AM IST
ಚಿತ್ತಾಪುರ: ಸೇಡಂ ತಾಲೂಕಿನ ಕಲಕಂಬ ಗ್ರಾಮದಲ್ಲಿರುವ ದಿಗ್ಗಾಂವ ಶಾಖಾ ಮಠದ ಈಶ ಬಸವೇಶ್ವರ ದೇವಾಲಯದಲ್ಲಿ ಪ್ರಾಣ ಪ್ರತಿಷ್ಠಾಪನೆಗಾಗಿ ಸಿದ್ಧಗೊಂಡಿದ್ದ ಶಿವಲಿಂಗದ ಮೇಲೆ ತಾಲೂಕಿನ ದಿಗ್ಗಾಂವ ಗ್ರಾಮದ ಪಂಚಗೃಹ ಹಿರೇಮಠದ ಪೀಠಾಧಿಪತಿ ಸಿದ್ಧವೀರ ಶಿವಾಚಾರ್ಯ ಶ್ರೀಗಳು ತಮ್ಮ ಪಾದಗಳನ್ನು ಇರಿಸಿ ಪಾದಪೂಜೆ ಮಾಡಿಸಿಕೊಂಡಿದ್ದಾರೆ ಎನ್ನಲಾದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಶಿವಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೊಡ್ಡದಾದ ಪಾತ್ರೆಯಲ್ಲಿ ಕಪ್ಪು ಬಣ್ಣದ ಶಿವಲಿಂಗವನ್ನು ಇರಿಸಿ ಕುರ್ಚಿ ಮೇಲೆ ಕುಳಿತಿರುವ ಸ್ವಾಮೀಜಿ ತಮ್ಮ ಎರಡೂ ಪಾದಗಳನ್ನು ಲಿಂಗದ ಮೇಲೆ ಇಟ್ಟು ಭಕ್ತರು ಹಾಲಿನಿಂದ ಪಾದಗಳನ್ನು ತೊಳೆದು, ಕಾಲಿಗೆ ಕುಂಕುಮ ಹಚ್ಚಿ, ಬಿಲ್ವಪತ್ರೆ, ಹೂಗಳನ್ನು ಇರಿಸಿ ಪೂಜೆ ಮಾಡುತ್ತಿರುವ ದೃಶ್ಯಗಳು ವೀಡಿಯೋದಲ್ಲಿವೆ. ಸ್ವಾಮೀಜಿಯ ನಡೆಗೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.