Belagavi; ಆಕ್ಷೇಪಾರ್ಹ ಪೋಸ್ಟ್ ಗಳು ಕಂಡರೆ ಸೂಕ್ತ ಕ್ರಮ ಕೈಗೊಳ್ಳಿ: ಡಾ.ಜಿ.ಪರಮೇಶ್ವರ್


Team Udayavani, Nov 20, 2023, 11:55 AM IST

ಆಕ್ಷೇಪಾರ್ಹ ಪೋಸ್ಟ್ ಗಳು ಕಂಡರೆ ಸೂಕ್ತ ಕ್ರಮ ಕೈಗೊಳ್ಳಿ: ಡಾ.ಜಿ.ಪರಮೇಶ್ವರ್

ಬೆಳಗಾವಿ: ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಸುಳ್ಳುಸುದ್ದಿಗಳು, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವುದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹಸಚಿವ ಜಿ.ಪರಮೇಶ್ವರ್ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಪೊಲೀಸ್ ಆಯುಕ್ತಾಲಯಕ್ಕೆ ಸೋಮವಾರ ಭೇಟಿ ನೀಡಿದ ಅವರು, ಸಾಮಾಜಿಕ ಜಾಲತಾಣ ನಿಗಾ ಘಟಕ, ನಿಯಂತ್ರಣ ಕೊಠಡಿಗಳನ್ನು ಖುದ್ದಾಗಿ ವೀಕ್ಷಿಸಿದ ಅವರು, ಆಕ್ಷೇಪಾರ್ಹ ಮಾಹಿತಿ, ಸುಳ್ಳು ಸುದ್ದಿಗಳು ಬಂದಾಗ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ಇದೇ ಸಂದರ್ಭದಲ್ಲಿ ಸೂಕ್ತ ತಾಂತ್ರಿಕ ತರಬೇತಿ ಹೊಂದಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲು ಸೂಚನೆ ನೀಡಿದರು. ಬಳಿಕ ನಗರ ನಿಯಂತ್ರಣ ಕೊಠಡಿ ಹಾಗೂ ವೈರ್ ಲೆಸ್ ವಿಭಾಗದ ಕಾರ್ಯಚಟುವಟಿಕೆಗಳು ಹಾಗೂ ದಾಖಲೆ ಕೊಠಡಿಯನ್ನು ಖುದ್ದಾಗಿ ವೀಕ್ಷಿಸಿದರಲ್ಲದೆ, ನಿಯಂತ್ರಣ ಕೊಠಡಿಗೆ ಬರುವ ಕರೆಗಳು ಹಾಗೂ ಮಾಹಿತಿಯ ಲಾಗ್ ಪುಸ್ತಕವನ್ನು ಪರಿಶೀಲಿಸಿದರು.

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ಕಟ್ಟಲು ಏಳು ದಿನಗಳ ಕಾಲಾವಕಾಶ ನೀಡಬೇಕು. ಇದಾದ ಬಳಿಕ ನ್ಯಾಯಾಲಯದಿಂದ ಸಮನ್ಸ್ ಹೋಗಬೇಕು. ದಂಡ ಕಟ್ಟದಿದ್ದರೆ ಅಥವಾ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ವಾಹನ ಸೀಜ್ ಮಾಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ನಿರ್ದೇಶನ ನೀಡಿದರು.

ಬೆಳಗಾವಿ ನಗರದ ವಿವಿಧ ವೃತ್ತಗಳು ಹಾಗೂ ರಸ್ತೆಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ವೀಕ್ಷಿಸಿದ ಸಚಿವರು ಸಿಸಿಟಿವಿ ಮೇಲೆ ನಿಗಾ ವಹಿಸಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪ್ರತಿಯೊಂದು ಕ್ಯಾಮೆರಾ ಅಳವಡಿಸಿರುವ ವೃತ್ತ ಮತ್ತು ರಸ್ತೆ ಕುರಿತು ಸಂಪೂರ್ಣ ಮಾಹಿತಿ ಇರಬೇಕು.

ಇದಲ್ಲದೇ ಸ್ಮಾರ್ಟ್ ಸಿಟಿ ಯೋಜನೆಯಡಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳ ಮೇಲೆ ಕೂಡ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು. ಪೊಲೀಸ್ ಆಯುಕ್ತರಾದ ಎಸ್.ಎನ್.ಸಿದ್ದರಾಮಪ್ಪ ಅವರು, ವಿವಿಧ ಘಟಕಗಳ ಕಾರ್ಯನಿರ್ವಹಣೆ ಕುರಿತು ವಿವರಿಸಿದರು.

ಸಾಮಾಜಿಕ ಜಾಲತಾಣ ನಿಗಾ ಘಟಕವು ಕ್ರಿಯಾಶೀಲವಾಗಿದ್ದು, ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿಗಾವಹಿಸಲಾಗಿದೆ. ಇತ್ತೀಚೆಗೆ ಪ್ರಕರಣಗಳನ್ನು ಕೂಡ ದಾಖಲಿಸಲಾಗಿದೆ ಎಂದರು.

ಇದಲ್ಲದೆ ಅಧಿವೇಶನ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ತೀವ್ರ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಸಿದ್ದರಾಮಪ್ಪ ತಿಳಿಸಿದರು.

ನಗರದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಪೋಸ್ಟ್ ಗಳು, ಕೋಮುಭಾವನೆ ಕೆರಳಿಸುವ ಪೋಸ್ಟ್, ಪ್ರಚೋದಾತ್ಮಕ ಹೇಳಿಕೆ, ಘಟನೆಗಳು ಕಂಡುಬಂದರೆ ಕೂಡಲೇ ಐಟಿ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಡಿಸಿಪಿ ರೋಹನ್ ಜಗದೀಶ್ ವಿವರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಅಧೀಕ್ಷಕ ಡಾ.ರವೀಂದ್ರ ಗಡಾದಿ, ಬೆಳಗಾವಿ ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಸ್ನೇಹಾ ಸೇರಿದಂತೆ ಪೊಲೀಸ್ ಆಯುಕ್ತಾಲಯದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ: ವೈಭವದ ಮೆರವಣಿಗೆ

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.