![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 26, 2022, 10:54 PM IST
ರಾಯಬಾಗ: ಕೋವಿಡ್ ಸಮಯ ದಲ್ಲಿಯೂ ರಾಜ್ಯ ಸರಕಾರ ಪರಿಶಿಷ್ಟ ಜಾತಿ-ಜನಾಂಗದ ಕಾಲೋನಿಗಳಲ್ಲಿ ರಸ್ತೆ ಸುಧಾರಣೆಗಾಗಿ ಅನುದಾನ ಬಿಡುಗಡೆ ಮಾಡುತ್ತಿದ್ದು, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡ ಬೇಕೆಂದು ಶಾಸಕ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಂ. ಐಹೊಳೆ ಹೇಳಿದರು.
ಮಂಗಳವಾರ ಲೋಕೋಪಯೋಗಿ ಇಲಾಖೆಯಿಂದ ಎಸ್ಸಿಪಿ ಯೋಜನೆ ಯಡಿ ತಾಲೂಕಿನ ನಸಲಾಪುರ ಗ್ರಾಮದಿಂದ ಪ.ಜಾ.ದಾಸರ ಕಾಲೋನಿ ವರೆಗೆ 60 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಸುಧಾರಣೆ, ನಂದಿಕುರಳಿ-ನಸಲಾಪುರ ರಸ್ತೆಯಿಂದ ಪ.ಜಾ.ವಂಜೇರಿ ತೋಟದ ವರೆಗೆ 60 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಸುಧಾರಣೆ, ಕೆಂಪಟ್ಟಿ ಗ್ರಾಮದ ಪ.ಜಾ. ಕಾಲೋನಿಗೆ 20 ಲಕ್ಷ ರೂ. ವೆಚ್ಚದಲ್ಲಿ ಕೂಡುವ ರಸ್ತೆ ಸುಧಾರಣೆ, ಮೇಖಳಿ ಗ್ರಾಮದ ಪ.ಜಾ.ಕಾಲೋನಿಗೆ 17 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ರಾಯಬಾಗ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು, ಬರುವ ದಿನಗಳಲ್ಲಿ ರಾಜ್ಯ ಸರಕಾರದಿಂದ ಇನ್ನೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ, ಎಲ್ಲ ಮೂಲಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
ಸಿಬಿಕೆಎಸ್ಎಸ್ಕೆ ಅಧ್ಯಕ್ಷ ಭರತೇಶ ಬನವಣೆ, ಪೃಥ್ವಿರಾಜ ಜಾಧವ, ಅಮಿತ ಜಾಧವ, ಆರ್.ಕೆ.ನಿಂಗನೂರೆ, ಸಿ.ಎಸ್. ಕಾಂಬಳೆ, ದತ್ತಾ ಸಾವಂತ, ಶ್ರವಣ ಕಾಂಬಳೆ ಇನ್ನಿತರರಿದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.