ತೆಲಸಂಗ: ದ್ರಾಕ್ಷಿ ಮತ್ತೆ ಹುಳಿಯಾಗುವ ಆತಂಕ- ನಷ್ಟ ಅನುಭವಿಸುವ ಭೀತಿ


Team Udayavani, Oct 28, 2024, 10:23 AM IST

ತೆಲಸಂಗ: ದ್ರಾಕ್ಷಿ ಮತ್ತೆ ಹುಳಿಯಾಗುವ ಆತಂಕ- ನಷ್ಟ ಅನುಭವಿಸುವ ಭೀತಿ

■ ಉದಯವಾಣಿ ಸಮಾಚಾರ
ತೆಲಸಂಗ: ಬೆಳಗಾವಿ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ದ್ರಾಕ್ಷಿಗೆ ಈಗ ದಾವನಿ ಹಾಗೂ ಕೊಳೆರೋಗ ಆವರಿಸಿದೆ. ತೆಲಸಂಗ, ಬನ್ನೂರ, ಕನ್ನಾಳ ಸೇರಿದಂತೆ ಅಥಣಿ ತಾಲೂಕಿನ ದ್ರಾಕ್ಷಿ ಬೆಳೆಗಾರರು ಪ್ರಸಕ್ತ ವರ್ಷವೂ ನಷ್ಟ ಅನುಭವಿಸುವ ಭೀತಿಯಲ್ಲಿದ್ದಾರೆ.

ರಾಜ್ಯದಲ್ಲಿಯೇ ದ್ರಾಕ್ಷಿ ಬೆಳೆಯುವಲ್ಲಿ 2ನೇ ಸ್ಥಾನದಲ್ಲಿರುವ ಅಥಣಿ ತಾಲೂಕಿನ ದ್ರಾಕ್ಷಿ ಬೆಳೆಗಾರರು, ದ್ರಾಕ್ಷಿ ಚಾಟ್ನಿ ಮಾಡುವ ಈ ಹಂತದಲ್ಲಿ ಹವಾಮಾನ ವೈಪರೀತ್ಯದಿಂದ ಮೊದಲು ತುತ್ತಿನಲ್ಲೇ ಕಲ್ಲು ಬಂದು ಆತಂಕ ಪಡುವಂತಾಗಿದೆ.

ಅಥಣಿ ತಾಲೂಕಿನ ಒಟ್ಟು 4600 ಹೆಕ್ಟೇರ್‌ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತಿದ್ದು, ಅದರಲ್ಲಿಯೇ ತೆಲಸಂಗ, ಬನ್ನೂರ, ಕನ್ನಾಳ, ಕಕಮರಿ, ಕೊಟ್ಟಲಗಿ, ಹಾಲಳ್ಳಿ ಸೇರಿದಂತೆ ಅಥಣಿ ತಾಲೂಕಿನ ಪೂರ್ವ ಭಾಗದ ಬಹುತೇಕ ಗ್ರಾಮಗಳಲ್ಲಿ ದ್ರಾಕ್ಷಿ ಬೆಳೆಗೆ ಈ ರೋಗಗಳು ತಗಲಿದ್ದು, ಇಳುವರಿ ಗಣನೀಯವಾಗಿ ಕುಸಿಯುವ ಭೀತಿ ಎದುರಾಗಿದೆ.

ಮುಂಚಿತವಾಗಿ ಚಾಟ್ನಿ ಮಾಡಿದ ತೋಟಗಳಲ್ಲಿ ಈಗಾಗಲೇ ಹೂಗಳು ಮಾಡಿ, ಕಾಯಿ ಕಟ್ಟುವ ಹಂತದಲ್ಲಿವೆ. ಈ ಹಂತದಲ್ಲಿ ಉತ್ತಮ ಹವಾಮಾನದ ಅವಶ್ಯಕತೆ ಹೆಚ್ಚಾಗಿದೆ. ಕಳೆದ ವರ್ಷ ಬರ ಬಿದ್ದಿದ್ರ ಪರಿಣಾಮ ಪ್ರಸಕ್ತ ವರ್ಷ ಕಡ್ಡಿ ತಯಾರಾಗಿಲ್ಲ. ಇದರ ಪರಿಣಾಮ ಪ್ರಸಕ್ತ ವರ್ಷ ಮೊದಲೇ ಶೇ.50ಕ್ಕಿಂತ ಕಡಿಮೆ ಹೂವು ಕೊಟ್ಟಿದೆ. ಇಂತಹದರಲ್ಲಿ ಗಿಡಗಳಿಗೆ ಮತ್ತೊಮ್ಮೆ
ರೋಗ ಬಾಧಿಸಿರುವುದು ಆತಂಕ ಸೃಷ್ಟಿಸಿದೆ.

ಪ್ರಸಕ್ತ ವರ್ಷದ ದ್ರಾಕ್ಷಿ ಬೆಳೆಗೆ ಅಕ್ಟೋಬರ್‌ ತಿಂಗಳು ನಿರ್ಣಾಯಕ ತಿಂಗಳಾಗಿದೆ. ಆದರೆ ಸದ್ಯ ದ್ರಾಕ್ಷಿ ಬಳ್ಳಿಗಳಲ್ಲಿನ ರೋಗ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿಲ್ಲ. ಕನಿಷ್ಠ 5 ರಿಂದ 6 ಲಕ್ಷ ರೂ.ಗಳ ವೆಚ್ಚ ಮಾಡಿದವರಿಗೆ ದ್ರಾಕ್ಷಿ ಹುಳಿಯಾಗುವ ಆತಂಕ ಎದುರಾಗಿದೆ.

ಹತ್ತು ವರ್ಷದಿಂದ ಬೆಲೆ ಅಷ್ಟೇ

ಬರದ ನಾಡಿಗೆ ವರವಾಗಿ ಬಂದ ದ್ರಾಕ್ಷಿ ಬೆಳೆ ಇಂದು ರೈತನಿಗೆ ಹುಳಿಯಾಗುತ್ತಿದೆ. ಒಂದೆಡೆ ಬರ, ಇನ್ನೊಂದೆಡೆ ಹವಾಮಾನ ವೈಪರೀತ್ಯ, ಮತ್ತೂಂದೆಡೆ ಸೂಕ್ತ ಬೆಲೆ ಸಿಗದಿರುವುದಕ್ಕೆ ದ್ರಾಕ್ಷಿ ಕೃಷಿ ಕ್ಷೇತ್ರ ಬಡವಾಗುತ್ತಿದ್ದು, ಬೆಳೆ ನಷ್ಟದ ಪರಿಹಾರ ಮತ್ತು ಬೆಳೆದ ದ್ರಾಕ್ಷಿ ಹಾಗೂ ಒಣ ದ್ರಾಕ್ಷಿಗೆ ಬೆಂಬಲ ಬೆಲೆಯ ನಿರೀಕ್ಷೆಗಳು ಹುಸಿಯಾಗಿವೆ.

ಕಳೆದ 10 ವರ್ಷಗಳಿಂದ ಒಣ-ಹಸಿ ದ್ರಾಕ್ಷಿ ಬೆಲೆ ಒಂದೇ ತೆರನಾಗಿದೆ. ಕೇಜಿಗೆ 25 ರಿಂದ 30 ರೂಪಾಯಿ. ಚೆನ್ನಾಗಿ ಬೆಳೆದ ಬೆರಳೆಣಿಕೆಯಷ್ಟು ರೈತರಿಗೆ 20ರಿಂದ 50 ರೂ.ವರೆಗೂ ಬೆಲೆ ದೊರೆಯುತ್ತದೆ. ಆದರೆ ದಿನಕ್ಕೆ 100ರೂ.ಇದ್ದ ಕೂಲಿ ಈಗ 5 ರಿಂದ 6ನೂರು ತಲುಪಿದೆ. ಔಷಧಿ, ಗೊಬ್ಬರ ಬೆಲೆ 10 ಪಟ್ಟು ಹೆಚ್ಚಿದೆ. ಈ ಮೊದಲು ಎಕರೆಯೊಂದರ ಉಪಚಾರಕ್ಕೆ ವರ್ಷಕ್ಕೆ 70 ಸಾವಿರದಿಂದ ರಿಂದ 1ಲಕ್ಷ ರೂ. ಸಾಕಾಗುತ್ತಿತ್ತು. ಈಗ 2 ರಿಂದ 3ಲಕ್ಷಕ್ಕೂ ಅಧಿಕ ಹಣ ಸುರಿಯಬೇಕು. ಆದರೆ ದ್ರಾಕ್ಷಿ ಬೆಲೆ ಮಾತ್ರ ಹೆಚ್ಚಿಲ್ಲ. ರೈತ ಬೆಳೆದ ದ್ರಾಕ್ಷಿಗೆ ವೈಜ್ಞಾನಿಕ ಬೆಲೆ ದೊರೆಯುತ್ತಿಲ್ಲ. ನಷ್ಟವೂ ಬೆನ್ನು ಬಿಡುತ್ತಿಲ್ಲ.

ಕಳೆದ ವರ್ಷದ ನೀರಿನ ಕೊರತೆಯಿಂದ ಗರ್ಭ ನಿಂತಿಲ್ಲ. ಬೇಕಿರುವಷ್ಟು ಹೂಗಟ್ಟಿಲ್ಲ. ಸದ್ಯಕ್ಕೆ ಕಳೆದ ವರ್ಷದ ದುಷ್ಪರಿಣಾಮ, ಪ್ರಸಕ್ತ ವರ್ಷದ ಹವಾಮಾನ ವೈಪರೀತ್ಯದಿಂದ ದ್ರಾಕ್ಷಿ ಬೆಳೆಗೆ ದಾವನಿ-ಕೊಳೆ ರೋಗ ಕಾಣಿಸಿಕೊಂಡಿದ್ದು, ರೈತರ ತೋಟಗಳಿಗೆ ಭೇಟಿ ನೀಡಿ ಸರಕಾರಕ್ಕೆ ವರದಿ ಸಲ್ಲಿಸುವೆ.

ಅಕ್ಷಯಕುಮಾರ  
ಉಪಾಧ್ಯಾಯ, ತೋಟಗಾರಿಕೆ
ಅಧಿಕಾರಿ, ತೆಲಸಂಗ.

ಟಾಪ್ ನ್ಯೂಸ್

Mokshita-Trivik

BBK11: ಬಿಗ್ ಬಾಸ್ ಮನೆಯಲ್ಲಿ ಈ ವರೆಗೆ ಸೈಲೆಂಟ್ ಆಗಿದ್ದ ‘ಪಾರು’ ವೈಲೆಂಟ್ ಆಗಿದ್ದೇಕೆ?

Puturu-Bike

Putturu: ಮುಕ್ರಂಪಾಡಿ ಸಮೀಪ ಅಪಘಾತ; ಓರ್ವ ಗಂಭೀರ

iskon-Thirupathi

Hoax Call: ತಿರುಪತಿಯಲ್ಲಿ ಹೋಟೆಲ್‌ಗಳ ಬಳಿಕ ಈಗ ಇಸ್ಕಾನ್‌ ದೇಗುಲಕ್ಕೂ ಬೆದರಿಕೆ ಸಂದೇಶ!

BYV-yathnal

Waqf Property: ಶಾಸಕ ಯತ್ನಾಳ್‌ ಆಕ್ರೋಶ ಬೆನ್ನಲ್ಲೇ ಬಿಜೆಪಿ ‘ವಕ್ಫ್ ತಂಡ’ ಪುನಾರಚನೆ

1-snehamayi

MUDA case;ದೂರಿಗೆ ಪೂರಕವಾಗಿ ಇ.ಡಿ.ಗೆ ‘ವಿಡಿಯೋ ಸಾಕ್ಷ್ಯ’ ನೀಡಿದ ಸ್ನೇಹಮಯಿ ಕೃಷ್ಣ

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

ಪ್ರತಿ ಹೆಣ್ಣಿನ ಹೋರಾಟದ ಹಿಂದಿದೆ ಈ ನೆಲದ ಸ್ವಾಭಿಮಾನ: ಪ್ರೊ. ತ್ಯಾಗರಾಜ

ಪ್ರತಿ ಹೆಣ್ಣಿನ ಹೋರಾಟದ ಹಿಂದಿದೆ ಈ ನೆಲದ ಸ್ವಾಭಿಮಾನ: ಪ್ರೊ. ತ್ಯಾಗರಾಜ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

baby

Belagavi; ಬಿಮ್ಸ್‌ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು

jenu nona

Belgavi; ಅರಣ್ಯಾಧಿಕಾರಿ, ಸಿಬಂದಿ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mokshita-Trivik

BBK11: ಬಿಗ್ ಬಾಸ್ ಮನೆಯಲ್ಲಿ ಈ ವರೆಗೆ ಸೈಲೆಂಟ್ ಆಗಿದ್ದ ‘ಪಾರು’ ವೈಲೆಂಟ್ ಆಗಿದ್ದೇಕೆ?

Puturu-Bike

Putturu: ಮುಕ್ರಂಪಾಡಿ ಸಮೀಪ ಅಪಘಾತ; ಓರ್ವ ಗಂಭೀರ

4

Belthangady: ಮನೆಯಿಂದ ನಗದು, ಚಿನ್ನಾಭರಣ ಕಳವು

3

Mangaluru: ಅಪಘಾತದ ಬಳಿಕ ಕಾರು ಚಾಲಕನಿಗೆ ಲೋಹದ ಪಂಚ್‌ ನಿಂದ ಹಲ್ಲೆ, ಪೆಪ್ಪರ್‌ ಸ್ಪ್ರೇ!

crime

Padubidri: ಪಾದಯಾತ್ರಿಗಳಿಗೆ ಮೋಟಾರು ಬೈಕ್‌ ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.