Telsang: ಶಾಲೆಗೆ ಕನ್ನಡ ಮಾತಾ ಫೌಂಡೇಶನ್‌ ಬಣ್ಣದ ಸೊಬಗು


Team Udayavani, Sep 21, 2023, 5:54 PM IST

Telsang: ಶಾಲೆಗೆ ಕನ್ನಡ ಮಾತಾ ಫೌಂಡೇಶನ್‌ ಬಣ್ಣದ ಸೊಬಗು

ತೆಲಸಂಗ: ಸರ್ಕಾರಿ ಶಾಲೆಯ ಉಳಿವಿಗಾಗಿ ಶ್ರಮಿಸುತ್ತಿರುವ ಗೋಕಾಕದ ಕನ್ನಡ ಮಾತಾ ಫೌಂಡೇಶನ್‌ದ ಸಮಾಜ ಸೇವಕಿ ಪೂಜಾ ಕಾಂಬಳೆ ಸಮಾನ ಮನಸ್ಕರ ಸಹಾಯದೊಂದಿಗೆ ಗ್ರಾಮದ ಪ್ರಾಥಮಿಕ ಶಾಲೆಯೊಂದಕ್ಕೆ ಬಣ್ಣ ಹೊಸ ರೂಪವನ್ನೇ
ಕೊಟ್ಟಿದ್ದಾರೆ.

ಗ್ರಾಮದ ತೆಲಸಂಗ ಕ್ರಾಸ್‌ನಲ್ಲಿ ಇರುವ ಮಾಧವಾನಂದ ನಗರದ ಸರಕಾರಿ ಶಾಲೆ ಹಲವು ದಶಕಗಳಿಂದ ಸುಣ್ಣ ಬಣ್ಣ ಕಂಡಿರಲಿಲ್ಲ. ಕಳೆದ ಒಂದು ವಾರದಿಂದ ಗ್ರಾಮಕ್ಕೆ ಆಗಮಿಸಿರುವ ಪೂಜಾ ಕಾಂಬಳೆ ನೇತೃತ್ವದ ತಂಡ, ಶಾಲೆಗೆ ಬಣ್ಣ ಬಳೆಯುವ
ಮೂಲಕ ಶಾಲೆ ಕಂಗೊಳಿಸುವಂತೆ ಮಾಡಿದ್ದಾರೆ.

ವರ್ಷದಿಂದ ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ಈ ತಂಡದಲ್ಲಿ ಕಾಗವಾಡ ಹಾಗೂ ಅಥಣಿ ಯುವಕರು ಇದ್ದಾರೆ. ನಿತ್ಯ
ತಮ್ಮ ದುಡಿಮೆಯಲ್ಲಿನ ಅಲ್ಪ ಸ್ವಲ್ಪ ಹಣ ಉಳಿಸಿ ಸಾಮಾಜಿಕ ಸೇವೆಗೆ ಖರ್ಚು ಮಾಡುತ್ತಿದ್ದಾರೆ. ಕಾಗವಾಡದಲ್ಲಿ ಎರಡು ಶಾಲೆ, ಉಪ್ಪಾರವಾಡಿ, ತೆಲಸಂಗದಲ್ಲಿ ತಲಾ ಒಂದು ಶಾಲೆಯಂತೆ ಈವರೆಗೆ ಒಟ್ಟು 4ಶಾಲೆಗಳಿಗೆ ಬಣ್ಣ ಬಳಿದಿದ್ದಾರೆ. ಕೇವಲ ಬಣ್ಣ ಬಳಿಯುವುದು ಮಾತ್ರವಲ್ಲ. ಸರಕಾರಿ ಶಾಲೆಗಳ ಕಾಂಪೌಂಡ್‌, ಗೇಟ್‌ ಶಿಥಿಲಗೊಂಡಿದ್ದರೆ ರಿಪೇರಿ ಕೂಡ ಮಾಡುತ್ತಿದ್ದಾರೆ. ಉಪ್ಪಾರವಾಡಿ ಶಾಲೆಗೆ 1ಕಿ.ಮೀ ಪೈಪ್‌ ಲೈನ್‌ ಎಳೆದು ಕುಡಿಯುವ ನೀರೀನ ವ್ಯವಸ್ಥೆಯನ್ನೂ ಮಾಡಿದ್ದಾರೆ.

ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಈ ತಂಡಕ್ಕೆ ಶಾಲೆಯ ಶಿಕ್ಷಕರು ಬೆಳಗಿನ ಉಪಹಾರ ಮತ್ತು ರಾತ್ರಿ ಊಟದ ವ್ಯವಸ್ಥೆ ಮಾಡಿಸುತ್ತಾರೆ. ಮಿಕ್ಕಂತೆ ಮಧ್ಯಾಹ್ನ ಶಾಲೆಯ ಮಕ್ಕಳೊಂದಿಗೆ ಬಿಸಿಯೂಟ ಸೇವಿಸುವ ಈ ತಂಡದ ಸದಸ್ಯರು ಒಂದು ಪೈಸೆ
ಹಣ ಸಹ ಪಡೆಯದೇ ನಿಸ್ವಾರ್ಥದಿಂದ ಕೆಲಸ ಮಾಡುತ್ತಿರುವುದು ಸಾರ್ವಜನಿಕರ ಪ್ರಸಂಸೆಗೆ ಪಾತ್ರವಾಗಿರುವುದಲ್ಲದೇ ಗ್ರಾಮದ ಯುವಕರಿಗೆ ಪ್ರೇರಣೆಯೂ ಆಗಿದೆ.

ಈ ತಂಡದಲ್ಲಿ ಪೂಜಾ ಕಾಂಬಳೆ, ಹಣಮಂತ ನಾಯಕ್‌, ಶಿವರಾಜ್‌ ಕಾಂಬಳೆ, ಉಮೇಶ ಸೇಗುನಸಿ, ರಾಕೇಶ ಕಾಂಬಳೆ, ರಾಹುಲ ಕಾಂಬಳೆ, ಕೃಷ್ಣ ಕಾಂಬಳೆ, ಮಲ್ಲಿಕಾರ್ಜುನ ಕಾಂಬಳೆ, ಪ್ರಕಾಶ ಕೆಂಗಲಗುತ್ತಿ, ಗಣೇಶ ಕಳಸಿ, ರಾಕೇಶ್‌ ನಾಯಕ ಇದ್ದಾರೆ. ಮುಖ್ಯ ಶಿಕ್ಷಕ ಇಲಾಯ್‌ ಮುಜಾವರ ಹಾಗೂ ಶಿಕ್ಷಕರು, ಗ್ರಾಪಂ ಸದಸ್ಯ ರಾಮು ನಿಡೋಣಿ. ಆಸ್ಕರ ಮುಲ್ಲಾ. ರಾಜು ಹೋನಗೌಡ ಈ ತಂಡದ ಉಟೋಪಚಾರದ ಹೊಣೆ ಹೊತ್ತಿದ್ದಾರೆ.

ನಿತ್ಯ ಕಾಯಕ ಮಾಡಿಕೊಂಡೇ ಹೊಟ್ಟೆ ತುಂಬಿಸಿಕೊಳ್ಳುವ ಈ ತಂಡ ದುಡಿಮೆಯಲ್ಲಿನ ಹಣ ಉಳಿಸಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನಿಸ್ವಾರ್ಥ ಸೇವೆ ಮಾಡುತ್ತಿದೆ. ಸಾಮಾಜಿಕ ಕಳಕಳಿ ಇರುವವರು ಈ ತಂಡದ ಕಾರ್ಯಕ್ಕೆ ಕೈ ಜೋಡಿಸಲಿ ಎಂದು ಆಶಿಸುತ್ತೇವೆ. ಅವರ ಈ ಕಾರ್ಯಕ್ಕೆ ಜನರಿಂದ ಮತ್ತಷ್ಟು ಬೆಂಬಲ ಸಿಗಲಿ.
ರಾಮು ನಿಡೋಣಿ. ಗ್ರಾಪಂ ಸದಸ್ಯ, ತೆಲಸಂಗ.

ಶಾಲೆಗಳು ಸುಣ್ಣ ಬಣ್ಣ ಕಾಣದಿರುವುದು ಪಾಲಕರು ಸರಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳಿಸದಿರಲು ಎಂದು
ಕಾರಣವಾಗಿರಬಹುದು ಎನ್ನಿಸಿತು. ಬಿಡುವಿನ ಸಮಯದಲ್ಲಿ ಸಮಾಜ ಸೇವೆ ಮಾಡೋಣ ಅಂತ ಚರ್ಚಿಸಿದಾಗ ಎಲ್ಲರ ಸಮ್ಮತಿ ಬಂತು. ವರ್ಷದಿಂದ ಇಂತಹ ಕೆಲಸ ಮಾಡುತ್ತಿದ್ದೇವೆ. ಇದರಿಂದ ತುಂಬಾ ಸಂತೋಷವಾಗುತ್ತದೆ.
ಪೂಜಾ ಕಾಂಬಳೆ. ತಂಡದ ನಾಯಕಿ, ಕಾಗವಾಡ.

*ಜಗದೀಶ ಖೊಬ್ರಿ

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-belagavi

Belagavi: ಕ್ರಾಂತಿಯ ನೆಲ ಕಿತ್ತೂರಿನಲ್ಲಿ 200ನೇ ವಿಜಯೋತ್ಸವಕ್ಕೆ ಅದ್ಧೂರಿ ಚಾಲನೆ

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

ಅ.23 ರಿಂದ 25: ಮಳೆ ನಡುವೆಯೂ ಕಿತ್ತೂರು ಉತ್ಸವಕ್ಕೆ ಭರದ ಸಿದ್ಧತೆ

ಅ.23 ರಿಂದ 25: ಮಳೆ ನಡುವೆಯೂ ಕಿತ್ತೂರು ಉತ್ಸವಕ್ಕೆ ಭರದ ಸಿದ್ಧತೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.