ಸಾಲದ ಶೂಲ


Team Udayavani, Sep 1, 2019, 10:38 AM IST

bg-tdy-1

ರಾಮದುರ್ಗ: ಎಷ್ಟೋ ವರ್ಷಗಳಿಂದ ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಸಾಕಷ್ಟು ರೈತರು ಸಂಕಷ್ಟ ಅನುಭವಿಸುತ್ತಿರುವ ಸಮಯದಲ್ಲಿಯೇ, ಅಲ್ಪಸ್ವಲ್ಪ ಮಳೆ ನಂಬಿಕೊಂಡು ಬಿತ್ತನೆ ಮಾಡಿದ್ದ ನದಿ ಪಾತ್ರದ ರೈತರಿಗೆ ಮಳೆಯಾಗದೇ ಬಂದ ಪ್ರವಾಹ ಬದುಕನ್ನೇ ಬರಡಾಗುವಂತೆ ಮಾಡಿದೆ.

ಪ್ರವಾಹದಿಂದಾಗಿ ತಾಲೂಕಿನಲ್ಲಿ ಕೃಷಿಯ ಅಂದಾಜು 15,350 ಹೆಕ್ಟೇರ್‌ ಹಾಗೂ ತೋಟಗಾರಿಕೆಯ 383 ಹೆಕ್ಟೇರ್‌ ಒಳಗೊಂಡು 15,733 ಹೆಕ್ಟೇರ್‌ ಪ್ರದೇಶದ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ತಾಲೂಕಿನಲ್ಲಿ ಮಳೆಯಾಗದ ಕಾರಣ ಅರ್ಧ ಪ್ರದೇಶದ ರೈತರು ಬಿತ್ತನೆ ಮಾಡದೇ ಸಂಕಷ್ಟದಲ್ಲಿದ್ದರೆ, ಇತ್ತೀಚೆಗೆ ಸುರಿದ ಅಲ್ಪಸ್ವಲ್ಪ ಮಳೆಯನ್ನು ನಂಬಿಕೊಂಡು ನದಿಯ ಪಕ್ಕದ ರೈತರು ಸಾಲಸೋಲ ಮಾಡಿ ಬೀಜ ಹಾಕಿ ಬೆಳೆದ ಬೆಳೆ ಇಂದು ಮಲಪ್ರಭಾ ಪ್ರವಾಹಕ್ಕೆ ಕೊಚ್ಚಿ ಹೋಗಿ ಭೂಮಿಯೇ ಗುರುತು ಸಿಗದಂತಾಗಿದೆ.

ನದಿ ಪಾತ್ರಕ್ಕೆ ಹೊಂದಿಕೊಂಡ ಬಹುತೇಕ ರೈತರು ಕಬ್ಬು, ಬಾಳೆ ಬೆಳೆಯನ್ನು ಮೂಲ ಬೆಳೆಯನ್ನಾಗಿ ನಾಟಿ ಮಾಡಿ ಜೀವನ ಮಾಡುತ್ತಿದ್ದರು. ಇನ್ನೂ ಕೆಲ ರೈತರು ತರಕಾರಿ ಸೇರಿದಂತೆ ಇತರ ಬೆಳೆಗಳನ್ನು ಬೆಳೆದು ಹಾಗೋ ಹೀಗೋ ಜೀವನ ಸಾಗಿಸಿಕೊಂಡು ಬರುತ್ತಿದ್ದರು. ಆದರೆ ಆಗಸ್ಟ್‌ ತಿಂಗಳ ಮೊದಲ ವಾರದಲ್ಲಿ ಬಂದ ಪ್ರವಾಹ ರೈತರ ಜೀವನವನ್ನೆ ಹಿಂಡಿ ಹಿಪ್ಪೆ ಮಾಡಿದ್ದು, ಜಾನುವಾರುಗಳು ಮೇವಿಗಾಗಿ ಪರಿತಪಿಸುವಂತಾಗಿದೆ.

ಹೊಟ್ಟೆಯ ಮೇಲೆ ಬರೆ: ಈಗಿನ ಪರಿಸ್ಥಿತಿಯಲ್ಲಿ ನೆರೆ ಪೀಡಿತ ಪ್ರದೇಶಗಳಲ್ಲಿ ಜನ ಜೀವನ ಸಾಗಿಸುವುದು ತುಂಬಾ ದುಸ್ತರವಾಗಿದೆ. ವಾಣಿಜ್ಯ ಬೆಳೆ ಬೆಳೆದು ವರ್ಷವಿಡೀ ಕಾಯುವ ರೈತರ ಸಮಸ್ಯೆ ಒಂದಾದರೆ ಹೊಲದಲ್ಲಿ ಬರುವ ತರಕಾರಿಯನ್ನು ದಿನನಿತ್ಯ ಮಾರಿಕೊಂಡು ಬದುಕು ಸಾಗಿಸುವ ರೈತರ ಬದುಕು ಇನ್ನೂ ಶೋಚನಿಯವಾಗಿದೆ.

ಸಾಲದ ಸುಳಿಗೆ ಸಿಲುಕಿದ ರೈತರು: ಇದ್ದ ಬದ್ದ ಹಣವನ್ನೆಲ್ಲ ಹೊಲಗಳಿಗೆ ಸುರಿದ ರೈತರು ಒಂದು ಕಡೆಯಾದರೆ, ಸಾಲ ಸೋಲ ಮಾಡಿ ಬಿತ್ತನೆ ಮಾಡಿ ಮುಂದೆ ಬರುವ ಬೆಳೆಯನ್ನು ನಂಬಿಕೊಂಡಿದ್ದ ರೈತರಿಂದು ಸಾಲದ ಸುಳಿಗೆ ಸಿಲುಕುವಂತಾಗಿದೆ. ಈಗಾಗಲೇ ಮಾಡಿದ ಸಾಲ ತೀರಿಸಲಾಗದ ರೈತರು ಸಾಕಷ್ಟಿರುವಾಗ ಪ್ರವಾಹದಿಂದಾದ ಅನಾಹುತ ಅವರನ್ನು ಮತ್ತಷ್ಟು ಸಾಲದ ಕೂಪಕ್ಕೆ ತಳ್ಳಿದೆ.

ಆತಂಕದಲ್ಲಿ ರೈತರು: ಪ್ರವಾಹದ ಹೊಡೆತಕ್ಕೆ ಹಾಗೂ ಬೆಳೆ ಹಾಳಾಗಿದ್ದಲ್ಲದೇ ಭೂಮಿ ಕೂಡ ಗುರುತು ಸಿಗದಂತಾಗಿದೆ. ಹೊಲಗಳಲ್ಲಿನ ಫಲವತ್ತಾದ ಮಣ್ಣು ನೀರಿಗೆ ಕೊಚ್ಚಿ ಹೋಗಿ ಬೃಹದಾಕಾರದ ಕೊರಕಲುಗಳು ಬಿದ್ದಿವೆ. ಇನ್ನೂ ಕೆಲ ಹೊಲಗಳಲ್ಲಿ ಸಾಕಷ್ಟು ಕಲ್ಲುಗಳು ಬಂದು ಬಿದ್ದಿದ್ದು, ಉಳುಮೆ ಮಾಡಲು ಬಾರದಂತಾಗಿದೆ. ಅದನ್ನು ಸರಿಪಡಿಸಬೇಕಾದರೆ ಎಷ್ಟೋ ವರ್ಷಗಳು ಬೇಕು. ಹೀಗಾದರೇ ಮುಂದೆ ನಮ್ಮ ಗತಿ ಏನು ಎಂಬ ಚಿಂತೆ ರೈತರದಾಗಿದೆ.

 

•ಈರನಗೌಡ ಪಾಟೀಲ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.