![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 11, 2019, 10:41 AM IST
ಬೆಳಗಾವಿ: ಗ್ರಾಮ ಪಂಚಾಯಿತಿಗಳಲ್ಲಿ ಆಗುತ್ತಿರುವ ಅವ್ಯವಹಾರ, ಯೋಜನೆಗಳ ದುರುಪಯೋಗ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಬೆಳಗಾವಿ: ಜಿಲ್ಲೆಯ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ಆಗುತ್ತಿರುವ ಅವ್ಯವಹಾರ, ಯೋಜನೆಗಳ ದುರುಪಯೋಗ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಿಷನ್ ಕ್ರಾಂತಿ ಸೇವಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಗ್ರಾಪಂಗಳಲ್ಲಿ ವಸತಿ, ಶೌಚಾಲಯ, ಕೃಷಿ ಹೊಂಡ, ದನದ ಶೆಡ್, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗಳ ದುರುಪಯೋಗ ಆಗುತ್ತಿದೆ. ಸವದತ್ತಿ ತಾಲೂಕಿ ಅಕ್ಕಿಸಾಗರ ಗ್ರಾಪಂ ಹಾಗೂ ಕೊಡ್ಲಿವಾಡ ಗ್ರಾಮದಲ್ಲಿ ಅನೇಕ ಯೋಜನೆಗಳು ದುರುಪಯೋಗ ಆಗಿವೆ. ನರೇಗಾ ಅಡಿ ಅರ್ಹರಿಗೆ ಸಿಗಬೇಕಾದ ವೇತನ ಮೊತ್ತ ಬೇರೆಯವರ ಪಾಲಾಗಿರುವುದು ಕಂಡು ಬಂದಿದೆ ಎಂದು ಆರೋಪಿಸಿದರು.
ಕೊಡ್ಲಿವಾಡ ಗ್ರಾಮದಲ್ಲಿ ಕೈಗೊಂಡ ಕಾಮಗಾರಿಗಳಲ್ಲಿ ಲೋಪದೋಷ, ಭ್ರಷ್ಟಾಚಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲಿ ಅವ್ಯವಹಾರ ನಡೆದು ವರ್ಷ ಕಳೆದರೂ ಮೇಲಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೇ ತಪ್ಪಿತಸ್ಥರ ವಿಚಾರಣೆ ನಡೆಸಿ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿಅಧ್ಯಕ್ಷ ಮಹಾದೇವ ಧರೆಣ್ಣವರ, ದೇವರಾಜ ಕಾಂಬಳೆ, ಸೋಮಶೇಖರ ಸಂಬಣ್ಣವರ ಸೇರಿದಂತೆ ಇತರರು ಇದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.