![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 27, 2020, 4:44 PM IST
ಗೋಕಾಕ: ಬಾಲಚಂದ್ರ ಜಾರಕಿಹೊಳಿ ಅವರಂತಹ ಹೃದಯಮಯಿ ಶಾಸಕರನ್ನು ಪಡೆದಿರುವುದು ಅರಭಾವಿ ಕ್ಷೇತ್ರದ ಜನರ ಪುಣ್ಯವೆಂದು ಶೂನ್ಯ ಸಂಪಾದನಮಠದ ಮುರುಘರಾಜೇಂದ್ರ ಸ್ವಾಮಿಗಳು ತಿಳಿಸಿದರು.
ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ನೂತನವಾಗಿ 16.25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ರಾಜೀವ ಗಾಂಧಿ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದರು. ಬಾಲಚಂದ್ರ ಜಾರಕಿಹೊಳಿ ಅವರು ಜನರು ಸಂಕಷ್ಟದಲ್ಲಿದ್ದಾಗ ಅದನ್ನು ಸಮರ್ಥವಾಗಿ ನಿಭಾಯಿಸಿ ಜನರಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ.
ಕೋವಿಡ್-19 ಸಮಯದಲ್ಲಿ ಕ್ಷೇತ್ರದ ಎಲ್ಲ ಜನರಿಗೂ ಆಹಾರ ಧಾನ್ಯಗಳ ಕಿಟ್, ಮಾಸ್ಕ್ ವಿತರಿಸಿರುವುದು ಮಾನವೀಯತೆಗೆ ಸಾಕ್ಷಿಯಾಗಿದೆ ಎಂದರು. ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಗ್ರಾಮ ಪಂಚಾಯತಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಶಾಸಕರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಳೆದ 15 ವರ್ಷಗಳಿಂದ ಅವಿರತವಾಗಿ ಶ್ರಮಿಸುತ್ತಿದ್ದಾರೆಂದು ತಿಳಿಸಿದರು.
ಮೆಳವಂಕಿ ಜಿಪಂ ಸದಸ್ಯೆ ಶಶಿಕಲಾ ಸಣ್ಣಕ್ಕಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಸಗೌಡ ಪಾಟೀಲ, ಗ್ರಾಪಂ ಅಧ್ಯಕ್ಷೆ ಶಕುಂತಲಾ ಕಾಪಶಿ, ತಾಪಂ ಸದಸ್ಯೆ ಬಾಳವ್ವ ಬಬಲಿ, ಪಿಕೆಪಿಎಸ್ ಅಧ್ಯಕ್ಷ ಭೀಮಪ್ಪ ಕಾಪಶಿ, ಮುಖಂಡರಾದ ಮಹಾದೇವ ಪತ್ತಾರ, ಸಿದ್ದಪ್ಪ ಹಂಜಿ, ಭೀಮಗೌಡ ಪಾಟೀಲ, ಅಡಿವೆಪ್ಪ ಮುತವಾಡ, ಅಲ್ಲಪ್ಪ ಕಂಕಣವಾಡಿ, ಈರಪ್ಪ ಬೀರನಗಡ್ಡಿ, ಯಲ್ಲವ್ವಾ ಶಿಂತ್ರಿ, ಗ್ರಾಪಂ ಸದಸ್ಯರು, ಪಿಡಿಓ ಯಲ್ಲಪ್ಪ ಮೂಡಲಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಅಂಕಲಗಿ ಮಠದ ಗುರುಸಿದ್ಧೇಶ್ವರ ಸ್ವಾಮಿಗಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವದಿಸಿದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.