![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-415x240.jpg)
ಜಾನಪದ ಕಲೆ ಉಳಿಸಿ-ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ; ಬಸಗೌಡ ಪಾಟೀಲ
ಜಾನಪದ ಕಲೆಗಳ ಕಡೆಗೆ ಒಲವು ತೋರಿಸಿ, ಉಳಿಸಲು ಮುಂದಾಗಬೇಕು
Team Udayavani, Mar 1, 2023, 2:45 PM IST
![ಜಾನಪದ ಕಲೆ ಉಳಿಸಿ-ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ; ಬಸಗೌಡ ಪಾಟೀಲ](https://www.udayavani.com/wp-content/uploads/2023/03/Moodalagi-620x251.jpg)
ಮೂಡಲಗಿ: ಜಾನಪದ ಕಲೆಗಳು ನಶಿಸುತ್ತಿದ್ದು, ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿಯು ಎಲ್ಲರ ಮೇಲಿದೆ ಎಂದು ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸಗೌಡ ಪಾಟೀಲ ಹೇಳಿದರು.
ಕಲ್ಲೋಳಿ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಬೆಂಗಳೂರಿನ ಕರ್ನಾಟಕ ಜಾನಪದ ಅಕಾಡೆಮಿ ಮತ್ತು ವೀರಭದ್ರೇಶ್ವರ ಜಾನಪದ ಕಲಾ ಪೋಷಕ ಸಂಘದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಗ್ರಾಮೀಣ ಜಾನಪದ ಕಲೆಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾನಪದ ಕಲೆಗಳು ನಮ್ಮ ನಾಡಿನ ಸಂಸ್ಕೃತಿಯ ಜೀವಾಳವಾಗಿವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ಪಾರಿಜಾತ ಕಲಾವಿದ ಭೀಮಪ್ಪ ಕಡಾಡಿ ಮಾತನಾಡಿ, ಮೊಬೈಲ್ ಹಾವಳಿಯಲ್ಲಿ ಜನಪದ ಕಲೆಗಳು ಮರೆಯಾಗುತ್ತಲಿವೆ. ಯುವ ಪೀಳಿಗೆಯು ಜಾನಪದ ಕಲೆಗಳ ಕಡೆಗೆ ಒಲವು ತೋರಿಸಿ, ಉಳಿಸಲು ಮುಂದಾಗಬೇಕು ಎಂದರು.
ಸಾಹಿತಿ ಡಾ| ಸುರೇಶ ಹನಗಂಡಿ ಪ್ರಾಸ್ತಾವಿಕ ಮಾತನಾಡಿ, ಗ್ರಾಮೀಣ ಭಾಗದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವುದು ಮತ್ತು ವಿದ್ಯಾರ್ಥಿಗಳು ಮತ್ತು ಹೊಸ ಪೀಳಿಗೆಗೆ ಜಾನಪದ ಕಲೆಗಳನ್ನು ಪರಿಚಯಿಸಿ ಅವುಗಳ ಬಗ್ಗೆ ಅಭಿರುಚಿ ಮೂಡಿಸುವುದು ವಿಚಾರ ಸಂಕಿರಣದ ಉದ್ದೇಶವಾಗಿದೆ ಎಂದರು.
ಕರ್ನಾಟಕ ಜಾನಪದ ಅಕಾಡೆಮಿ ರಿಜಿಸ್ಟ್ರಾರ್ ಎನ್. ನಮ್ರತಾ ಮಾತನಾಡಿ, ಕಲ್ಲೋಳಿಯಲ್ಲಿ ವಿಚಾರ ಸಂಕಿರಣವನ್ನು ಉತ್ತಮವಾಗಿ ಸಂಘಟಿಸಿದ್ದು ಶ್ಲಾಘನೀಯವಾಗಿದೆ ಎಂದರು. ಕರ್ನಾಟಕ ಜಾನಪದ ಅಕಾಡೆಮಿ ಅಧಿಧೀಕ್ಷಕ ಪ್ರಕಾಶ, ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಬಿ.ಎಸ್. ಗೊರೋಶಿ, ಎಸ್.ಬಿ. ಜಗದಾಳೆ, ಎಸ್.ಎಂ. ಖಾನಾಪುರ, ಎಂ.ಎಸ್. ಕಪ್ಪಲಗುದ್ದಿ, ಬಾಳವ್ವ ಕಂಕಣವಾಡಿ, ಎಂ.ಡಿ. ಕುರಬೇಟ, ಬಿ.ಕೆ. ಗೋರೋಶಿ, ಕಿತ್ತೂರ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಗುಳಪ್ಪಾ ವಿಜಯನಗರ ಇದ್ದರು.
ಸಮಾರಂಭದಲ್ಲಿ ಕಲ್ಲೋಳಿಯ 30 ಮಾಜಿ ಯೋಧರು ಸೇರಿದಂತೆ ಕ್ರೀಡೆ ಮತ್ತು ವಿಶ್ವವಿದ್ಯಾಲಯಕ್ಕೆ ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಪ್ರೊ| ಡಿ.ಎಸ್. ಹುಗ್ಗಿ ಸ್ವಾಗತಿಸಿದರು, ಡಾ| ಕೆ.ಎಸ್. ಪರವ್ವಗೋಳ, ಪ್ರೊ| ಶಂಕರ ನಿಂಗನೂರ ನಿರೂಪಿಸಿದರು.
ಕಲಾ ಮೆರವಣಿಗೆ: ಸಮಾರಂಭದ ಪೂರ್ವದಲ್ಲಿ ವಿವಿಧ ಕಲಾ ತಂಡಗಳಿಂದ ಪಟ್ಟಣ ಪಂಚಾಯ್ತಿಯಿಂದ ಸಮಾರಂಭ ನಡೆಯುವ ಸ್ಥಳದವರೆಗೆ ಮೆರವಣಿಗೆ ಜರುಗಿತು. ತಾಸವಾದ, ಕೈಪಟ್ಟಿ, ಪುರವಂತಿಕೆ, ಸಂಬಾಳ, ವೀರಗಾಸೆ, ಕರಡಿ ಮಜಲು, ಚೌಡಕಿ, ಸಿದ್ದಿ ಸೋಗು ಸೇರಿದಂತೆ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಗಮನ ಸೆಳೆದವು.
ಟಾಪ್ ನ್ಯೂಸ್
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-415x240.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು](https://www.udayavani.com/wp-content/uploads/2024/12/ashok-h-150x100.jpg)
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
![Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ](https://www.udayavani.com/wp-content/uploads/2024/12/ss-1-150x100.jpg)
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
![“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ](https://www.udayavani.com/wp-content/uploads/2024/12/k-3-150x103.jpg)
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
![Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ](https://www.udayavani.com/wp-content/uploads/2024/12/basava-150x92.jpg)
Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
![Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ](https://www.udayavani.com/wp-content/uploads/2024/12/gold-fake-150x84.jpg)
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
![Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ](https://www.udayavani.com/wp-content/uploads/2024/12/6-35-150x90.jpg)
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
![5](https://www.udayavani.com/wp-content/uploads/2024/12/5-36-150x90.jpg)
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
![Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ](https://www.udayavani.com/wp-content/uploads/2024/12/4-36-150x90.jpg)
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
![Krantiveer Brigade launched by worshipping the feet of 1008 saints: KS Eshwarappa](https://www.udayavani.com/wp-content/uploads/2024/12/kse-150x87.jpg)
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.