29.25 ಲಕ್ಷ ವೆಚ್ಚದಲ್ಲಿ ಮೂರು ಶಾಲೆ ಅಭಿವೃದ್ಧಿ

| ಎರಡು ಕನ್ನಡ-ಒಂದು ಮರಾಠಿ ಸರ್ಕಾರಿ ಶಾಲೆ ದತ್ತು ಪಡೆದ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್‌

Team Udayavani, Jan 6, 2021, 2:53 PM IST

29.25 ಲಕ್ಷ ವೆಚ್ಚದಲ್ಲಿ ಮೂರು ಶಾಲೆ ಅಭಿವೃದ್ಧಿ

ಖಾನಾಪುರ: ಶಿಕ್ಷಣದಲ್ಲಿ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ನಾವೇನುಕಮ್ಮಿ ಇಲ್ಲ ಎಂದು ತೋರಿಸುವುದಕ್ಕೆ ಸ್ಥಳೀಯಶಾಸಕಿ ಡಾ| ಅಂಜಲಿ ನಿಂಬಾಳಕರ ಕ್ಷೇತ್ರದಮೂರು ಶಾಲೆಗಳನ್ನು ದತ್ತು ಪಡೆದಿದ್ದಾರೆ.

ಈ ಮೂರು ಶಾಲೆಗಳಿಗೆ ಹೊಸ ರೂಪ ಬರಲಿದ್ದು, ಹಲವುಸೌಲಭ್ಯಗಳನ್ನು ಹೊಂದುವುದರ ಮೂಲಕಸುಸಜ್ಜಿತಗೊಳ್ಳಲಿವೆ. ಈ ಮೂರು ಹಿರಿಯಪ್ರಾಥಮಿಕ ಶಾಲೆಗಳಿಗೆ ಒಟ್ಟು 29.25 ಲಕ್ಷ ರೂ.ಕ್ರಿಯಾಯೋಜನೆ ಸಿದ್ಧವಾಗಿದೆ. ಕೆಪಿಎಸ್‌ಸಿ ಶಾಲೆ ಮುಗಳಿಹಾಳ 7.75 ಲಕ್ಷ, ಕಣಕುಂಬಿಹಿರಿಯ ಮರಾಠಿ ಪ್ರಾಥಮಿಕ ಶಾಲೆ 7 ಲಕ್ಷ,ಪ್ರಭುನಗರ ಶಾಲೆ 14.5 ಲಕ್ಷ ರೂ. ಅಂದಾಜುವೆಚ್ಚ ಸಿದ್ಧಪಡಿಸಿ ಅನುಮೋದನೆಗೆ ಸರ್ಕಾರಕ್ಕೆ ಕಳುಹಿಸಲಾಗಿದೆ. ಎರಡು ಕನ್ನಡ ಹಾಗೂಒಂದು ಮರಾಠಿ ಶಾಲೆಗಳನ್ನು ಶಾಸಕರು ಆಯ್ಕೆ ಮಾಡಿದ್ದು, ಈ ಶಾಲೆಗಳಿಗೆ ಹೊಸ ಸ್ಪರ್ಷ ದೊರೆಯಲಿದೆ.

ಕರ್ನಾಟಕ ಪಬ್ಲಿಕ್‌ ಶಾಲೆ, ಮುಗಳಿಹಾಳ :

ಒಂದರಿಂದ ಪಿಯುವರೆಗೆ ಕ್ಲಬ್‌ ಮಾಡಲಾಗಿದ್ದು, 821ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಶಾಲೆ ಅಭಿವೃದ್ಧಿಗೆ7.75 ಲಕ್ಷ ರೂ. ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಶೌಚಾಲಯ,ಶಿಕ್ಷಕರ ಕೊಠಡಿ, ಮೇಲ್ಛಾವಣಿ ರಿಪೇರಿ, ಕೊಠಡಿಗಳಿಗೆಹಾಸಲು, ಕುಡಿಯುವ ನೀರಿಗೆ ಓವರ್‌ಹೆಡ್‌ ಟ್ಯಾಂಕ್‌, ಸ್ಮಾರ್ಟ್ ಬೋರ್ಡ್‌, ಪ್ರಯೋಗಾಲಯ, ಹೂದೋಟ, ಮಕ್ಕಳಿಗೆಕ್ರೀಡಾ ಸೌಲಭ್ಯ ದೊರೆಯಬೇಕಿದೆ. ಇಲ್ಲಿನ ಶಿಕ್ಷಣ ಗುಣಮಟ್ಟದಲ್ಲಿದ್ದು, ಇನ್ನಷ್ಟು ಸೌಲಭ್ಯಗಳಿಂದ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಲು ಸಾಧ್ಯವಿದೆ.

ಕೆಪಿಎಸ್‌ಸಿ ಶಾಲೆಗೆ ಅಗತ್ಯ ಸೌಲಭ್ಯಗಳು ದೊರೆತಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರೆಯುತ್ತದೆ. ಮಕ್ಕಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಿದಲ್ಲಿ ಮಕ್ಕಳು ಇತ್ತ ಇನ್ನಷ್ಟು ಆಕರ್ಷಿತರಾಗುತ್ತಾರೆ.- ರಾಜಶೇಖರಯ್ನಾ ಹಿರೇಮಠ, ಮುಖ್ಯ ಶಿಕ್ಷಕ

ಹಿರಿಯ ಪ್ರಾಥಮಿಕ ಮರಾಠಿ ಶಾಲೆ,ಕಣಕುಂಬಿ :

ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕಣಕುಂಬಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯಲ್ಲಿ 190 ವಿದ್ಯಾರ್ಥಿಗಳುಇದ್ದಾರೆ. ಶಾಲೆಗೆ ಡೆಸ್ಕ್, ಹೊಸ ಕಂಪ್ಯೂಟರ್‌, ನೀರಿನಸೌಲಭ್ಯ ಆಗಬೇಕಿದೆ. ಶೌಚಾಲಯಗಳು ಹಳೆಯದಾಗಿದ್ದುಹೊಸ ಶೌಚಾಲಯ ನಿರ್ಮಿಸಬೇಕಿದೆ. ಇಲ್ಲಿ ಅಭಿವೃದ್ಧಿಗೆ 7 ಲಕ್ಷ ರೂ. ಪ್ರಸ್ತಾವನೆ ಸಿದ್ಧಪಡಿಸಲಾಗಿದೆ.

ಅಗತ್ಯ ಸೌಲಭ್ಯಗಳ ಪ್ರಸ್ತಾವನೆ ನೀಡಲಾಗಿದ್ದು,ಸೌಲಭ್ಯಗಳು ದೊರೆತಲ್ಲಿ ಶಾಲೆಯ ಅಭಿವೃದ್ಧಿಗೆಸಹಾಯವಾಗುತ್ತದೆ. ಮಕ್ಕಳಿಗೆ ಸೌಲಭ್ಯಗಳುಅತ್ಯಗತ್ಯವಾಗಿದ್ದು ಮಕ್ಕಳ ಭವಿಷ್ಯ ದೃಷ್ಟಿಯಿಂದ ಹೆಚ್ಚು ಅನುಕೂಲವಾಗಲಿದೆ.- ಶಾಂತಕುಮಾರ ಅವತಾಡೆ, ಮುಖ್ಯ ಶಿಕ್ಷಕ

ಪ್ರಭುನಗರ ಸರ್ಕಾರಿ ಶಾಲೆ :  ಖಾನಾಪುರದಿಂದ 10 ಕಿಮೀ ದೂರದಲ್ಲಿ ಬೆಳಗಾವಿಹೆದ್ದಾರಿಯಲ್ಲಿರುವ ಪ್ರಭುನಗರ ಸರ್ಕಾರಿ ಶಾಲೆ 222ವಿದ್ಯಾರ್ಥಿಗಳನ್ನು ಹೊಂದಿದೆ. ಎರಡು ಕೊಠಡಿಗಳಅಗತ್ಯವಿದೆ. ಶಾಲೆಯ ಮೇಲ್ಚಾವಣಿ ಹಾಳಾಗಿದ್ದು,ತರಗತಿಗಳಿಗೆ ಸುಣ್ಣ ಬಣ್ಣ ಅಗಲಿದೆ. ಕೊಠಡಿಗೆ ಸ್ಲ್ಯಾಬ್‌ನಿರ್ಮಾಣ, ಹೊಸ ಶೌಚಾಲಯ ನಿರ್ಮಾಣ, ಶಾಲೆ ಆವರಣದಲ್ಲಿ ತೋಟಗಾರಿಕೆ 14.5 ಯೋಜನೆಗೆ ಮುಂಜೂರಾತಿ ಪ್ರಸ್ತಾವನೆ ನೀಡಲಾಗಿದೆ.

ಶಾಲೆ ದತ್ತು ಪಡೆಯುವುದರಿಂದಮೂಲಸೌಲಭ್ಯಗಳ ಕೊರತೆ ನೀಗುತ್ತಿದೆ. ಮಕ್ಕಳಿಗೆಅಗತ್ಯ ಸೌಕರ್ಯಗಳು ದೊರೆಯುತ್ತಿರುವುದು ಶಾಲೆಅಭಿವೃದ್ಧಿಗೆ ಸಹಕಾರಿಯಾಗಲಿದೆ. –ಆರ್‌.ಬಿ. ಚೋಬಾರಿ, ಮುಖ್ಯ ಶಿಕ್ಷಕ

ಕ್ಷೇತ್ರದಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಅಗತ್ಯಸೌಲಭ್ಯಗಳನ್ನು ಮಕ್ಕಳಿಗೆನೀಡಲಾಗುತ್ತಿದೆ. ಮೂರು ಶಾಲೆಗಳನ್ನು ದತ್ತು ಪಡೆದಿದ್ದುಸೌಲಭ್ಯ ಕಲ್ಪಿಸುವುದರಮೂಲಕ ಮಕ್ಕಳ ಉತ್ತಮಭವಿಷ್ಯ ರೂಪಿಸಲಾಗುವುದು.  -ಅಂಜಲಿ ನಿಂಬಾಳಕರ, ಖಾನಾಪುರ ಶಾಸಕಿ

 

­ಜಗದೀಶ ಹೊಸಮನಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.