ಸಂತ್ರಸ್ತರ ಜೀವನ ನರಕ ಸದೃಶ


Team Udayavani, Oct 19, 2019, 1:57 PM IST

bg-tdy-2

ಗೋಕಾಕ: ನೆರೆ ಬಂದು ಎರಡು ತಿಂಗಳು ಕಳೆದರೂ ನೆರೆ ಪೀಡಿತರ ಸಂಕಷ್ಟಗಳು ಪರಿಹಾರವಾಗುವ ಯಾವ ಲಕ್ಷಣಗಳು ಕಂಡು ಬರುತ್ತಿಲ್ಲ. ನೆರೆ ಪೀಡಿತ ಪ್ರದೇಶದ ಜನರಿಗಾಗಿ ಇಲ್ಲಿಯ ಅರಣ್ಯ ಇಲಾಖೆಯ ಭೂಮಿಯಲ್ಲಿ ತಗಡಿನ ಶೆಡ್‌ಗಳನ್ನು ಬಿಟ್ಟರೆ ಬೇರೆ ಯಾವ ನಾಗರಿಕ ಸೌಲಭ್ಯಗಳು ಒದಗಿಸದೇ ಇರುವುದರಿಂದ ಅವರ ಜೀವನ ನರಕ ಸದೃಶವಾಗಿದೆ.

ನಗರದ ಕಡಬಗಟ್ಟಿ ರಸ್ತೆಯಲ್ಲಿ ತರಾತುರಿಯಲ್ಲಿ ಕೆಲ ತಗಡಿನ ಶೆಡ್‌ಗಳನ್ನು ಹಾಕಿ ಪರಿಹಾರ ಕೇಂದ್ರದಲ್ಲಿ ಇದ್ದ ನೆರೆ ಪೀಡಿತರಿಗೆ ಅಲ್ಲಿಗೆ ಹೋಗಿ ವಾಸಿಸಲು ತಿಳಿಸಿದಾಗ ಅಲ್ಲಿಗೆ ಹೋಗಿ ನೋಡಿದ ಜನರಿಗೆ ನಿರಾಶೆಯಾಗಿದೆ. ಕೇವಲ 12×15 ಅಳತೆಯ 60 ಶೆಡ್‌ಗಳನ್ನು ನಿರ್ಮಿಸಿದ್ದು ಅದರಲ್ಲಿ 78 ಕುಟುಂಬಗಳು ವಾಸವಾಗಿವೆ.

ನೆಲವನ್ನು ಗಟ್ಟಿಗೊಳಿಸದೇ(ಕಾಂಕ್ರೀಟ್‌) ಹಳೆಯ ತಗಡುಗಳನ್ನು ಹಾಕಿ ಶೆಡ್‌ ನಿರ್ಮಿಸಲಾಗಿದ್ದು ತಗಡುಗಳಿಗೆ ಅಲ್ಲಲ್ಲಿ ತೂತು ಬಿದ್ದಿವೆ. ಇದರಿಂದ ಮಳೆಯಾದಾಗ ಸೋರುತ್ತವೆ. ಸ್ನಾನಗೃಹಗಳಿಗೆ ಬಾಗಿಲುಗಳೇ ಇಲ್ಲ. ವಿದ್ಯುತ್‌ ಸೌಲಭ್ಯದ ಹೆಸರಿನಲ್ಲಿ ಒಂದೆರಡು ಬಲ್ಬ್ಗಳನ್ನು ಹಾಕಲಾಗಿದ್ದು ನಿರಾಶ್ರಿತರ ಮಕ್ಕಳಿಗೆ ರಾತ್ರೀ ವೇಳೆಯಲ್ಲಿ ಅಭ್ಯಾಸ ಮಾಡಲು ಆಗುತ್ತಿಲ್ಲ. ಇದಲ್ಲದೇ ಗುಡ್ಡಗಾಡು ಪ್ರದೇಶದಲ್ಲಿ ಈ ಶೆಡ್‌ ಗಳಿರುವುದರಿಂದ ರಾತ್ರಿ ಸಮಯದಲ್ಲಿ ಹುಳ-ಹುಪ್ಪಡಿಗಳು ಬರುವ ಶಂಕೆಯಿದ್ದು, ರಾತ್ರಿಯೆಲ್ಲ ಜಾಗರಣೆ ಮಾಡುವ ಪರಿಸ್ಥಿತಿ ಇದೆ. ಒಂದು ಗಂಟೆ ಕುಡಿಯುವ ನೀರು ಬಿಟ್ಟಂತೆ ಮಾಡಿ ಬಂದ್‌ ಮಾಡುವುದರಿಂದ ಸರಿಯಾಗಿ ಕುಡಿಯಲು ನೀರು ಸಿಗುತ್ತಿಲ್ಲ.

ನಗರಸಭೆಯಿಂದ ಒಂದು ಟ್ಯಾಂಕರ್‌ ನೀರು ನಿಲ್ಲಿಸಲಾಗುತ್ತಿದ್ದು ಅದರಲ್ಲಿಯ ನೀರು ಕುಡಿಯುವ ಸ್ಥಿತಿ ಇದ್ದು ಅದು ಕೂಡ 2 ದಿನಗಳಿಂದ ಖಾಲಿಯಾಗಿ ಹಾಗೇ ನಿಂತಿದೆ. ಬರ್ಹಿದೆಸೆಗೆ ಗುಡ್ಡಕ್ಕೆ ಹೋಗಬೇಕಾಗುತ್ತದೆ. ಶೆಡ್‌ಗಳ ಒಳಗೆ ನೆಲದಲ್ಲಿ ಮರಳು, ಮಣ್ಣು ಇರುವುದರಿಂದ ಊಟವನ್ನೂ ಮಾಡಲು ಆಗದ ಸ್ಥಿತಿ ಇದೆ. ಇದರಿಂದ ನಿರಾಶ್ರಿತರ ಪರಿಸ್ಥಿತಿ ಬೆಂಕಿಯಿಂದ ಬಾಣಲೆಗೆ ಹಾಕಿದಂತಾಗಿದೆ.ಈ ಶೆಡ್‌ಗಳನ್ನು ನಿರ್ಮಿಸಿದ ನಂತರ ಯಾವ ಅಧಿಕಾರಿಯೂ ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ನಿರಾಶ್ರಿತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ನೆರೆ ಪೀಡಿತರಿಗೆ ಶೆಡ್‌ಗಳನ್ನು ನಿರ್ಮಿಸಲಾಗಿದೆ ಎಂದು ತೋರಿಕೆಗೆ ಮಾತ್ರ ಇದನ್ನು ಮಾಡಲಾಗಿದ್ದು ಅವರಿಗೆ ಯಾವ ಮೂಲ ಸೌಲಭ್ಯ ಒದಗಿಸಲಾಗಿಲ್ಲ. ಬೆಳಗಾವಿ ನಂತರ ಅತ್ಯಂತ ದೊಡ್ಡ ನಗರವಾದ ಗೋಕಾಕ ನಗರದಲ್ಲಿಯೇ ನೆರೆ ಪೀಡಿತರ ಪರಿಸ್ಥಿತಿ ಹೀಗಾದರೆ ಗ್ರಾಮಾಂತರ ಪ್ರದೇಶದ ಪರಿಸ್ಥಿತಿ ಹೇಗಿರಬೇಕು ಎನ್ನುವುದು ಊಹಿಸಬಹುದು.

ನೆರೆ ಬಂದ ಹೋದ ಮೇಲೆ ಗೋಕಾಕ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಮಾನವೀಯತೆಯ ಆಧಾರ ಮೇಲೆ ಕುಂದು ಕೊರತೆಗಳನ್ನು ವಿಚಾರಿಸಬೇಕಾದ ಜಿಲ್ಲಾಧಿಕಾರಿಗಳು ಇತ್ತ ಗಮನ ಹರಿಸಿಲ್ಲ, ಗೋಕಾಕದಲ್ಲಿಯ ಶೆಡ್‌ಗಳಿಗೆ ಸ್ವತಃ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಸೌಲಭ್ಯ ಒದಗಿಸಬೇಕೆನ್ನುವುದು ನಿರಾಶ್ರಿತರ ಬೇಡಿಕೆಯಾಗಿದೆ.

 

ನಿರಾಶ್ರಿತರ ವಾಸಕ್ಕೆ ತಾತ್ಕಾಲಿಕವಾಗಿ 60 ಶೆಡ್‌ಗಳನ್ನು ನಿರ್ಮಿಸಿಕೊಡಲಾಗಿದೆ. ಅಲ್ಲಿ ಹೆಚ್ಚಿನವರು ಬಾಡಿಗೆದಾರರು ಇದ್ದಾರೆ. ಅವರಿಗೆ ಎಲ್ಲ ರೀತಿಯ ಮೂಲ ಸೌಲಭ್ಯ ಒದಗಿಸಲಾಗಿದೆ. ಶೆಡ್‌ಗಳಲ್ಲಿ ವಾಸವಾಗಿದ್ದರು ಕುಂದು ಕೊರತೆಗಳನ್ನು ವಿಚಾರಿಸಲು ನಮ್ಮ ಇಲಾಖೆಯಿಂದ ಸಿಬ್ಬಂದಿಗಳನ್ನು ನೇಮಿಸಲಾಗಿದ್ದು ಅವರಿಗೆ ಯಾವುದೇ ಅನಾನುಕೂಲವಾಗದಂತೆ ಕ್ರಮ ಕೈಗೊಳ್ಳಲಾಗಿದೆ.ಪ್ರಕಾಶ ಹೊಳೆಪ್ಪಗೋಳ, ತಹಶೀಲದಾರರು, ಗೋಕಾಕ

 ನಮಗೆ ತುರಾತುರಿಯಲ್ಲಿ ಹಳೆಯ ತಗಡುಗಳನ್ನು ಹಾಕಿ ಶೆಡ್‌ಗಳನ್ನು ನಿರ್ಮಿಸಿಕೊಡಲಾಗಿದ್ದು ನೆಲವನ್ನು ಕಾಂಕ್ರೀಟ್‌ ಹಾಕದೇ ಕೊಟ್ಟಿದ್ದಾರೆ. ನಾವು ಮಣ್ಣಿನಲ್ಲಿಯೇ ಊಟ ಮಾಡಬೇಕಾದ ಅನಿವಾರ್ಯಯತೆ ಇದೆ. ಗುಡ್ಡದ ಪ್ರದೇಶವಾದ್ದರಿಂದ ರಾತ್ರೀ ವೇಳೆಯಲ್ಲಿ ರಕ್ಷಣೆಯ ಅವಶ್ಯಕತೆ ಇದೆ. ರಮೇಶ, ನಿರಾಶ್ರಿತ.

 

-ಮಲ್ಲಪ್ಪ ದಾಸಪ್ಪಗೋಳ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.