2025ಕ್ಕೆ  ಕ್ಷಯ ಮುಕ್ತ ಭಾರತದ ಗುರಿ

ಕ್ಷಯ ನಿರ್ಮೂಲನೆಯಲ್ಲಿ ಜಿಲ್ಲೆಗೆ ಕೇಂದ್ರ ಸರ್ಕಾರದ ಬೆಳ್ಳಿ ಪದಕ

Team Udayavani, Mar 25, 2022, 2:18 PM IST

11

ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಬೆಳಗಾವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ವಿಭಾಗ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆ ಆಶ್ರಯದಲ್ಲಿ ನಗರದ ಜೆಎನ್‌ಎಂಸಿ ಆವರಣದ ಪ್ರೊ. ಡಾ. ಬಿ.ಎಸ್‌. ಕೊಡಕಿಣಿ ಸಭಾಭವನದಲ್ಲಿ ಜಿಲ್ಲಾ ಮಟ್ಟದ ವಿಶ್ವ ಕ್ಷಯರೋಗ ದಿನ ಗುರುವಾರ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ, ಕ್ಷಯರೋಗ ನಿರ್ಮೂಲನೆಯಡಿಯಲ್ಲಿ ಸರ್ಕಾರವು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅವುಗಳನ್ನು ಸಮಾಜದ ಕೊನೆಯ ವ್ಯಕ್ತಿಗಳಿಗೆ ಮುಟ್ಟಿಸಿ 2025ನೇ ವೇಳೆಗೆ ಕ್ಷಯ ಮುಕ್ತ ಭಾರತವನ್ನು ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯನ್ನು ಮುಟ್ಟಲು ಎಲ್ಲರೂ ಕೂಡಿ ಕಾರ್ಯನಿರ್ವಹಿಸುವಂತೆ ಹಾಗೂ ಭಾರತದೇಶದಿಂದ ಕ್ಷಯರೋಗವನ್ನು ಓಡಿಸಲು ಕರೆ ನೀಡಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ದೇಶಾದ್ಯಾಂತ ಕೇಂದ್ರ ಸರ್ಕಾರದಿಂದ ಕೈಗೊಂಡ ಸಮೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಯು ಕ್ಷಯರೋಗ ನಿಯಂತ್ರಣದಲ್ಲಿ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪ್ರಯುಕ್ತ ಗಣನೀಯ ಪ್ರಮಾಣದಲ್ಲಿ ಕ್ಷಯರೋಗಿಗಳ ಸಂಖ್ಯೆ ಇಳಿಮುಖವಾಗಿದೆ.

ಕೇಂದ್ರ ಸರ್ಕಾರದಿಂದ ಬೆಳ್ಳಿ ಪದಕವನ್ನು ನೀಡಿ ಗೌರವಸುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಮುಂದಿನ ವರ್ಷ ಜಿಲ್ಲೆಯು ಕ್ಷಯರೋಗ ನಿರ್ಮೂಲನೆಯಡಿ ಸ್ವರ್ಣ ಪದಕವನ್ನು ಪಡೆಯಬೇಕೆಂದು ತಿಳಿಸಿದರು.

ಕಾರ್ಯಕ್ರಮವನ್ನು ತಾಲೂಕಾ ಆರೋಗ್ಯಾಧಿಕಾರಿ ಡಾ. ಎಸ್‌.ಸಿ. ಮಾಸ್ತಿಹೊಳಿ ಸ್ವಾಗತಿಸಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಬಿ.ಎನ್‌ ತುಕ್ಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್‌.ವಿ. ಮುನ್ಯಾಳ ಮಾತನಾಡಿ, ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಜಿಲ್ಲೆಯ ಸಂಘ ಸಂಸ್ಥೆಗಳ ಸೇವೆ ಹಾಗೂ ಜಿಲ್ಲಾ ಆಡಳಿತದ ಮಾರ್ಗದರ್ಶನ, ಚುನಾಯಿತ ಪ್ರತಿನಿಧಿಗಳ ಬೆಂಬಲದಿಂದ ಜಿಲ್ಲೆಯಲ್ಲಿ ಕ್ಷಯರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಹೆಮ್ಮೆಯ ಸಂಗತಿ. ಇವತ್ತಿನ ದಿನ ನವದೆಹಲಿ ವಿಜ್ಞಾನ ಭವನದಲ್ಲಿ ಕೇಂದ್ರ ಸರ್ಕಾರದಿಂದ ಬೆಳಗಾವಿ ಜಿಲ್ಲೆಗೆ ಬೆಳ್ಳಿ ಪದಕ ನೀಡಿ ಗೌರವಿಸಿದ್ದು, ತಮ್ಮೆಲ್ಲರ ಪರಿಶ್ರಮವೇ ಕಾರಣವೆಂದು ತಿಳಿಸಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸುಧಾಕರ ಆರ್‌.ಸಿ,, ಡಾ. ಮೋಗಾಶಿರ, ಸ್ವಪ್ನಿಲ್‌ ಕಾಂಬಳೆ, ಜಿಲ್ಲೆಯ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳು ಮತ್ತು ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತರು, ಎನ್‌.ಜಿ.ಓ.ಗಳು ಇದ್ದರು.

ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ಉತ್ತಮ ಪ್ರಗತಿ ತೋರಿದ ಆಧಿಕಾರಿಗಳು, ಆಶಾ ಕಾರ್ಯಕರ್ತೆ, ಆರೋಗ್ಯ ಸಿಬ್ಬಂದಿ, ಖಾಸಗಿ ವೈದ್ಯರು ಮತ್ತು ಖಾಸಗಿ ಆಸ್ಪತ್ರೆಗಳನ್ನು ಸನ್ಮಾನಿಸಲಾಯಿತು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಪಿ. ಯಲಿಗಾರ 2025 ನೇ ಸಾಲಿಗೆ ಕ್ಷಯಮುಕ್ತ ಭಾರತ ದೇಶವನ್ನಾಗಿ ಮಾಡುವ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾಜಿ ಮಳೆಗನ್ನವರ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

1-wqeqwewqe

Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ‌ ದಿಢೀರ್ ರಾಜೀನಾಮೆ

arrested

Marriage ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.