Belgavi: ದೇವಸ್ಥಾನದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆಯರಿಬ್ಬರ ದಾರುಣ ಸಾವು
ದೇವಸ್ಥಾನ ಸ್ವಚ್ಛಗೊಳಿಸುತ್ತಿದ್ದ ವೇಳೆ ದುರಂತ
Team Udayavani, Aug 5, 2024, 9:19 PM IST
ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನದಲ್ಲಿ ವಿದ್ಯುತ್ ತಗುಲಿ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.
ಸುಳೇಭಾವಿ ಗ್ರಾಮದ ಸವಿತಾ ಫಕೀರಪ್ಪ ಒಂಟಿ(34) ಹಾಗೂ ಕಲಾವತಿ ಮಾರುತಿ ಬಿದರವಾಡಿ(41) ಎಂಬ ಮಹಿಳೆಯರು ಮೃತಪಟ್ಟಿದ್ದಾರೆ.
ದೇವಸ್ಥಾನದಲ್ಲಿ ಮಹಿಳಾ ಸಂಘದ ವಾರದ ಸಭೆ ನಡೆಸಿದ ಬಳಿಕ ದೇವಸ್ಥಾನವನ್ನು ಎಲ್ಲ ಮಹಿಳೆಯರು ಸ್ವಚ್ಛಗೊಳಿಸಿದ್ದರು. ದೇವಸ್ಥಾನವನ್ನು ನೀರಿನಿಂದ ತೊಳೆದು ಸ್ವಚ್ಛಗೊಳಿಸಿದ್ದರು. ಸ್ವಚ್ಛ ಮಾಡಿದ ನೀರಿನಲ್ಲಿ ವಿದ್ಯುತ್ ತಂತಿ ಕಟ್ ಆಗಿ ಕೆಳಕ್ಕೆ ಬಿದ್ದಿತ್ತು. ಎಲ್ಲ ಕೆಲಸ ಮುಗಿಸಿ ಹೊರಗೆ ಬರುವಾಗ ಕಬ್ಬಿಣದ ಗೇಟ್ ಹಾಕುವಾಗ ಓರ್ವ ಮಹಿಳೆಗೆ ವಿದ್ಯುತ್ ಸ್ಪರ್ಶವಾಗಿದೆ. ಕೂಡಲೇ ಈಕೆಯನ್ನು ರಕ್ಷಿಸಲು ಹೋದ ಮತ್ತೊಬ್ಬ ಮಹಿಳೆಗೂ ವಿದ್ಯುತ್ ತಗುಲಿದೆ.
ವಿದ್ಯುತ್ ಸ್ಪರ್ಶಗೊಂಡು ಸವಿತಾ ಒಚಿಟಿ ಎಂಬ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನೋರ್ವ ಮಹಿಳೆ ಕಲಾವತಿ ವಿದರವಾಡಿಯನ್ನು ಕೂಡಲೇ ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಾರಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶ್ರಾವಣ ಸೋಮವಾರದಂದು ಇಡೀ ಗ್ರಾಮದಲ್ಲಿ ವಾರ ಬಿಡುವ ಸಂಪ್ರದಾಯ ನಡೆದುಕೊಂಡು ಬಂದಿದೆ. ಶ್ರಾವಣ ಮಾಸದ ಮೊದಲ ದಿನವೇ ಈ ಅವಘಡ ಸಂಭವಿಸಿದ್ದರಿಂದ ಗ್ರಾಮದಲ್ಲಿ ದುಃಖದ ಮಡವಿನಲ್ಲಿ ಮುಳುಗಿದೆ. ತಾಯಿಯನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದು, ಮಕ್ಕಳ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.