3 ತಿಂಗಳು ಉಜ್ವಲ ಉಚಿತ ಸಿಲಿಂಡರ್
Team Udayavani, Apr 25, 2020, 2:31 PM IST
ಬೆಳಗಾವಿ: ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಡಿ ಏಪ್ರಿಲ್, ಮೇ ಹಾಗೂ ಜೂನ್ ತಿಂಗಳವರೆಗೆ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 2.27 ಲಕ್ಷ ಉಜ್ವಲ ಯೋಜನೆ ಫಲಾನುಭವಿಗಳು ಇದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಜನರು ಸಂಕಷ್ಟ ಪಡಬಾರದು ಎಂಬ ಉದ್ದೇಶದಿಂದ ಉಚಿತ ಸಿಲಿಂಡರ್ ವಿತರಿಸಲು ನಿರ್ಣಯಿಸಿದೆ. ಫಲಾನುಭವಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಮಹಾಮಾರಿ ಕೋವಿಡ್ 19 ಭೀತಿ ಮಧ್ಯೆಯೂ ಮನೆ ಮನೆಗೆ ಸಿಲಿಂಡರ್ ಪೂರೈಸುತ್ತಿರುವ ಕಾರ್ಮಿಕರಿಗೆ ಸಂಕಷ್ಟ ಸ್ಥಿತಿಯಲ್ಲಿ 5ಲಕ್ಷ ರೂ. ನೆರವು ನೀಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಸಿಲಿಂಡರ್ ಪೂರೈಸುವ ಕಾರ್ಮಿಕರಿಗೆ ನೆರವಾಗಲು ಈ ಯೋಜನೆ ಇದೆ. ಕೋವಿಡ್ 19 ವಾರಿಯರ್ಸ್ ಆಗಿ ದುಡಿಯುತ್ತಿರುವ ಇಂಥವರ ನೆರವಿಗೆ ನಿಂತು ಕೆಲಸ ಮಾಡಬೇಕಾಗಿರುವುದು ಸರ್ಕಾರದ ಕರ್ತವ್ಯ. ಹೀಗಾಗಿ ಇಂಥ ಯೋಜನೆ ರೂಪಿಸಿದೆ ಎಂದರು.
ಹೆಸ್ಕಾಂ ಸಿಬ್ಬಂದಿ ಹಗಲಿರುಳು ಎನ್ನದೇ ಕೋವಿಡ್ 19 ಭೀತಿ ಮಧ್ಯೆಯೂ ಕೆಲಸ ಮಾಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಬೆಳಗಾವಿ ತಾಲೂಕಿನ ಕಿಣಯೇ ಗ್ರಾಮಕ್ಕೆ ಭೇಟಿ ನೀಡಿದಾಗ ಅಲ್ಲಿನ ಹೆಸ್ಕಾಂ ಸಿಬ್ಬಂದಿ ಸಾಮಾಜಿಕ ಅಂತರ ಕಾಯ್ದುಕೊಂಡು ಟ್ರಾನ್ಸ್ಫಾರ್ಮರ್ ಜೋಡಿಸುವ ಕೆಲಸದಲ್ಲಿ ನಿರತರಾಗಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಲಾಕ್ಡೌನ್ ಅವ ಧಿಯಲ್ಲಿಯೂ ಹೆಸ್ಕಾಂ ಸಿಬ್ಬಂದಿ ಸೇವೆ ನಿಜಕ್ಕೂ ಶ್ಲಾಘನೀಯ ಎಂದರು.
ಕೋವಿಡ್ 19 ಲಾಕ್ಡೌನ್ ವೇಳೆ ದೇಶಾದ್ಯಂತ ಅಗತ್ಯ ಇರುವ ಇಲಾಖೆಗಳ ಸಿಬ್ಬಂದಿ ಪರಸ್ಪರ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸುವುದರ ಜತೆಗೆ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ
Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ
Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ
Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು
Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.