ಸಿಗದ ವೇತನ; ಪ್ರತಿಭಟನೆ
ನಮ್ಮ ಸಂಸಾರ ಬೀದಿಗೆ ಬಂದಿದ್ದು ಗ್ರಾಮದಲ್ಲಿ ಸಾಲ ಸೋಲ ಮಾಡಿ ಬದುಕುತ್ತಿದ್ದೇವೆ.
Team Udayavani, Apr 29, 2022, 6:23 PM IST
ಕಾಗವಾಡ: ಕಾಗವಾಡ ಪಟ್ಟಣ ಪಂಚಾಯಿತಿಯ ದಿನಗೂಲಿ ಕಾರ್ಮಿಕರಿಗೆ ಕಳೆದ 16 ತಿಂಗಳಿಂದ ವೇತನ ನೀಡಿಲ್ಲ ಎಂದು ನೌಕರರು ಕಚೇರಿ ಎದುರು ಉಪವಾಸ ಸತ್ಯಾಗ್ರಹ ಕೈಗೊಂಡು ಪ್ರತಿಭಟಿಸಿದರು. ತಹಶೀಲ್ದಾರ್ ರಾಜೇಶ್ ಬುರ್ಲಿ ಅವರು ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸದ್ಯ 3 ತಿಂಗಳ ಸಂಬಳ ನೀಡುವ ಭರವಸೆ ನೀಡಿ ಪ್ರತಿಭಟನಾ ನಿರತ ಕಾರ್ಮಿಕರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಮಾಡುವಲ್ಲಿ ಸಫಲರಾದರು.
ಕಾಗವಾಡ ಪಟ್ಟಣ ಪಂಚಾಯಿತಿ ಕಚೇರಿ ಎದುರು ಗುರುವಾರ ಬೆಳಗ್ಗೆ ಗಟರ್ ಮನ್, ವಾಟರ್ಮನ್, ಸ್ವಚ್ಛತಾಗಾರ, ಪಂಪ್ ಆಪರೇಟರ್, ಡಾಟಾಎಂಟ್ರಿ
ಆಪರೇಟರ್ ಮೊದಲಾದ 11 ದಿನಗೂಲಿ ನೌಕರರು ಹಾಗೂ 8 ಜನ ಪೂರ್ಣಾವಧಿ ಕಾರ್ಮಿಕರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು. ಕಳೆದ 16 ತಿಂಗಳುಗಳಿಂದ ನಮಗೆ ವೇತನ ನೀಡಿಲ್ಲ. ನಮ್ಮ ಸಂಸಾರ ಬೀದಿಗೆ ಬಂದಿದ್ದು ಗ್ರಾಮದಲ್ಲಿ ಸಾಲ ಸೋಲ ಮಾಡಿ ಬದುಕುತ್ತಿದ್ದೇವೆ. ಇಷ್ಟೇ ಅಲ್ಲದೆ ನಾವು ದಿನನಿತ್ಯ ಸೇವೆ ನೀಡಿದರೂ ಪಂಚಾಯತಿಯಲ್ಲಿ ಕಾರ್ಮಿಕರೆಂದು ನಮ್ಮನ್ನು ಗುರುತಿಸಿಲ್ಲ. ಇದು ಅನ್ಯಾಯ ಎಂದು ತಹಶೀಲ್ದಾರ್ ರಾಜೇಶ್ ಬುರ್ಲಿ
ಎದುರು ತಮ್ಮ ಅಳಲು ತೋಡಿಕೊಂಡರು.
ಕಾಗವಾಡ ಪಿಕೆಪಿಎಸ್ ಅಧ್ಯಕ್ಷ ಜ್ಯೋತಿಕುಮಾರ್ ಪಾಟೀಲ್, ಗ್ರಾಪಂ ಮಾಜಿ ಸದಸ್ಯ ರಮೇಶ್ ಚೌಗುಲೆ, ಪವನ ಪಾಟೀಲ್, ಕಾಕಾಸಾಹೇಬ್ ಪಾಟೀಲ್, ರಾಜು ಕುಸನಾಳ, ಪಿಎಸ್ಐ ರಬಕವಿ ಕಾರ್ಮಿಕರೊಂದಿಗೆ ಚರ್ಚಿಸಿ ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಮನವೊಲಿಸಲು ಯತ್ನಿಸಿದರು.
ಕಾರ್ಮಿಕರಿಗೆ ನ್ಯಾಯ ಒದಗಿಸಲು ದಲಿತ ಮುಖಂಡ ಅಶೋಕ್ ಕಾಂಬಳೆ, ಆಕಾಶ ಧೊಂಡಾರೆ, ದಿಲೀಪ್ ಕಾಂಬಳೆ, ಮಧುಕರ್ ಕಾಂಬಳೆ, ಶಂಕರ್ ಕಾಂಬಳೆ,
ಶಕುಂತಲಾ ದೇವರೆ, ಶೋಭಾ ಘೊರ್ಡೆ, ಜಯಪಾಲ ಬಡಿಗೇರ್, ವಿದ್ಯಾಬಾಯಿ ಘೊರ್ಡೆ ಮೊದಲಾದವರು ಸತ್ಯಾಗ್ರಹದಲ್ಲಿ ಪಾಲ್ಗೊಂಡು ಬೆಂಬಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್
Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ
ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!
Belagavi: ಸಾಲಗಾರರ ಕಿರುಕುಳದಿಂದ ಬೇಸತ್ತು ನೇಕಾರ ಆತ್ಮ*ಹತ್ಯೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?
Hangyo Ice Cream: ಬಿಗ್ಬಾಸ್ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್ಕ್ರೀಂ!
Mangaluru: ಸೆನ್ ಪೊಲೀಸ್ ಠಾಣೆಗಳು ಮೇಲ್ದರ್ಜೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.