ಸೂರು ಕಟ್ಟಲು ಧಾವಂತ

ಉಸುಕು ಸಂಗ್ರಹಕ್ಕೆ ನದಿ ತೀರಕ್ಕೆ ಲಗ್ಗೆ ಬಿದ್ದ ಮನೆ ದುರಸ್ತಿಗೆ ಮುಂದಾದ ನಿರಾಶ್ರಿತರು

Team Udayavani, Aug 28, 2019, 10:40 AM IST

bg-tdy-1

ಬೆಳಗಾವಿ: ಮಲಪ್ರಭಾ ಜಲಾಶಯದ ಈ ಬಾರಿಯ ದಾಖಲೆ ನೀರು ಸಂಗ್ರಹ ಹಾಗೂ ಬಿಡುಗಡೆ ರಾಮದುರ್ಗ ಹಾಗೂ ಸವದತ್ತಿ ತಾಲೂಕುಗಳ ನದಿ ತೀರದ ಗ್ರಾಮಗಳಲ್ಲಿ ತಲ್ಲಣವನ್ನೇ ಸೃಷ್ಟಿಮಾಡಿತ್ತು. ಒಂದು ವಾರದ ಕಾಲ ನಿರೀಕ್ಷೆ ಮೀರಿ ಆತಂಕ ಉಂಟುಮಾಡಿದ್ದ ಜಲಾಶಯದ ಅಬ್ಬರ ಈಗ ಸಂಪೂರ್ಣ ಕಡಿಮೆಯಾಗಿದೆ. ನದಿಯ ಪ್ರವಾಹ ಸಹ ಗುರುತು ಸಿಗದಷ್ಟು ಇಳಿದಿದೆ. ಆದರೆ ನೆರೆಯಿಂದ ಉಂಟಾದ ಆತಂಕ ಹಾಗೂ ಹಾನಿಯಿಂದ ಸಾರ್ವಜನಿಕರು ಇನ್ನೂವರೆಗೆ ಚೇತರಿಸಿಕೊಂಡಿಲ್ಲ.

ಭೀಕರ ಪ್ರ ವಾಹದಿಂದ ಎಲ್ಲವನ್ನೂ ಕಳೆದುಕೊಂಡಿರುವ ನದಿ ತೀರದ ಜನರು ಹೊಸ ಬದುಕು ಕಟ್ಟಿಕೊಳ್ಳಲೇಬೇಕಾದ

ಅನಿವಾರ್ಯತೆಯಲ್ಲಿದ್ದಾರೆ. ಸರಕಾರದ ಪರಿಹಾರದ ಭರವಸೆ ಸ್ವಲ್ಪ ಧೈರ್ಯ ಮೂಡಿಸಿದೆಯಾದರೂ ಅದು ಯಾವಾಗ ಬರುತ್ತದೆ ಎಂಬ ವಿಶ್ವಾಸ ಇಲ್ಲ. ಇದೇ ಕಾರಣಕ್ಕೆ ಪ್ರವಾಹ ಸಂತ್ರಸ್ತರು ತಾವೇ ಸ್ವತಃ ಸಾಧ್ಯವಾದಷ್ಟು ಪರಿಹಾರ ಕ್ರಮಕ್ಕೆ ಮುಂದಾಗಿದ್ದಾರೆ.

ಇದಕ್ಕೆ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ಜನರೂ ಒಂದು ನಿದರ್ಶನ. ಪ್ರಮುಖ ವ್ಯಾಪಾರಿ ಕೇಂದ್ರವಾದ ಮುನವಳ್ಳಿಗೆ ತಾಗಿಕೊಂಡೇ ಇರುವ ಸಣ್ಣ ಹಾಗೂ ಹಳೆಯ ಸೇತುವೆ ಬಳಿ ಸಂಪೂರ್ಣ ನೀರು ಕಡಿಮೆಯಾಗಿರುವ ಮಲಪ್ರಭಾ ನದಿಯಲ್ಲಿ ಜನರ ದಂಡೇ ಕಂಡುಬಂದಿದೆ. ಮಹಿಳೆ, ಮಕ್ಕಳು ಹಾಗೂ ವಯಸ್ಸಾದವರು ಪೈಪೋಟಿ ಮೇಲೆ ಹುಡುಕಾಟದಲ್ಲಿ ತೊಡಗಿದ್ದಾರೆ. ಆಲ್ಲಿ ದಾಟಿ ಹೊರಟ ಜನರಿಗೆ ಇಲ್ಲಿ ಏನು ನಡೆಯುತ್ತಿದೆ ಎಂಬ ಕುತೂಹಲ. ಪ್ರವಾಹದಿಂದ ಹರಿದು ಬಂದ ತಂತಮ್ಮ ಮನೆಯ ಸಾಮಗ್ರಿಗಳನ್ನು ಹುಡುಕುತ್ತಿರಬಹುದೆನ್ನುವುದೇ ಎಂಬುದೇ ಎಲ್ಲರ ಊಹೆ. ಆದರೆ ವಾಸ್ತವವೇ ಬೇರೆ. ನದಿ ಪ್ರವಾಹದಲ್ಲಿ ತಮ್ಮ ಮನೆಗಳನ್ನು ಕಳೆದುಕೊಂಡಿದ್ದ ಸಂತ್ರಸ್ತರು ಬೆಳ್ಳಂ ಬೆಳಗ್ಗೆ ನದಿಯಲ್ಲಿ ಉಸುಕು ಸಂಗ್ರಹಿಸಲು ಮುಗಿಬಿದ್ದಿದ್ದರು. ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರೂ ಸಣ್ಣ ಸಣ್ಣ ಚೀಲ, ಪಾತ್ರೆಗಳಲ್ಲಿ ಉಸುಕು ತುಂಬಿಕೊಂಡು ಹೊರಟಿದ್ದು ಪ್ರವಾಹದ ಕರಾಳ ಮುಖದ ಪರಿಚಯ ಮಾಡಿತು.

ನದಿಯ ಮಧ್ಯ ಭಾಗದಲ್ಲಿ ರಾಶಿರಾಶಿಯಾಗಿ ಬಿದ್ದಿದ್ದ ತ್ಯಾಜ್ಯವಸ್ತುಗಳನ್ನು ತುಳಿದುಕೊಂಡು ಕಲ್ಲು ಬಂಡೆಗಳನ್ನು ದಾಟಿ ತಲೆ ಮೇಲೆ ಉಸುಕಿನ ಚೀಲಗಳನ್ನು ಹೊತ್ತುಕೊಂಡಿದ್ದ ಮುನವಳ್ಳಿಯ ಜನರು ಸಾಲು ಸಾಲಾಗಿ ಬರುತ್ತಿರುವ ದೃಶ್ಯ ಪ್ರವಾಹ ಸಂಕಷ್ಟದ ಹೊಸ ಮುಖವನ್ನು ತೆರೆದಿಟ್ಟಿತು.

ಏನು ಮಾಡುವುದು ಸ್ವಾಮಿ. ನಾವು ಎಂದೂ ನೋಡಿರದೇ ಇದ್ದ ಮಲಪ್ರಭಾ ನದಿಯ ಪ್ರವಾಹ ನಮ್ಮದೆಲ್ಲವನ್ನೂ ಕಸಿದುಕೊಂಡಿದೆ. ಮನೆಗಳು ಬಿದ್ದು ಬೀದಿಗೆ ಬಿದ್ದಿದ್ದೇವೆ. ತಕ್ಷಣ ಮನೆ ಕಟ್ಟಿಕೊಳ್ಳಬೇಕು ಎಂದರೆ ಉಸುಕು ಸಿಗುವುದಿಲ್ಲ. ಸಿಕ್ಕರೂ ಅದನ್ನು ಖರೀದಿ ಮಾಡುವ ಶಕ್ತಿ ನಮಗೆ ಇಲ್ಲ. ಹೀಗಾಗಿ ಅನಿವಾರ್ಯವಾಗಿ ನಾವು ನದಿಯಲ್ಲಿ ಸಿಕ್ಕಷ್ಟು ಉಸುಕು ತೆಗೆದುಕೊಂಡು ಹೊರಟಿದ್ದೇವೆ. ಇದರಿಂದ ಎಷ್ಟು ಕೆಲಸ ಆಗುತ್ತದೆಯೋ ಅಗಲಿ ಎಂದು ನೋವಿನಿಂದಲೇ ಹೇಳುತ್ತಾರೆ ಸಲೀಮ ಸಯ್ಯದ್‌.

ಪ್ರವಾಹದಿಂದ ನಮ್ಮ ಮನೆ ಭಾಗಶಃ ಬಿದ್ದಿದೆ. ಮಳೆ ಹಾಗೂ ನದಿ ಪ್ರವಾಹದಿಂದ ಹಿಂದೆಂದೂ ಈ ರೀತಿ ಹಾನಿ ಆಗಿರಲೇ ಇಲ್ಲ. ನದಿಗೆ ನೀರು ಬಂದರೂ ಅಂತಹ ಅಪಾಯ ಉಂಟಾಗಿರಲಿಲ್ಲ. ಈಗ ಮನೆ ಬಿದ್ದಿದೆ. ಮತ್ತೆ ಕಟ್ಟಿಕೊಳ್ಳಲು ಸ್ವಲ್ಪ ಉಸುಕು ಬೇಕು ಮಾರ್ಕೆಟ್‌ನಲ್ಲಿ ಉಸುಕು ಸಿಗುವುದು ದುಸ್ತರ. ಅದಕ್ಕೆ ನೂರೆಂಟು ಕಾಟ. ಮೇಲಾಗಿ ಬಹಳ ದುಬಾರಿ. ಈಗ ನದಿಯಲ್ಲಿ ಸ್ವಲ್ಪ ಹೊಸ ಉಸುಕು ಬಂದಿರುತ್ತದೆ. ಅದನ್ನೇ ಸಿಕ್ಕಷ್ಟು ತೆಗೆದುಕೊಂಡಿದ್ದೇವೆ. ಬಡವರಿಗೆ ಈಗ ನದಿಯಲ್ಲಿ ಸಿಕ್ಕ ಅಲ್ಪಸ್ವಲ್ಪ ಉಸುಕೇ ಆಧಾರ ಎಂಬುದು ಮುನವಳ್ಳಿಯ ಜೀತು ಹುದ್ದಾರ ಹೇಳಿಕೆ.

 

•ಕೇಶವ ಆದಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.