ಸರಕಾರದ ಯೋಜನೆಗಳು ಸರ್ವರಿಗೂ ತಲುಪಬೇಕು: ಶಾಸಕ ಮಹಾದೇವಪ್ಪ ಯಾದವಾಡ


Team Udayavani, Apr 16, 2022, 7:52 PM IST

Untitled-1

ರಾಮದುರ್ಗ: ದಲ್ಲಾಳಿಗಳ ಹಾವಳಿಯನ್ನು ತಪ್ಪಿಸಿ ಸರಕಾರದ ಯೋಜನೆಗಳು ಸರ್ವರಿಗೂ ತಲುಪಿಸುವ ಉದ್ದೇಶದಿಂದ ಗ್ರಾಮ ವಾಸ್ತವ್ಯದ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಸ್ಥಳದಲ್ಲಿಯೇ ಪರಿಹರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಜರುಗಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಜನತೆಯ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಅವುಗಳನ್ನು ನೇರವಾಗಿ ಜನರಿಗೆ ತಲುಪುವಂತೆ ಮಾಡುತ್ತಿವೆ ಎಂದು ಹೇಳಿದರು.

ಗ್ರಾಮೀಣ ಜನತೆಗೆ ಕುಡಿಯುವ ನೀರು ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಜಲಜೀವನ್ ಮಿಷನ್ ಯೋಜನೆ ಮೂಲಕ ಮನೆ ಮನೆಗೆ ನಳಗಳ ಜೋಡನೆ ಮಾಡುವ ಮೂಲಕ 150 ಕೋಟಿ ಅನುದಾನದಲ್ಲಿ 137 ಹಳ್ಳಿಗಳಿಗೆ ಕಾಮಗಾರಿ ಕೈಗೊಳ್ಳಲಾಗಿದೆ. ಅಲ್ಲದೇ 340 ಕೋಟಿ ಅನುದಾನದಲ್ಲಿ ಮುನವಳ್ಳಿ ಡ್ಯಾಂನಿಂದ ಪ್ರತ್ಯೇಕ ಕುಡಿಯುವ ನೀರು ತರಲು ಯೋಜನೆಗೆ ಸರಕಾರ ಅನುಮೋದನೆ ನೀಡಿದ್ದು, ಸದ್ಯದಲ್ಲಿಯೇ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ| ಎಂ.ಜಿ . ಹಿರೇಮಠ ಮಾತನಾಡಿ, ಕಂದಾಯ ಸಚಿವರ ಆಶಯದಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯದ ಮೂಲಕ ಜನರ ಕಷ್ಟಗಳನ್ನು ಆಲಿಸಿ ಅಲ್ಲಿಯೇ ಪರಿಹಾರ ಕಲ್ಪಿಸುವ ಮಹತ್ವದ ಉದ್ದೇಶಕ್ಕಾಗಿ ಈ ಕಾರ್ಯವನ್ನು ಮಾಡಲಾಗುತ್ತಿದೆ. ಗ್ರಾಮ ವಾಸ್ತವ್ಯದ ಮೂಲಕ ಜನರ ಏನೇ ಸಮಸ್ಯೆಗಳಿದ್ದರು ಅವಗಳನ್ನು ಸ್ವಿಕರಿಸಿ ಅವುಗಳನ್ನು ಪರಿಹರಿಸಲಾಗುವದು. ಅಲ್ಲದೇ ಈ ಕಾರ್ಯಕ್ರಮದ ಮೂಲಕ ಗ್ರಾಮದ ಎಸ್.ಸಿ ಹಾಗೂ ಎಸ್.ಟಿ ಕಾಲೋನಿಗಳ ಭೇಟಿ, ಅಂಗನವಾಡಿ ಕೇಂದ್ರಗಳ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಲಾಗುವುದು ಎಂದು ಹೇಳಿದರು.

ಜನರ ವೈಯಕ್ತಿಕ ಅಥವಾ ಸಾರ್ವಜನಿಕ ಏನೆ ಸಮಸ್ಯೆಗಳಿದ್ದರು ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಬಂದು ತಮ್ಮನ್ನು ಮುಕ್ತವಾಗಿ ಭೇಟಿ ಮಾಡಿ ಅಹವಾಲು ನೀಡಬಹುದು. ಇಲ್ಲಿನ ಸಮಸ್ಯೆಗಳನ್ನು ಇಲ್ಲಿಯೇ ಪರಿಹರಿಸುವ ಮಹತ್ವದ ಕೆಲಸ ಮಾಡಿ ಸಮಸ್ಯೆಗಳು ಬಗೆ ಹರಿಯದೆ ಇದ್ದರೆ ಅಂತಹ ಅರ್ಜಿಗಳನ್ನು ಸರಕಾರಕ್ಕೆ ತಲುಪಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಗ್ರಾ.ಪಂ ಅಧ್ಯಕ್ಷೆ ನಿರ್ಮಲಾ ಖಾನಪೇಠ ಅಧ್ಯಕ್ಷತೆ ವಹಿಸಿದ್ದರು. ಗ್ರಾಮದ ಮುಖಂಡ ಮಲ್ಲಿಕಾರ್ಜುನ ಕೊಪ್ಪದ, ಅಪರ ಜಿಲ್ಲಾಧಿಕಾರಿ ಅಶೋಕ ದುರಗುಂಟಿ, ಜಂಟಿ ಕೃಷಿ ನಿರ್ದೇಶಕ ಎಸ್.ಎಸ್. ಪಾಟೀಲ, ಡಿಎಚ್‌ಓ ಎಸ್.ವಿ. ಮುನ್ಯಾಳ, ತಾ.ಪಂ ಇಒ ಪ್ರವೀಣ ಸಾಲಿ, ಸರಕಾರಿ ನೌಕರ ಸಂಘದ ತಾಲೂಕಾಧ್ಯಕ್ಷ ರಮೇಶ ಅರಕೇರಿ, ಹೆಸ್ಕಾ ಎಇಇ ಕಿರಣ ಸಣ್ಣಕ್ಕಿ ಸೇರಿದಂತೆ ತಾಲೂಕಾ ಮಟ್ಟದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ತಹದಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಸ್ವಾಗತಿಸಿದರು. ಜಿ.ಎಂ. ಹುಲ್ಲೂರ ನಿರೂಪಿಸಿ, ವಂದಿಸಿದರು.

ಫಲಾನುಭವಿಗಳಿಗೆ ವಿವಿಧ ಯೋಜನೆಗಳ ನೀಡಿಕೆ: ಇಂದಿನ ಕಾರ್ಯಕ್ರಮದಲ್ಲಿ ಶಾಸಕ ಮಹಾದೇವಪ್ಪ ಯಾದವಾಡ ಹಾಗೂ ಜಿಲ್ಲಾಧಿಕಾರಿ ಡಾ| ಎಂ. ಜಿ. ಹಿರೇಮಠ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಒಗಿಸುವಲ್ಲಿ ಮುಂದಾದರು.

ಅದ್ದೂರಿ ಮೆರಣೆಗೆ:

ಸಾಲಹಳ್ಳಿ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ| ಎಂ.ಜಿ. ಹಿರೇಮಠ ಹಾಗೂ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿ, ತೆರೆದ ವಾಹನದ ಮೂಲಕ ಅನೆಯ ಮೆರವಣೆಗೆಯೊಂದಿಗೆ ಮಹಿಳೆಯರ ಕುಂಭ ಹಾಗೂ ವಿವಿಧ ವಾದ್ಯ ಮೇಳಗಳೊಂದಿಗೆ ಅದ್ದೂರಿಯಾಗಿ ವೇದಿಕೆಗೆ ಗ್ರಾಮಸ್ಥರು ಕರೆ ತರುವಲ್ಲಿ ಮುಂದಾದರು.

ಟಾಪ್ ನ್ಯೂಸ್

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕರಾಳ ದಿನಾಚರಣೆಗೆ ಅನುಮತಿ ನೀಡಬಾರದೆಂದು ಕರವೇ ಪ್ರತಿಭಟನೆ

Belagavi: ಕರಾಳ ದಿನಾಚರಣೆಗೆ ಅನುಮತಿ ನೀಡಬಾರದೆಂದು ಕರವೇ ಪ್ರತಿಭಟನೆ

9-belagavi

Belagavi: ಕ್ರಾಂತಿಯ ನೆಲ ಕಿತ್ತೂರಿನಲ್ಲಿ 200ನೇ ವಿಜಯೋತ್ಸವಕ್ಕೆ ಅದ್ಧೂರಿ ಚಾಲನೆ

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

POlice

Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ

complaint

Kasaragod: ಸಚಿತಾ ರೈ ವಿರುದ್ಧ ಇನ್ನೆರಡು ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.