ಉತ್ತರದಲ್ಲಿ ಮತದಾರರ ಒಲವು ಎತ್ತ?

ಬಿಜೆಪಿಗೆ ಮೋದಿ ಅಲೆ-ಹಿಂದುತ್ವದ ಬಲ •ಮುಸ್ಲಿಂ ಮತಗಳು ಕಾಂಗ್ರೆಸ್‌ಗೆ ಪ್ಲಸ್‌

Team Udayavani, May 1, 2019, 12:11 PM IST

BELEGAVI..02

ಬೆಳಗಾವಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಪೈಪೋಟಿಗೆ ಕಾರಣವಾಗಿದ್ದ ಉತ್ತರ ಮತಕ್ಷೇತ್ರದಲ್ಲಿ ಲೋಕಸಭೆಗೂ ಏಟು-ಏದಿರೇಟು ಜೋರಾಗಿ ಶುರುವಾಗಿದೆ. ತಮ್ಮ ಅಭ್ಯರ್ಥಿಗೆ ಎಷ್ಟೆಷ್ಟು ಮತಗಳು ಹೋಗಿರಬಹುದು ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಕಾರ್ಯರ್ತರು ಮುಳುಗಿದ್ದಾರೆ. ಬಿಜೆಪಿ ಹೆಚ್ಚಿನ ಮುನ್ನಡೆ ಸಾಧಿಸುವ ಉಮೇದು ಕಾರ್ಯಕರ್ತರಲ್ಲಿದೆ.

ಮಾಜಿ ಹಾಗೂ ಹಾಲಿ ಶಾಸಕರ ಪರಸ್ಪರ ಪ್ರತಿಷ್ಠೆಗೆ ಉತ್ತರ ಮತಕ್ಷೇತ್ರ ಉತ್ತರ ಕೊಡಲಿದೆಯೇ ಎಂದು ಎರಡೂ ಪಕ್ಷಗಳ ಕಾರ್ಯಕರ್ತರು ಭಾಗಾಕಾರ, ಗುಣಾಕಾರ ಲೆಕ್ಕ ಮಾಡುತ್ತಿದ್ದಾರೆ. ಬಹುಭಾಗ ನಗರ ಪ್ರದೇಶದ ವ್ಯಾಪ್ತಿ ಹೊಂದಿರುವ ಕ್ಷೇತ್ರದಲ್ಲಿ ಮತದಾನಕ್ಕಿಂತ ಮುಂಚೆಯಿಂದಲೂ ಲೆಕ್ಕ ಹಾಕುವುದರಲ್ಲಿಯೇ ಜನ ಮಗ್ನರಾಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಈ ಭಾಗಕ್ಕೆ ಚಿರಪರಿಚಿತ ಹೆಸರು. ಆದರೆ ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌. ಸಾಧುನವರ ಅಪರಿಚಿತರು. ಎರಡೂ ಪಕ್ಷಗಳ ಸಾಂಪ್ರದಾಯಿಕ ಮತಗಳ ಬಗ್ಗೆ ಲೆಕ್ಕ ಹಾಕುತ್ತ ಕುಳಿತಿರುವ ಅಭ್ಯರ್ಥಿಗಳು, ಇನ್ನುಳಿದ ಮತಗಳು ನಮ್ಮ ಪರ ವಾಲಿರಬಹುದು ಎಂದು ಅಂದಾಜಿಸಿದ್ದಾರೆ.

ಉತ್ತರ ಕ್ಷೇತ್ರದಲ್ಲಿ ಒಟ್ಟು 2,34,484 ಮತಗಳಿದ್ದು, ಈ ಸಲ ಶೇ. 61.68ರಷ್ಟು ಮತದಾನವಾಗಿದೆ. 74,466 ಪುರುಷರು ಹಾಗೂ 70,154 ಮಹಿಳೆಯರು ಹಾಗೂ ಎರಡು ಇತರೆ ಮತ ಸೇರಿ ಒಟ್ಟು 1,44,622 ಜನ ಹಕ್ಕು ಚಲಾಯಿಸಿದ್ದಾರೆ.ಫಿರೋಜ್ -ಬೆನಕೆ ಮಧ್ಯೆ ಹಣಾಹಣಿ: ಕಳೆದ ಲೋಕಸಭೆ ಚುನಾವಣೆಯಲ್ಲಿ ಮೂವರು ಅಭ್ಯರ್ಥಿಗಳಿದ್ದರು. ಬಿಜೆಪಿಯ ಅಂಗಡಿಗೆ ಕಾಂಗ್ರೆಸ್‌ನ ಲಕ್ಷ್ಮೀ ಹೆಬ್ಟಾಳಕರ ತೀವ್ರ ಪೈಪೋಟಿ ನೀಡಿದ್ದರು. ಈ ಸಲ ಇಬ್ಬರು ಅಭ್ಯರ್ಥಿಗಳ ಮಧ್ಯೆ ತೀವ್ರ ಹಣಾಹಣಿ ಇರುವುದರಿಂದ 50:50 ಪ್ರಮಾಣದಲ್ಲಿ ಮತ ವಿಂಗಡಣೆ ಆಗಬಹುದೇ ಎಂಬ ಅನುಮಾನವೂ ಇದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಫಿರೋಜ ಸೇ ಪ್ರಚಾರ ವೇಳೆ ಪಾಕಿಸ್ತಾನ ಜಿಂದಾಬಾದ್‌ ಎಂಬ ಘೋಷಣೆ ಕೂಗಿದ್ದಾರೆನ್ನಲಾದ ವಿಡಿಯೋ ವ್ಯಾಪಕವಾಗಿ ವೈರಲ್ ಆಗಿತ್ತು. ಇದುವೇ ಕಾಂಗ್ರೆಸ್‌ ಸೋಲಿಗೆ ಕಾರಣವೂ ಆಗಿತ್ತು. ಹ್ಯಾಟ್ರಿಕ್‌ ಗೆಲುವಿನ ಕನಸು ಕಂಡಿದ್ದ ಫಿರೋಜ್  ಬೆನಕೆ ಸೋಲಿನ ರುಚಿ ತೋರಿಸಿದ್ದಾರೆ.

ಮತದಾನಕ್ಕಿಂತ ಮೊದಲಿದ್ದ ಚುನಾವಣಾ ಕಾವು ಮತದಾನದ ನಂತರವೂ ಕಡಿಮೆ ಆಗಿಲ್ಲ. ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂಬ ಅಂತೆ-ಕಂತೆಗಳ ಲೆಕ್ಕಾಚಾರವೇ ನಗರದೆಲ್ಲೆಡೆ ಶುರುವಾಗಿದೆ. ಸಂಸದ ಸುರೇಶ ಅಂಗಡಿ ವಿರೋಧಿ ಅಲೆ ಉತ್ತರ ಕ್ಷೇತ್ರದಲ್ಲಿಯೂ ಇದೆ. ಆದರೆ ಅಂಗಡಿ ಬಗೆಗಿನ ಅಸಮಾಧಾನದಿಂದ ಮತ ವಿಭಜನೆ ಆಗುವುದು ಅನುಮಾನ. ಮೋದಿ ಅಲೆ ಇಲ್ಲಿಯೂ ಬೀಸಿದ್ದು, ಅಷ್ಟೊಂದು ಸುಲಭವಾಗಿ ಬಿಜೆಪಿ ಮತಗಳಿಕೆ ಪ್ರಮಾಣ ಕಡಿಮೆ ಆಗುವುದಿಲ್ಲ.

ಹಿಂದುತ್ವ ಅಜೆಂಡಾ ಶಕ್ತಿಶಾಲಿ: ಬಿಜೆಪಿ ಶಾಸಕ ಅನಿಲ ಬೆನಕೆ ಬಿಜೆಪಿ ಮತಗಳನ್ನು ಒಟ್ಟುಗೂಡಿಸಿಕೊಂಡಿದ್ದಾರೆ. ಹಿಂದುತ್ವ ಅಜೆಂಡಾ ಮೇಲೆಯೇ ಬಿಜೆಪಿಗೆ ಮತ ಕೊಡಿಸುವಲ್ಲಿ ಅವಿರತವಾಗಿ ಶ್ರಮಿಸಿದ್ದಾರೆ. ಲಿಂಗಾಯತ ಹಾಗೂ ಮರಾಠಾ ಸಮುದಾಯದ ಮತದಾರರನ್ನು ವಿಶ್ವಾಸಕ್ಕೆ ಪಡೆದುಕೊಂಡಿರುವ ಬೆನಕೆ, ಅಂಗಡಿಗೆ ಹೆಚ್ಚಿನ ಮತಗಳ ಅಂತರ ಕೊಡಿಸಲು ಶ್ರಮಿಸಿದ್ದಾರೆ. ಕ್ಷೇತ್ರದ ಮಹಾಂತೇಶ ನಗರ, ರಾಮತೀರ್ಥ ನಗರ, ಆಂಜನೇಯ ನಗರ, ಮಾಳಮಾರುತಿ ಪ್ರದೇಶಗಳಲ್ಲಿ ಹೆಚ್ಚಿನ ಮತದಾನವಾಗಿದ್ದು, ರಾಷ್ಟ್ರೀಯ ಸುರಕ್ಷತೆ ಹಾಗೂ ಮೋದಿ ಆಡಳಿತ ಮೆಚ್ಚಿ ಜನರು ಬಿಜೆಪಿಯತ್ತ ಹೆಚ್ಚಿನ ಒಲವು ತೋರಿಸಿದ್ದಾರೆ ಎಂಬುದು ಬಿಜೆಪಿ ಕಾರ್ಯಕರ್ತರ ಅಭಿಮತ.

ಮುಸ್ಲಿಂ ಮತಗಳೇ ಕೈಗೆ ಪ್ಲಸ್‌: ಸಾಧುನವರ ಹಾಗೂ ಅಂಗಡಿ ಒಂದೇ ಸಮುದಾಯಕ್ಕೆ ಸೇರಿದ್ದರಿಂದ ಲಿಂಗಾಯತ ಮತದಾರರು ಯಾರ ಕಡೆಗೆ ವಾಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗುತ್ತಿಲ್ಲ. ಮುಸ್ಲಿಂ ಸಮುದಾಯದ ಮತಗಳೂ ಹೆಚ್ಚಿನ ಪ್ರಮಾಣದಲ್ಲಿದ್ದು, ಕಾಂಗ್ರೆಸ್‌ಗೆ ಇದು ಪ್ಲಸ್‌ ಪಾಯಿಂಟ್. ಮಾಜಿ ಶಾಸಕ ಫಿರೋಜ್ ಶಾ ಮುಸ್ಲಿಂ ಸಮುದಾಯದ ಮತಗಳ ಮೇಲೆ ಹೆಚ್ಚು ಕೇಂದ್ರೀಕರಿಸಿದ್ದರು. ಮತ ಒಡೆದು ಹೋಗದಂತೆ ಎಚ್ಚರಿಕೆ ವಹಿಸಿ ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್‌ಗೆ ಸಿಗುವಂತೆ ಕಸರತ್ತು ನಡೆಸಿದ್ದರು.

ಒಂದೆಡೆ ಮೋದಿ ಅಲೆ, ಇನ್ನೊಂದೆಡೆ ಹಿಂದುತ್ವ ಅಜೆಂಡಾ ಮತಗಳು ಬಿಜೆಪಿಗೆ ವರದಾನವಾಗಲಿವೆ. ಕಳೆದ ಸಲಕ್ಕಿಂತಲೂ ಈ ಬಾರಿ ಅಂಗಡಿಗೆ ಮತಗಳ ಮುನ್ನಡೆ ಸಿಗಲು ಬೆನಕೆ ರಣತಂತ್ರ ಹೆಣೆದಿದ್ದು, ಮರಾಠಾ ಹಾಗೂ ಲಿಂಗಾಯತ ಮತಗಳು ವಿಭಜನೆ ಆಗದಂತೆ ನೋಡಿಕೊಂಡಿದ್ದಾರೆ.

 

ಉತ್ತರ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಪ್ರಚಾರಕ್ಕೆ ಬರಲೇ ಇಲ್ಲ. ಕೊನೆಯ ಕ್ಷಣದಲ್ಲಿ ಅವರಿಗೆ ಸೋಲಿನ ಭಯ ಕಾಡಿದೆ. ನಮ್ಮಲ್ಲಿ ಈ ಸಲ 30 ಸಾವಿರಕ್ಕೂ ಹೆಚ್ಚಿನ ಮತಗಳ ಮುನ್ನಡೆ ಬಿಜೆಪಿ ಆಗುವುದು ನಿಶ್ಚಿತ. ಬೂತ್‌ ಮಟ್ಟದಲ್ಲಿ ನಮ್ಮ ಸಂಘಟನೆ ಇರುವುದರಿಂದ ಜನರು ಮೋದಿ ಫ್ಯಾಕ್ಟರ್‌ ಹಾಗೂ ದೇಶದ ಹಿತದೃಷ್ಟಿಯಿಂದ ಬಿಜೆಪಿಗೆ ಮತದಾನ ಮಾಡಿದ್ದಾರೆ. –ಅನಿಲ ಬೆನಕೆ, ಶಾಸಕರು ಉತ್ತರ ಕ್ಷೇತ್ರ

•ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.