![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 16, 2023, 4:00 PM IST
ಚಿಕ್ಕೋಡಿ: ಕಸ ಕಡ್ಡಿಯಿಂದ ಹೂಳು ತುಂಬಿಕೊಂಡು ನೀರು ಸೋರಿಕೆಯಾಗುತ್ತಿದ್ದ ಚಿಕ್ಕೋಡಿ ಸಿಬಿಸಿ ಕಾಲುವೆ ಸದ್ಯ ಸಂಪೂರ್ಣ ದುರಸ್ತಿಗೊಂಡಿದೆ. ಇದರಿಂದ ಕೊನೆ ಹಳ್ಳಿಯ ತನಕ ನೀರು ತಲುಪುತ್ತದೆ ಎನ್ನುವ ಆಶಾಭಾವನೆ ರೈತರಲ್ಲಿ ಮೂಡಿದೆ. ಚಿಕ್ಕೋಡಿ ಸಿಬಿಸಿ ಕಾಲುವೆಯಲ್ಲಿ ಕಸ, ಕಡ್ಡಿ ಹಾಗೂ ಕಾಲುವೆಗೆ ಬರುವ ನೀರು ಸೋರಿಕೆಯಿಂದ ರೈತರಿಗೆ ಸಮರ್ಪಕ ನೀರು ತಲುಪುತ್ತಿರಲಿಲ್ಲ. ನೀರಾವರಿ ಇಲಾಖೆಗೆ ಹಲವು ಬಾರಿ ಮನವಿ ಮಾಡಿ ರೈತರು ಕೂಡ ಬೇಸತ್ತು ಹೋಗಿದ್ದರು. ಈಗ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ರೈತರ ಸಮಸ್ಯೆಗೆ ಸ್ಪಂದಿಸಿ ಸಿಬಿಸಿ 33 ಕಿ.ಮೀ ಕಾಲುವೆ ದುರಸ್ತಿಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಿದ್ದಾರೆ.
ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಹೃದಯ ಭಾಗದಲ್ಲಿ ಹಾದು ಹೋಗಿರುವ ಚಿಕ್ಕೋಡಿ ಬ್ರ್ಯಾಂಚ್ ಕೆನಾಲ್(ಸಿಬಿಸಿ ಕಾಲುವೆ)ಯಲ್ಲಿ ಕಸ, ಕಡ್ಡಿ ತುಂಬಿಕೊಂಡಿತ್ತು. ಅಲ್ಲಲ್ಲಿ ಕಾಲುವೆ ಶಿಥಿಲವಾಗಿ ನೀರು ಸೋರಿಕೆಯಾಗಿ ಹಳ್ಳ ಸೇರುತ್ತಿತ್ತು. ರೈತರ ಮನವಿಗೆ ಸ್ಪಂದಿಸಿದ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ನೀರಾವರಿ ಇಲಾಖೆಯಿಂದ 2.90 ಕೋಟಿ ರೂ ವಿಶೇಷ ಅನುದಾನ ಮಂಜೂರು ಮಾಡಿಸಿ 33 ಕಿ.ಮೀ ಕಾಲುವೆ ದುರಸ್ತಿ ಮಾಡಿಸಿದ್ದಾರೆ.
ಹಿಡಕಲ್ ಜಲಾಶಯ ನೀರು ಮತ್ತು ಕೃಷ್ಣಾ ನದಿ ನೀರು ಈ ಕಾಲುವೆಗೆ ಹರಿಯುವುದರಿಂದ ಸಿಬಿಸಿ ಕಾಲುವೆ ವ್ಯಾಪ್ತಿಯ ಬಸವನಾಳಗಡ್ಡೆ, ಕೇರೂರ, ಹಿರೇಕೊಡಿ, ಶಿರಗಾಂವ, ಶಿರಗಾಂವಾಡಿ, ತಪಕರವಾಡಿ, ನವಲಿಹಾಳ, ಸಂಕನವಾಡಿ, ಖಡಕಲಾಟ, ಚಿಕ್ಕಲವಾಳ, ನೇಜ ರೈತರಿಗೆ ಉಪಯೋಗವಾಗಲಿದೆ. ನರೇಗಾ ಯೋಜನೆಯಡಿ ಸಹ ಕಾಲುವೆ ದುರಸ್ತಿ ಕಾರ್ಯ ನಡೆದಿದೆ. ತಾಲೂಕಿನ ನೇಜ ಮತ್ತು ಹಿರೇಕೋಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1 ಕೋಟಿ ರೂ. ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.
ಕೃಷ್ಣಾ ನದಿಯ ಕಲ್ಲೋಳ ಹತ್ತಿರ ಜಾಕ್ವೆಲ್ದಿಂದ ನೀರನ್ನು ಎತ್ತಿ ಬಸವನಾಳಗಡ್ಡೆ ಹತ್ತಿರ ಸಿಬಿಸಿ ಕಾಲುವೆಗೆ ನೀರು ಬಿಡಲಾಗಿದೆ. ಅಲ್ಲಿಂದ ಕಾಲುವೆ ಕೊನೆ ಹಳ್ಳಿಗೆ ನೀರು ತಲುಪಿಸುವ ಪಣ ಹುಕ್ಕೇರಿ ಕುಟುಂಬದ್ದಾಗಿದೆ. ಈಗ ದುರಸ್ತಿಗೊಂಡಿರುವ ಕಾಲುವೆಗೆ ನೀರು ಸರಾಗವಾಗಿ ಹೋಗುತ್ತದೆ. ರೈತರ ಬೇಡಿಕೆ ಅನುಗುಣವಾಗಿ ನೀರು ಬಿಡುವ ಸಂಕಲ್ಪ ಗಣೇಶ ಹುಕ್ಕೇರಿ ಮಾಡಿರುವುದು ಗಡಿ ಭಾಗದ ರೈತರಿಗೆ ಭಾರಿ ಅನುಕೂಲವಾಗಲಿದೆ.
ಮಹಾದೇವ ಪೂಜೇರಿ
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.