Winter Assembly session ವಿಳಂಬ ಆರಂಭ: ಬೆಳಗಾವಿ ಕಲಾಪಕ್ಕೆ ಮೊದಲ ದಿನವೇ ಆರು ಸಚಿವರು ಗೈರು


Team Udayavani, Dec 5, 2023, 12:41 AM IST

Winter Assembly session ವಿಳಂಬ ಆರಂಭ: ಬೆಳಗಾವಿ ಕಲಾಪಕ್ಕೆ ಮೊದಲ ದಿನವೇ ಆರು ಸಚಿವರು ಗೈರು

ಬೆಳಗಾವಿ: ಕಾಂಗ್ರೆಸ್‌ ಸರಕಾರಕ್ಕೆ ಮೊದಲನೆ ಯದಾದ ಬೆಳಗಾವಿ ಅಧಿವೇಶನದ ಮೊದಲ ದಿನವೇ ಆರು ಸಚಿವರು ಗೈರು ಹಾಜರಾಗಿದ್ದರಿಂದ ವಿಧಾನ ಪರಿಷತ್ತಿನಲ್ಲಿ ಸಭಾಪತಿ ಸಿಟ್ಟಾದರು, ಅತ್ತ ವಿಧಾನಸಭೆಯಲ್ಲೂ ಕಲಾಪ ಒಂದು ತಾಸು ತಡವಾಗಿ ಆರಂಭವಾಯಿತು.

ಮೇಲ್ಮನೆಯಲ್ಲಿ ಸದನ ಆರಂಭವಾಗುತ್ತಿದ್ದಂತೆ ವಿವಿಧ ಕ್ಷೇತ್ರಗಳಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಇದರ ಬೆನ್ನಲ್ಲೇ ಪ್ರಶ್ನೋತ್ತರ ಅವಧಿ ಪ್ರಾರಂಭವಾಯಿತು. ಹಲವು ಸಚಿವರ ಪರವಾಗಿ ಸಭಾ ನಾಯಕರು ಮತ್ತು ಪ್ರಿಯಾಂಕ್‌ ಖರ್ಗೆ ಉತ್ತರಿಸಿದರು. ಕೆಲವು ಉಪ ಪ್ರಶ್ನೆಗಳಿಗೆ ಉತ್ತರ ಕೊಡುವ ಪ್ರಯತ್ನವನ್ನೂ ಮಾಡಿದರು. ಈ ಸಂದರ್ಭ ಕೆಲವು ಶಾಸಕರು ಸಂಬಂಧಪಟ್ಟ ಖಾತೆಗಳ ಸಚಿವರಿಂದಲೇ ವಿವರವಾದ ಉತ್ತರ ಬಯಸಿದರು.

ಆಗ, ಮೊದಲ ದಿನವೇ ಆರು ಸಚಿವರು ಗೈರುಹಾಜರಿದ್ದಾರೆ. ಎಲ್ಲರೂ ಪೂರ್ವನಿರ್ಧರಿತ ಕಾರ್ಯಕ್ರಮದ ಕಾರಣ ನೀಡಿದ್ದಾರೆ.

ಹೀಗಾದರೆ ನಾನು ಸದನ ನಡೆಸಬೇಕೋ ಬೇಡವೋ ನೀವೇ ಹೇಳಿ. ನಾಳೆಯಿಂದ ಇದು ನಡೆಯುವುದಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಖಾರವಾಗಿ ಹೇಳಿದರು. ದೀರ್ಘ‌ ಉತ್ತರ ಬಯಸಿದ್ದರಿಂದ ಕೆಲವು ಪ್ರಶ್ನೆಗಳನ್ನು ಅರ್ಧ ತಾಸು ಚರ್ಚೆಗೆ ಕೈಗೆತ್ತಿಕೊಳ್ಳಲು ಸದಸ್ಯರು ಮನವಿ ಮಾಡಿದರು. ಸಚಿವರಾದ ಕೆ.ಜೆ. ಜಾರ್ಜ್‌, ಡಾ| ಎಂ.ಸಿ. ಸುಧಾಕರ್‌, ಕೆ.ಎಚ್‌. ಮುನಿಯಪ್ಪ, ಡಾ| ಶರಣಪ್ರಕಾಶ ಪಾಟೀಲ ಗೈರುಹಾಜರಿದ್ದರು.

ವಿಧಾನಸಭೆ ಒಂದು ತಾಸು ವಿಳಂಬ ಆರಂಭ: ವಿಧಾನಸಭೆಯಲ್ಲಿ ನಿಗದಿತ ಸಮಯಕ್ಕಿಂತ ಒಂದು ತಾಸು ತಡವಾಗಿ ಕಲಾಪ ಆರಂಭವಾಗುತ್ತಿದ್ದಂತೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿಯ ಎಸ್‌. ಸುರೇಶ್‌ ಕುಮಾರ್‌, ಯಾವ ಕಾರಣಕ್ಕೆ ಕಲಾಪ ವಿಳಂಬವಾಗಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದರು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್‌ನ ಬಸವರಾಜ ರಾಯರೆಡ್ಡಿ, ಕಲಾಪ ನಿಯಮಗಳ ಪ್ರಕಾರ ಸದನವನ್ನು ಹೇಗೆ ಪ್ರಾರಂಭಿಸಬೇಕೆಂಬ ಬಗ್ಗೆ ನಿರ್ದಿಷ್ಟ ಪದ್ಧತಿ ಇದೆ. ಯಾರು ಬೇಕಾದರೂ ಬರಲಿ, ಬಿಡಲಿ; ನೀವು ಪೀಠದಲ್ಲಿ ಆಸೀನರಾಗಿ ಕಲಾಪ ಆರಂಭಿಸಿ. ಆಗ ಎಲ್ಲರೂ ಬರುತ್ತಾರೆ. ಇಲ್ಲವಾದರೆ ಬೆಳಗಾವಿ ಅಧಿವೇಶನ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ಬರುತ್ತಿರುವ ವರದಿಯನ್ನು ಜನರು ಒಪ್ಪಿಕೊಳ್ಳಬೇಕಾಗುತ್ತದೆ. ಇದಕ್ಕೆ ಆಸ್ಪದ ನೀಡಬೇಡಿ ಎಂದು ಸ್ಪೀಕರ್‌ ಖಾದರ್‌ ಅವರಿಗೆ ಮನವಿ ಮಾಡಿದರು.

ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಬಿಜೆಪಿಯ ಬಸನಗೌಡ ಪಾಟೀಲ್‌ ಯತ್ನಾಳ್‌, ಉತ್ತರ ಕರ್ನಾಟಕ ಭಾಗದ ಸಮಸ್ಯೆ ಹಾಗೂ ಉತ್ತರ ಕರ್ನಾಟಕದ ರಾಜಕೀಯ ನಾಯಕತ್ವವನ್ನು ಅವಗಣಿಸುತ್ತಿರುವ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡದೆ ಇದ್ದರೆ ಧರಣಿ ನಡೆಸುವುದಾಗಿ ಎಚ್ಚರಿಸಿದರು.

ಡಿ. 6ರಿಂದ ಉ.ಕ. ಸಮಸ್ಯೆಗಳ ಬಗ್ಗೆ ಚರ್ಚೆ: ಡಿ. 6ರಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದ ನೀರಾವರಿ ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ ಎಂದು ಸ್ಪೀಕರ್‌ ಯು.ಟಿ. ಖಾದರ್‌ ಪ್ರಕಟಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಅವಕಾಶ ಕೊಡಬೇಕೆಂದು ಅನೇಕ ಶಾಸಕರು ಬೇಡಿಕೆ ಇರಿಸಿದ್ದರು. ಇದಕ್ಕೆ ಸಹಮತ ವ್ಯಕ್ತವಾಗಿದ್ದು, ಎರಡು ದಿನಗಳ ಕಾಲ ಉತ್ತರ ಕರ್ನಾಟಕ ಭಾಗದ ಚರ್ಚೆಗೆ ಕಾಲಾವಕಾಶ ಒದಗಿಸಲು ವಿಧಾನಸಭೆ ಕಾರ್ಯಕಲಾಪಗಳ ಸಲಹಾ ಸಮಿತಿ (ಬಿಎಸಿ) ಸಭೆ ನಿರ್ಧರಿಸಿದೆ. ಸೋಮವಾರ ಭೋಜನ ವಿರಾಮದ ವೇಳೆಯಲ್ಲಿ ನಡೆದ ಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ ಚರ್ಚೆಗೆ ಅವಕಾಶ ಕೊಡುವುದು, ಮಸೂದೆಗಳನ್ನು ಮೊದಲ ವಾರದಲ್ಲೇ ಮಂಡಿಸಿ, ಎರಡನೇ ವಾರದಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು.

ಎಚ್ಚರ ವಹಿಸಬೇಕು
ಆಡಳಿತ ಪಕ್ಷದ ಮುಖ್ಯ ಸಚೇತಕರಾದರೂ ಈ ಬಗ್ಗೆ ಎಚ್ಚರ ವಹಿಸಬೇಕಲ್ಲವೇ ಎಂದು ಸಭಾಪತಿ ಹೊರಟ್ಟಿ ಪ್ರಶ್ನಿಸಿದರು. ಆಗ ಮುಖ್ಯ ಸಚೇತಕ ಸಲೀಂ ಅಹಮ್ಮದ್‌ “ಆನ್‌ ದಿ ವೇ’ ಎಂದು ಸಮಜಾಯಿಷಿ ನೀಡಲು ಮುಂದಾದರು. “ಯಾವ ಆನ್‌ ದಿ ವೇ ರೀ? ಸದನದ ಸಮಯ ಗೊತ್ತಿಲ್ಲವೇ? ನಾಳೆಯಿಂದ ಇದು ಪುನರಾವರ್ತನೆಯಾಗುವಂತಿಲ್ಲ’ ಎಂದು ಹೊರಟ್ಟಿಯವರು ಸ್ಪಷ್ಟ ಸೂಚನೆ ನೀಡಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.